Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಗುರೂಜಿ ಪ್ರವಚನಕ್ಕೆ ತಲೆಬಾಗುವ ಮುನ್ನ ಇದನ್ನು ಓದಿ

ಜ್ವರ ಬಂದು ಮಲಗಿದ್ದರೂ ಅಮ್ಮ, ಮಕ್ಕಳು ಹಸಿದಿರುತ್ತಾರೆ ಎಂಬ ಕಾಳಜಿಯಿಂದ ಅಡುಗೆ ಮಾಡುವುದು, ಮಕ್ಕಳ ಮುಂದಿನ ಭವಿಷ್ಯಕ್ಕೆ ಹಣ ಕೂಡಿಡಲು ಅಪ್ಪ ಆಫೀಸಿಗೆ ನಡೆದೇ ಹೋಗುವುದು, ತಮ್ಮನ ಪರೀಕ್ಷೆಗೆ ತೊಂದರೆಯಾಗುತ್ತದೆ ಎಂದು ಅಣ್ಣ ತನ್ನ ಸಂಗೀತದ ತಾಲೀಮನ್ನು ಮುಂದೂಡುವುದು, ಅಕ್ಕನಿಗೆ ಇಷ್ಟವಾದ ಜಿಲೇಬಿ ಮಾಡಲು ತಂಗಿ ತನ್ನಿಡೀ ದಿನ ಕಳೆಯುವುದು ತ್ಯಾಗ ಅಥವಾ ಕಾಳಜಿ ಎನಿಸಿಕೊಳ್ಳದೇ 'ಟೈಂ ವೇಸ್ಟ್' ಎನಿಸಿಕೊಂಡಿದೆ.
ಕೈ ತುಂಬಾ ದುಡಿದರೂ ಹೊಟ್ಟೆ ತುಂಬಾ ನೆಮ್ಮದಿಯಾಗಿ ತಿನ್ನದ ಜೀವನವನ್ನೇ ಕ್ರಿಯಾಶೀಲತೆ, ವೃತ್ತಿಪರತೆ ಎಂದೆಲ್ಲಾ ಹೊಗಳಿಕೊಂಡು ಬದುಕುವ ಮನಸ್ಸುಗಳು ಬೆಳೆಯುತ್ತಿವೆ. ಯಾವ ಕೆಲಸದಿಂದ ಆರ್ಥಿಕವಾಗಿ ಲಾಭ ಇಲ್ಲವೋ ಅದು ಕೆಲಸವೇ ಅಲ್ಲ ಎಂಬ ಇವರ ಯೋಚನೆಯಂತೂ ಅಸಹ್ಯ ಹುಟ್ಟಿಸುತ್ತದೆ.
ಸಂಬಂಧ, ವಿದ್ಯೆ, ಬದುಕನ್ನು ಆರ್ಥಿಕ ದೃಷ್ಟಿಕೋನದಿಂದ ನೋಡಲು ಆರಂಭಿಸಿರುವ ಯುವಜನರು ಈ ದಾರಿಯಲ್ಲಿ ತುಂಬಾ ದೂರ ಹೋಗುವ ಮೊದಲೇ ಶೈಕ್ಷಣಿಕವಾಗಿ ಅವರನ್ನು ಸರಿದಾರಿಗೆ ತರಬೇಕಿದೆ.
ಆಧುನಿಕ ಜಗತ್ತಿಗೆ ತೆರೆದುಕೊಂಡಂತೆಲ್ಲಾ ಮನಸ್ಸು ಕಟುವಾಸ್ತವವನ್ನು ಯೋಚಿಸುವುದು ಸಹಜ. ಅಲ್ಲಿ ಭಾವನೆಗಳಿಗೆ ಜಾಗ ಕಡಿಮೆ. ಭಾವನೆಗಳೇ ಇಲ್ಲದೇ ಹೋದರೆ ಸಂತಸಕ್ಕೆ ಎಡೆ ಇರುವುದಿಲ್ಲ. ಅದರಿಂದ ಅನುಕರಿಸುವ ಗೋಜಿನಿಂದ ಹೊರಬಂದು ಸಹಜ ಭಾವನೆಗಳನ್ನು ಸ್ಥಾಪಿಸಿಕೊಳ್ಳುವತ್ತ ಮನಸ್ಸು ಹರಿಸಬೇಕಿದೆ.



Click it and Unblock the Notifications