Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಗುರೂಜಿ ಪ್ರವಚನಕ್ಕೆ ತಲೆಬಾಗುವ ಮುನ್ನ ಇದನ್ನು ಓದಿ

ಜ್ವರ ಬಂದು ಮಲಗಿದ್ದರೂ ಅಮ್ಮ, ಮಕ್ಕಳು ಹಸಿದಿರುತ್ತಾರೆ ಎಂಬ ಕಾಳಜಿಯಿಂದ ಅಡುಗೆ ಮಾಡುವುದು, ಮಕ್ಕಳ ಮುಂದಿನ ಭವಿಷ್ಯಕ್ಕೆ ಹಣ ಕೂಡಿಡಲು ಅಪ್ಪ ಆಫೀಸಿಗೆ ನಡೆದೇ ಹೋಗುವುದು, ತಮ್ಮನ ಪರೀಕ್ಷೆಗೆ ತೊಂದರೆಯಾಗುತ್ತದೆ ಎಂದು ಅಣ್ಣ ತನ್ನ ಸಂಗೀತದ ತಾಲೀಮನ್ನು ಮುಂದೂಡುವುದು, ಅಕ್ಕನಿಗೆ ಇಷ್ಟವಾದ ಜಿಲೇಬಿ ಮಾಡಲು ತಂಗಿ ತನ್ನಿಡೀ ದಿನ ಕಳೆಯುವುದು ತ್ಯಾಗ ಅಥವಾ ಕಾಳಜಿ ಎನಿಸಿಕೊಳ್ಳದೇ 'ಟೈಂ ವೇಸ್ಟ್' ಎನಿಸಿಕೊಂಡಿದೆ.
ಕೈ ತುಂಬಾ ದುಡಿದರೂ ಹೊಟ್ಟೆ ತುಂಬಾ ನೆಮ್ಮದಿಯಾಗಿ ತಿನ್ನದ ಜೀವನವನ್ನೇ ಕ್ರಿಯಾಶೀಲತೆ, ವೃತ್ತಿಪರತೆ ಎಂದೆಲ್ಲಾ ಹೊಗಳಿಕೊಂಡು ಬದುಕುವ ಮನಸ್ಸುಗಳು ಬೆಳೆಯುತ್ತಿವೆ. ಯಾವ ಕೆಲಸದಿಂದ ಆರ್ಥಿಕವಾಗಿ ಲಾಭ ಇಲ್ಲವೋ ಅದು ಕೆಲಸವೇ ಅಲ್ಲ ಎಂಬ ಇವರ ಯೋಚನೆಯಂತೂ ಅಸಹ್ಯ ಹುಟ್ಟಿಸುತ್ತದೆ.
ಸಂಬಂಧ, ವಿದ್ಯೆ, ಬದುಕನ್ನು ಆರ್ಥಿಕ ದೃಷ್ಟಿಕೋನದಿಂದ ನೋಡಲು ಆರಂಭಿಸಿರುವ ಯುವಜನರು ಈ ದಾರಿಯಲ್ಲಿ ತುಂಬಾ ದೂರ ಹೋಗುವ ಮೊದಲೇ ಶೈಕ್ಷಣಿಕವಾಗಿ ಅವರನ್ನು ಸರಿದಾರಿಗೆ ತರಬೇಕಿದೆ.
ಆಧುನಿಕ ಜಗತ್ತಿಗೆ ತೆರೆದುಕೊಂಡಂತೆಲ್ಲಾ ಮನಸ್ಸು ಕಟುವಾಸ್ತವವನ್ನು ಯೋಚಿಸುವುದು ಸಹಜ. ಅಲ್ಲಿ ಭಾವನೆಗಳಿಗೆ ಜಾಗ ಕಡಿಮೆ. ಭಾವನೆಗಳೇ ಇಲ್ಲದೇ ಹೋದರೆ ಸಂತಸಕ್ಕೆ ಎಡೆ ಇರುವುದಿಲ್ಲ. ಅದರಿಂದ ಅನುಕರಿಸುವ ಗೋಜಿನಿಂದ ಹೊರಬಂದು ಸಹಜ ಭಾವನೆಗಳನ್ನು ಸ್ಥಾಪಿಸಿಕೊಳ್ಳುವತ್ತ ಮನಸ್ಸು ಹರಿಸಬೇಕಿದೆ.



Click it and Unblock the Notifications