Latest Updates
-
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್
ಗುರೂಜಿ ಪ್ರವಚನಕ್ಕೆ ತಲೆಬಾಗುವ ಮುನ್ನ ಇದನ್ನು ಓದಿ

ಜ್ವರ ಬಂದು ಮಲಗಿದ್ದರೂ ಅಮ್ಮ, ಮಕ್ಕಳು ಹಸಿದಿರುತ್ತಾರೆ ಎಂಬ ಕಾಳಜಿಯಿಂದ ಅಡುಗೆ ಮಾಡುವುದು, ಮಕ್ಕಳ ಮುಂದಿನ ಭವಿಷ್ಯಕ್ಕೆ ಹಣ ಕೂಡಿಡಲು ಅಪ್ಪ ಆಫೀಸಿಗೆ ನಡೆದೇ ಹೋಗುವುದು, ತಮ್ಮನ ಪರೀಕ್ಷೆಗೆ ತೊಂದರೆಯಾಗುತ್ತದೆ ಎಂದು ಅಣ್ಣ ತನ್ನ ಸಂಗೀತದ ತಾಲೀಮನ್ನು ಮುಂದೂಡುವುದು, ಅಕ್ಕನಿಗೆ ಇಷ್ಟವಾದ ಜಿಲೇಬಿ ಮಾಡಲು ತಂಗಿ ತನ್ನಿಡೀ ದಿನ ಕಳೆಯುವುದು ತ್ಯಾಗ ಅಥವಾ ಕಾಳಜಿ ಎನಿಸಿಕೊಳ್ಳದೇ 'ಟೈಂ ವೇಸ್ಟ್' ಎನಿಸಿಕೊಂಡಿದೆ.
ಕೈ ತುಂಬಾ ದುಡಿದರೂ ಹೊಟ್ಟೆ ತುಂಬಾ ನೆಮ್ಮದಿಯಾಗಿ ತಿನ್ನದ ಜೀವನವನ್ನೇ ಕ್ರಿಯಾಶೀಲತೆ, ವೃತ್ತಿಪರತೆ ಎಂದೆಲ್ಲಾ ಹೊಗಳಿಕೊಂಡು ಬದುಕುವ ಮನಸ್ಸುಗಳು ಬೆಳೆಯುತ್ತಿವೆ. ಯಾವ ಕೆಲಸದಿಂದ ಆರ್ಥಿಕವಾಗಿ ಲಾಭ ಇಲ್ಲವೋ ಅದು ಕೆಲಸವೇ ಅಲ್ಲ ಎಂಬ ಇವರ ಯೋಚನೆಯಂತೂ ಅಸಹ್ಯ ಹುಟ್ಟಿಸುತ್ತದೆ.
ಸಂಬಂಧ, ವಿದ್ಯೆ, ಬದುಕನ್ನು ಆರ್ಥಿಕ ದೃಷ್ಟಿಕೋನದಿಂದ ನೋಡಲು ಆರಂಭಿಸಿರುವ ಯುವಜನರು ಈ ದಾರಿಯಲ್ಲಿ ತುಂಬಾ ದೂರ ಹೋಗುವ ಮೊದಲೇ ಶೈಕ್ಷಣಿಕವಾಗಿ ಅವರನ್ನು ಸರಿದಾರಿಗೆ ತರಬೇಕಿದೆ.
ಆಧುನಿಕ ಜಗತ್ತಿಗೆ ತೆರೆದುಕೊಂಡಂತೆಲ್ಲಾ ಮನಸ್ಸು ಕಟುವಾಸ್ತವವನ್ನು ಯೋಚಿಸುವುದು ಸಹಜ. ಅಲ್ಲಿ ಭಾವನೆಗಳಿಗೆ ಜಾಗ ಕಡಿಮೆ. ಭಾವನೆಗಳೇ ಇಲ್ಲದೇ ಹೋದರೆ ಸಂತಸಕ್ಕೆ ಎಡೆ ಇರುವುದಿಲ್ಲ. ಅದರಿಂದ ಅನುಕರಿಸುವ ಗೋಜಿನಿಂದ ಹೊರಬಂದು ಸಹಜ ಭಾವನೆಗಳನ್ನು ಸ್ಥಾಪಿಸಿಕೊಳ್ಳುವತ್ತ ಮನಸ್ಸು ಹರಿಸಬೇಕಿದೆ.



Click it and Unblock the Notifications