Latest Updates
-
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ!
ಮದರ್ಸ್ ಡೇ, ಫಾದರ್ಸ್ ಡೇ ಮಧ್ಯೆ ಅನಾಥ ಪ್ರಜ್ಞೆ ನಮಗೆ ಬೇಕಾ?

ಹೀಗೆ ಕುಟುಂಬದಿಂದ ದೂರವಾಗಿ ಬೇಕಾದಷ್ಟು ಹಣ, ಕೀರ್ತಿ ಸಂಪಾದಿಸಿ ಬದುಕಿನ ಕೊನೆಯಲ್ಲಿ ನೆಮ್ಮದಿಗಾಗಿ ಅಧ್ಯಾತ್ಮದ ಮೊರೆ ಹೋಗುವ ವಿದೇಶಿಯರನ್ನು ಕಂಡೇ ಇರುತ್ತೇವೆ. ಅವರಿಗೆ ನಿಜವಾಗಿ ಬೇಕಿರುವುದು ಆಧ್ಯಾತ್ಮಿಕ ಶಾಂತಿಯಲ್ಲ.
ಸೂಕ್ತ ವಯಸ್ಸಿನಲ್ಲಿ ಸಿಗದ ಕೌಟುಂಬಿಕ ಪ್ರೀತಿ. ಅದನ್ನು ಅವರು ಬದುಕಿನುದ್ದಕ್ಕೂ ಅರಸಿ ಸೋತು ಕಡೆಯದಾಗಿ ಮಾನಸಿಕ ನೆಮ್ಮದಿಯತ್ತ ಹೊರಳಿರುತ್ತಾರೆ. ಅಂಥ ಅನಾಥ ಪ್ರಜ್ಞೆಯನ್ನು ಭಾರತೀಯರು ಕೈಯ್ಯಾರೆ ಬರಮಾಡಿಕೊಳ್ಳಬೇಕೇ?
ತಂದೆ ತಾಯಿಯೊಂದಿಗೆ ಬದುಕು ಪೂರ್ತಿ ಇರಲು ನಮ್ಮ ಸಮಾಜ ಸಮ್ಮತಿ ನೀಡಿದೆ. ಅಂಥದ್ದರಲ್ಲಿ ಪಾಶ್ಚಾತ್ಯ ಸಮಾಜವನ್ನು ಅನುಕರಿಸುವ ಅಗತ್ಯ ನಮಗೇಕೆ? ಅನುಕರಣೆಗಳಿಗೆ ಕಟ್ಟುಬಿದ್ದು ಸಂಬಂಧಗಳ ಸುಳಿಗಳಿಂದ ಹೊರಬರುವ ಪ್ರಯತ್ನದಲ್ಲಿ ಒಂಟಿಯಾಗುವತ್ತ ಹೊರಡುವ ಆತುರವೇಕೆ?
ಉದ್ಯೋಗದ ಅನಿವಾರ್ಯತೆಯಿಂದ ಕುಟುಂಬದಿಂದ ದೂರವಾಗುವವರು, ಅವಿಭಕ್ತ ಕುಟುಂಬದಿಂದ ಬೇರೆಯಾಗಿ ಗಂಡ-ಹೆಂಡತಿ ಇಬ್ಬರೇ ಬದುಕುವ ನಿರ್ಧಾರ ಮಾಡುವವರ ಸಂಖ್ಯೆ ಹೆಚ್ಚಿದಂತೆ ಅಂತರ್ಜಾತಿ ವಿವಾಹವಾದ ದಂಪತಿಗಳು ಸಂಬಂಧಿಗಳಿಂದ ದೂರವಾಗಿ ಬದುಕುವುದು ಅನಿವಾರ್ಯವಾಗಿದೆ. ಆದರೆ ಅವುಗಳ ನಡುವೆಯೇ ಸಂಬಂಧಗಳನ್ನು ನಿಭಾಯಿಸುವ ಮನಸ್ಸು ಮಾಡಬೇಕಿದೆ.



Click it and Unblock the Notifications