Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮದರ್ಸ್ ಡೇ, ಫಾದರ್ಸ್ ಡೇ ಮಧ್ಯೆ ಅನಾಥ ಪ್ರಜ್ಞೆ ನಮಗೆ ಬೇಕಾ?

ಹೀಗೆ ಕುಟುಂಬದಿಂದ ದೂರವಾಗಿ ಬೇಕಾದಷ್ಟು ಹಣ, ಕೀರ್ತಿ ಸಂಪಾದಿಸಿ ಬದುಕಿನ ಕೊನೆಯಲ್ಲಿ ನೆಮ್ಮದಿಗಾಗಿ ಅಧ್ಯಾತ್ಮದ ಮೊರೆ ಹೋಗುವ ವಿದೇಶಿಯರನ್ನು ಕಂಡೇ ಇರುತ್ತೇವೆ. ಅವರಿಗೆ ನಿಜವಾಗಿ ಬೇಕಿರುವುದು ಆಧ್ಯಾತ್ಮಿಕ ಶಾಂತಿಯಲ್ಲ.
ಸೂಕ್ತ ವಯಸ್ಸಿನಲ್ಲಿ ಸಿಗದ ಕೌಟುಂಬಿಕ ಪ್ರೀತಿ. ಅದನ್ನು ಅವರು ಬದುಕಿನುದ್ದಕ್ಕೂ ಅರಸಿ ಸೋತು ಕಡೆಯದಾಗಿ ಮಾನಸಿಕ ನೆಮ್ಮದಿಯತ್ತ ಹೊರಳಿರುತ್ತಾರೆ. ಅಂಥ ಅನಾಥ ಪ್ರಜ್ಞೆಯನ್ನು ಭಾರತೀಯರು ಕೈಯ್ಯಾರೆ ಬರಮಾಡಿಕೊಳ್ಳಬೇಕೇ?
ತಂದೆ ತಾಯಿಯೊಂದಿಗೆ ಬದುಕು ಪೂರ್ತಿ ಇರಲು ನಮ್ಮ ಸಮಾಜ ಸಮ್ಮತಿ ನೀಡಿದೆ. ಅಂಥದ್ದರಲ್ಲಿ ಪಾಶ್ಚಾತ್ಯ ಸಮಾಜವನ್ನು ಅನುಕರಿಸುವ ಅಗತ್ಯ ನಮಗೇಕೆ? ಅನುಕರಣೆಗಳಿಗೆ ಕಟ್ಟುಬಿದ್ದು ಸಂಬಂಧಗಳ ಸುಳಿಗಳಿಂದ ಹೊರಬರುವ ಪ್ರಯತ್ನದಲ್ಲಿ ಒಂಟಿಯಾಗುವತ್ತ ಹೊರಡುವ ಆತುರವೇಕೆ?
ಉದ್ಯೋಗದ ಅನಿವಾರ್ಯತೆಯಿಂದ ಕುಟುಂಬದಿಂದ ದೂರವಾಗುವವರು, ಅವಿಭಕ್ತ ಕುಟುಂಬದಿಂದ ಬೇರೆಯಾಗಿ ಗಂಡ-ಹೆಂಡತಿ ಇಬ್ಬರೇ ಬದುಕುವ ನಿರ್ಧಾರ ಮಾಡುವವರ ಸಂಖ್ಯೆ ಹೆಚ್ಚಿದಂತೆ ಅಂತರ್ಜಾತಿ ವಿವಾಹವಾದ ದಂಪತಿಗಳು ಸಂಬಂಧಿಗಳಿಂದ ದೂರವಾಗಿ ಬದುಕುವುದು ಅನಿವಾರ್ಯವಾಗಿದೆ. ಆದರೆ ಅವುಗಳ ನಡುವೆಯೇ ಸಂಬಂಧಗಳನ್ನು ನಿಭಾಯಿಸುವ ಮನಸ್ಸು ಮಾಡಬೇಕಿದೆ.



Click it and Unblock the Notifications