Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ!
ಭ್ರಷ್ಟರು ಗುಡ್ಡ ಅಗೆದು ಬೆಟ್ಟದಷ್ಟು ದುಡ್ಡು ಮಾಡಿದರು, ಹೆಗ್ಡೆ ನೀವು ...

ಇನ್ನೂ ಆಶ್ಚರ್ಯಕರ ಸಂಗತಿ ಹೇಳ್ಲಾ. ಈ ಹಣ ನೀಡಿರುವುದು ಸೌತ್ ವೆಸ್ಟ್ ಮೈನಿಂಗ್ ಕಂಪನಿ. ನೀವೂ ಒಂದು ವಿಷ್ಯ ತಿಳಿಕೊಳ್ಳಿ. ಇಡೀ ರಾಜ್ಯದ ಜನತೆಗೆ ಗೊತ್ತಿರುವ ಸಂಗತಿಯೆಂದರೆ ಬಳ್ಳಾರಿ ರೆಡ್ಡಿ ಸೋದರರು ಮುಖ್ಯಮಂತ್ರಿ ಯಡಿಯೂರಪ್ಪಗೆ ತುಂಬಾ ಹತ್ತಿರವಾಗಿದ್ದುಕೊಂಡು ಗಣಿಗಳಿಂದ ಸಾವಿರಾರು ಕೋಟಿ ಬಾಚಿದರು ಎಂಬುದು.
ಈ ಪ್ರಕ್ರಿಯೆಯಲ್ಲಿ ಯಡಿಯೂರಪ್ಪಗೆ ಕೋಟ್ಯಂತರ ರುಪಾಯಿ ಸಂದಾಯವಾಗಿದೆ ಎಂಬುದರಲ್ಲಿ ರಾಜ್ಯದ ಜನತೆಗೆ ಯಾವುದೇ ಅನುಮಾನವಿಲ್ಲ. ಆದರೆ ಅದೇನದು ನಿಮ್ಮ ವರದಿ. ಅದರಲ್ಲೆಲ್ಲೂ ರೆಡ್ಡಿ ಸೋದರರ ಗಣಿ ಋಣ ಸಂದಾಯದ (ಯಡಿಯೂರಪ್ಪಗೆ) ಬಗ್ಗೆ ಪ್ರಸ್ತಾಪವೇ ಇಲ್ಲ. ಯಸ್ ಯಡ್ಡಿಗೆ ರೆಡ್ಡಿಗಳಿಂದ ಎಷ್ಟು ಕೋಟಿ ಸಂದಾಯವಾಗಿದೆ ಎಂದು ಯಾಕೆ ರುಜುವಾತುಪಡಿಸಿಲ್ಲ. ಇದನ್ನು ರಾಜ್ಯದ ಜನತೆ ಮುಂದಿಡಲು ಯಾಕೆ ವಿಫಲರಾದಿರಿ?
ಅದೂ ಚೆಕ್ ಮೂಲಕ ಸಂದಾಯವಾಗಿರುವುದನ್ನು ನೀವು ದೊಡ್ಡದಾಗಿ ಎತ್ತಿಹಿಡಿದಿದ್ದೀರಿ. ಇದನ್ನು ಯಾವುದೇ ಒಬ್ಬ ಸಾಧಾರಣ ಪೊಲೀಸ್ ಅಧಿಕಾರಿಯೂ ಪತ್ತೆ ಹಚ್ಚಬಹುದಿತ್ತು, ನೀವೇ ಬೇಕು ಅಂತೇನಿಲ್ಲ. ಗುರುಗಳೇ, ನಿಮ್ಮ ವರದಿಯ ಬಗ್ಗೆ ನಾವೆಲ್ಲ ಇಟ್ಟುಕೊಂಡಿದ್ದ ನಿರೀಕ್ಷೆಗಳೆಲ್ಲ ಠುಸ್ ಎಂದಿವೆ. ಹಾಡಿದ್ದೇ ಹಾಡೋ...ಎಂಬಂತೆ ಬುಧವಾರದ ಪತ್ರಿಕಾಗೋಷ್ಠಿಯಲ್ಲೂ ಅದೇ ಸೋರಿಕೆ ಮಾಹಿತಿಯನ್ನು ನೀಡಿ, ಕೃತಾರ್ಥರಾಗಿದ್ದೀರಿ.



Click it and Unblock the Notifications