Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗುರೂಜಿ ಪ್ರವಚನಕ್ಕೆ ತಲೆಬಾಗುವ ಮುನ್ನ ಇದನ್ನು ಓದಿ

ಜ್ವರ ಬಂದು ಮಲಗಿದ್ದರೂ ಅಮ್ಮ, ಮಕ್ಕಳು ಹಸಿದಿರುತ್ತಾರೆ ಎಂಬ ಕಾಳಜಿಯಿಂದ ಅಡುಗೆ ಮಾಡುವುದು, ಮಕ್ಕಳ ಮುಂದಿನ ಭವಿಷ್ಯಕ್ಕೆ ಹಣ ಕೂಡಿಡಲು ಅಪ್ಪ ಆಫೀಸಿಗೆ ನಡೆದೇ ಹೋಗುವುದು, ತಮ್ಮನ ಪರೀಕ್ಷೆಗೆ ತೊಂದರೆಯಾಗುತ್ತದೆ ಎಂದು ಅಣ್ಣ ತನ್ನ ಸಂಗೀತದ ತಾಲೀಮನ್ನು ಮುಂದೂಡುವುದು, ಅಕ್ಕನಿಗೆ ಇಷ್ಟವಾದ ಜಿಲೇಬಿ ಮಾಡಲು ತಂಗಿ ತನ್ನಿಡೀ ದಿನ ಕಳೆಯುವುದು ತ್ಯಾಗ ಅಥವಾ ಕಾಳಜಿ ಎನಿಸಿಕೊಳ್ಳದೇ 'ಟೈಂ ವೇಸ್ಟ್' ಎನಿಸಿಕೊಂಡಿದೆ.
ಕೈ ತುಂಬಾ ದುಡಿದರೂ ಹೊಟ್ಟೆ ತುಂಬಾ ನೆಮ್ಮದಿಯಾಗಿ ತಿನ್ನದ ಜೀವನವನ್ನೇ ಕ್ರಿಯಾಶೀಲತೆ, ವೃತ್ತಿಪರತೆ ಎಂದೆಲ್ಲಾ ಹೊಗಳಿಕೊಂಡು ಬದುಕುವ ಮನಸ್ಸುಗಳು ಬೆಳೆಯುತ್ತಿವೆ. ಯಾವ ಕೆಲಸದಿಂದ ಆರ್ಥಿಕವಾಗಿ ಲಾಭ ಇಲ್ಲವೋ ಅದು ಕೆಲಸವೇ ಅಲ್ಲ ಎಂಬ ಇವರ ಯೋಚನೆಯಂತೂ ಅಸಹ್ಯ ಹುಟ್ಟಿಸುತ್ತದೆ.
ಸಂಬಂಧ, ವಿದ್ಯೆ, ಬದುಕನ್ನು ಆರ್ಥಿಕ ದೃಷ್ಟಿಕೋನದಿಂದ ನೋಡಲು ಆರಂಭಿಸಿರುವ ಯುವಜನರು ಈ ದಾರಿಯಲ್ಲಿ ತುಂಬಾ ದೂರ ಹೋಗುವ ಮೊದಲೇ ಶೈಕ್ಷಣಿಕವಾಗಿ ಅವರನ್ನು ಸರಿದಾರಿಗೆ ತರಬೇಕಿದೆ.
ಆಧುನಿಕ ಜಗತ್ತಿಗೆ ತೆರೆದುಕೊಂಡಂತೆಲ್ಲಾ ಮನಸ್ಸು ಕಟುವಾಸ್ತವವನ್ನು ಯೋಚಿಸುವುದು ಸಹಜ. ಅಲ್ಲಿ ಭಾವನೆಗಳಿಗೆ ಜಾಗ ಕಡಿಮೆ. ಭಾವನೆಗಳೇ ಇಲ್ಲದೇ ಹೋದರೆ ಸಂತಸಕ್ಕೆ ಎಡೆ ಇರುವುದಿಲ್ಲ. ಅದರಿಂದ ಅನುಕರಿಸುವ ಗೋಜಿನಿಂದ ಹೊರಬಂದು ಸಹಜ ಭಾವನೆಗಳನ್ನು ಸ್ಥಾಪಿಸಿಕೊಳ್ಳುವತ್ತ ಮನಸ್ಸು ಹರಿಸಬೇಕಿದೆ.



Click it and Unblock the Notifications