Latest Updates
-
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಭ್ರಷ್ಟರು ಗುಡ್ಡ ಅಗೆದು ಬೆಟ್ಟದಷ್ಟು ದುಡ್ಡು ಮಾಡಿದರು, ಹೆಗ್ಡೆ ನೀವು ...

ಇನ್ನೂ ಆಶ್ಚರ್ಯಕರ ಸಂಗತಿ ಹೇಳ್ಲಾ. ಈ ಹಣ ನೀಡಿರುವುದು ಸೌತ್ ವೆಸ್ಟ್ ಮೈನಿಂಗ್ ಕಂಪನಿ. ನೀವೂ ಒಂದು ವಿಷ್ಯ ತಿಳಿಕೊಳ್ಳಿ. ಇಡೀ ರಾಜ್ಯದ ಜನತೆಗೆ ಗೊತ್ತಿರುವ ಸಂಗತಿಯೆಂದರೆ ಬಳ್ಳಾರಿ ರೆಡ್ಡಿ ಸೋದರರು ಮುಖ್ಯಮಂತ್ರಿ ಯಡಿಯೂರಪ್ಪಗೆ ತುಂಬಾ ಹತ್ತಿರವಾಗಿದ್ದುಕೊಂಡು ಗಣಿಗಳಿಂದ ಸಾವಿರಾರು ಕೋಟಿ ಬಾಚಿದರು ಎಂಬುದು.
ಈ ಪ್ರಕ್ರಿಯೆಯಲ್ಲಿ ಯಡಿಯೂರಪ್ಪಗೆ ಕೋಟ್ಯಂತರ ರುಪಾಯಿ ಸಂದಾಯವಾಗಿದೆ ಎಂಬುದರಲ್ಲಿ ರಾಜ್ಯದ ಜನತೆಗೆ ಯಾವುದೇ ಅನುಮಾನವಿಲ್ಲ. ಆದರೆ ಅದೇನದು ನಿಮ್ಮ ವರದಿ. ಅದರಲ್ಲೆಲ್ಲೂ ರೆಡ್ಡಿ ಸೋದರರ ಗಣಿ ಋಣ ಸಂದಾಯದ (ಯಡಿಯೂರಪ್ಪಗೆ) ಬಗ್ಗೆ ಪ್ರಸ್ತಾಪವೇ ಇಲ್ಲ. ಯಸ್ ಯಡ್ಡಿಗೆ ರೆಡ್ಡಿಗಳಿಂದ ಎಷ್ಟು ಕೋಟಿ ಸಂದಾಯವಾಗಿದೆ ಎಂದು ಯಾಕೆ ರುಜುವಾತುಪಡಿಸಿಲ್ಲ. ಇದನ್ನು ರಾಜ್ಯದ ಜನತೆ ಮುಂದಿಡಲು ಯಾಕೆ ವಿಫಲರಾದಿರಿ?
ಅದೂ ಚೆಕ್ ಮೂಲಕ ಸಂದಾಯವಾಗಿರುವುದನ್ನು ನೀವು ದೊಡ್ಡದಾಗಿ ಎತ್ತಿಹಿಡಿದಿದ್ದೀರಿ. ಇದನ್ನು ಯಾವುದೇ ಒಬ್ಬ ಸಾಧಾರಣ ಪೊಲೀಸ್ ಅಧಿಕಾರಿಯೂ ಪತ್ತೆ ಹಚ್ಚಬಹುದಿತ್ತು, ನೀವೇ ಬೇಕು ಅಂತೇನಿಲ್ಲ. ಗುರುಗಳೇ, ನಿಮ್ಮ ವರದಿಯ ಬಗ್ಗೆ ನಾವೆಲ್ಲ ಇಟ್ಟುಕೊಂಡಿದ್ದ ನಿರೀಕ್ಷೆಗಳೆಲ್ಲ ಠುಸ್ ಎಂದಿವೆ. ಹಾಡಿದ್ದೇ ಹಾಡೋ...ಎಂಬಂತೆ ಬುಧವಾರದ ಪತ್ರಿಕಾಗೋಷ್ಠಿಯಲ್ಲೂ ಅದೇ ಸೋರಿಕೆ ಮಾಹಿತಿಯನ್ನು ನೀಡಿ, ಕೃತಾರ್ಥರಾಗಿದ್ದೀರಿ.



Click it and Unblock the Notifications