Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟರು

ಅಂದಹಾಗೆ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರ ರಾವ್ ಅವರು ಬಳ್ಳಾರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಜಡ್ಜ್ ಆಗಿದ್ದರು. ಮೊನ್ನೆ ಏಪ್ರಿಲ್ ನಲ್ಲಿ ಲೋಕಾಯುಕ್ತ ವಿಶೇಷ ಕೋರ್ಟಿಗೆ ವರ್ಗವಾಗಿದ್ದರು. ಗಮನಾರ್ಹವೆಂದರೆ ಭ್ರಷ್ಟಾಚಾರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲೇ ಮಾಜಿ ಸಚಿವರೊಬ್ಬರು ಜೈಲು ಪಾಲಾದ ಅಪರೂಪದ ಪ್ರಕರಣಕ್ಕೆ ಸುಧೀಂದ್ರ ಕಾರಣಕರ್ತರಾಗಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟ ಅಧಿಕಾರಿಗಳು: ಇನ್ನು, ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರನ್ನೂ ಅಭಿನಂದಿಸಬೇಕು. ಸಹಜವಾಗಿಯೇ ಅವರೂ ಅತೀವ ಸಮಾಧಾನ ವ್ಯಕ್ತಪಡಿಸಿದ್ದಾರೆ: ತನಿಖಾ ಸಂಸ್ಥೆಗಳಿಗೆ ಇಂತಹ ತೀರ್ಪುಗಳು ಪ್ರೋತ್ಸಾಹ, ಉತ್ತೇಜನಕಾರಿಯಾಗಿವೆ. ಬಲಿಷ್ಠ ಕಾನೂನಿನಿಂದ ತಪ್ಪಿಸಿಕೊಳ್ಳುವುದಕ್ಕೆ ಯಾರಿಗೂ ಸಾಧ್ಯವಿಲ್ಲ ಎಂಬುದು ಸಾಬೀತಾಗಿದೆ ಎಂದು ಹೆಗ್ಡೆ ಹೇಳಿದ್ದಾರೆ. ಲೋಕಾಯುಕ್ತ ಪರ ಸಮರ್ಥವಾಗಿ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್. ಪ್ರಮೋದ್ಚಂದ್ರ ಸಹ ಅಭಿನಂದನೀಯರು.
ಈ ಸಂದರ್ಭದಲ್ಲಿ ಲೋಕಾಯುಕ್ತದಲ್ಲಿ ಅಧಿಕಾರಿಯಾಗಿದ್ದುಕೊಂಡು ಕಟ್ಟಾದ್ವಯರನ್ನು ಕಂಬಿ ಎಣಿಸುವಂತೆ ಮಾಡುವಲ್ಲಿ ಸಾಕಷ್ಟು ಶ್ರಮವಹಿಸಿರುವ ಎಸ್ಪಿ ಮಧುಕರ ಶೆಟ್ಟಿ ಅವರನ್ನು ಕೊಂಡಾಡಲೇಬೇಕು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳಿರುವ ಮಧುಕರ ಅವರನ್ನು ಇಡೀ ಕರ್ನಾಟಕದ ಜನತೆ ಇಲ್ಲಿಂದಲೇ ಅಭಿನಂದಿಸಿದ್ದಾರೆ.
ಹಾಗೆಯೇ, ಸಚಿವರ ವಿರುದ್ಧವೇ ದೂರು ದಾಖಲಿಸಿ ಇಡೀ ಕಟ್ಟೆ ಪುರಾಣಕ್ಕೆ ನಾಂದಿ ಹಾಡಿದ್ದ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಗೆ ಸಲಾಂ ಹಾಗೂ ಅವರ ಇಡೀ ಪಟಾಲಂಗೆ ನಮೋನಮಃ. ಕನ್ನಡದ ಇಂತಹ ಕಟ್ಟಾಳುಗಳ ಮಧ್ಯೆ ಕೆಟ್ಟಾ ಪ್ರಹಸನಕ್ಕೆ ಹೇತುವಾಗಿರುವ ಕೆಐಎಡಿಬಿ ಭ್ರಷ್ಟ ಅಧಿಕಾರಿಗಳನ್ನು ನೋಡಿ ನಗುವುದೋ, ಅಳುವುದೋ ತೋಚುತ್ತಿಲ್ಲ...



Click it and Unblock the Notifications











