Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಮದರ್ಸ್ ಡೇ, ಫಾದರ್ಸ್ ಡೇ ಮಧ್ಯೆ ಅನಾಥ ಪ್ರಜ್ಞೆ ನಮಗೆ ಬೇಕಾ?

ಹೀಗೆ ಕುಟುಂಬದಿಂದ ದೂರವಾಗಿ ಬೇಕಾದಷ್ಟು ಹಣ, ಕೀರ್ತಿ ಸಂಪಾದಿಸಿ ಬದುಕಿನ ಕೊನೆಯಲ್ಲಿ ನೆಮ್ಮದಿಗಾಗಿ ಅಧ್ಯಾತ್ಮದ ಮೊರೆ ಹೋಗುವ ವಿದೇಶಿಯರನ್ನು ಕಂಡೇ ಇರುತ್ತೇವೆ. ಅವರಿಗೆ ನಿಜವಾಗಿ ಬೇಕಿರುವುದು ಆಧ್ಯಾತ್ಮಿಕ ಶಾಂತಿಯಲ್ಲ.
ಸೂಕ್ತ ವಯಸ್ಸಿನಲ್ಲಿ ಸಿಗದ ಕೌಟುಂಬಿಕ ಪ್ರೀತಿ. ಅದನ್ನು ಅವರು ಬದುಕಿನುದ್ದಕ್ಕೂ ಅರಸಿ ಸೋತು ಕಡೆಯದಾಗಿ ಮಾನಸಿಕ ನೆಮ್ಮದಿಯತ್ತ ಹೊರಳಿರುತ್ತಾರೆ. ಅಂಥ ಅನಾಥ ಪ್ರಜ್ಞೆಯನ್ನು ಭಾರತೀಯರು ಕೈಯ್ಯಾರೆ ಬರಮಾಡಿಕೊಳ್ಳಬೇಕೇ?
ತಂದೆ ತಾಯಿಯೊಂದಿಗೆ ಬದುಕು ಪೂರ್ತಿ ಇರಲು ನಮ್ಮ ಸಮಾಜ ಸಮ್ಮತಿ ನೀಡಿದೆ. ಅಂಥದ್ದರಲ್ಲಿ ಪಾಶ್ಚಾತ್ಯ ಸಮಾಜವನ್ನು ಅನುಕರಿಸುವ ಅಗತ್ಯ ನಮಗೇಕೆ? ಅನುಕರಣೆಗಳಿಗೆ ಕಟ್ಟುಬಿದ್ದು ಸಂಬಂಧಗಳ ಸುಳಿಗಳಿಂದ ಹೊರಬರುವ ಪ್ರಯತ್ನದಲ್ಲಿ ಒಂಟಿಯಾಗುವತ್ತ ಹೊರಡುವ ಆತುರವೇಕೆ?
ಉದ್ಯೋಗದ ಅನಿವಾರ್ಯತೆಯಿಂದ ಕುಟುಂಬದಿಂದ ದೂರವಾಗುವವರು, ಅವಿಭಕ್ತ ಕುಟುಂಬದಿಂದ ಬೇರೆಯಾಗಿ ಗಂಡ-ಹೆಂಡತಿ ಇಬ್ಬರೇ ಬದುಕುವ ನಿರ್ಧಾರ ಮಾಡುವವರ ಸಂಖ್ಯೆ ಹೆಚ್ಚಿದಂತೆ ಅಂತರ್ಜಾತಿ ವಿವಾಹವಾದ ದಂಪತಿಗಳು ಸಂಬಂಧಿಗಳಿಂದ ದೂರವಾಗಿ ಬದುಕುವುದು ಅನಿವಾರ್ಯವಾಗಿದೆ. ಆದರೆ ಅವುಗಳ ನಡುವೆಯೇ ಸಂಬಂಧಗಳನ್ನು ನಿಭಾಯಿಸುವ ಮನಸ್ಸು ಮಾಡಬೇಕಿದೆ.



Click it and Unblock the Notifications