Latest Updates
-
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ!
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟರು

ಅಂದಹಾಗೆ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರ ರಾವ್ ಅವರು ಬಳ್ಳಾರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಜಡ್ಜ್ ಆಗಿದ್ದರು. ಮೊನ್ನೆ ಏಪ್ರಿಲ್ ನಲ್ಲಿ ಲೋಕಾಯುಕ್ತ ವಿಶೇಷ ಕೋರ್ಟಿಗೆ ವರ್ಗವಾಗಿದ್ದರು. ಗಮನಾರ್ಹವೆಂದರೆ ಭ್ರಷ್ಟಾಚಾರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲೇ ಮಾಜಿ ಸಚಿವರೊಬ್ಬರು ಜೈಲು ಪಾಲಾದ ಅಪರೂಪದ ಪ್ರಕರಣಕ್ಕೆ ಸುಧೀಂದ್ರ ಕಾರಣಕರ್ತರಾಗಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟ ಅಧಿಕಾರಿಗಳು: ಇನ್ನು, ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರನ್ನೂ ಅಭಿನಂದಿಸಬೇಕು. ಸಹಜವಾಗಿಯೇ ಅವರೂ ಅತೀವ ಸಮಾಧಾನ ವ್ಯಕ್ತಪಡಿಸಿದ್ದಾರೆ: ತನಿಖಾ ಸಂಸ್ಥೆಗಳಿಗೆ ಇಂತಹ ತೀರ್ಪುಗಳು ಪ್ರೋತ್ಸಾಹ, ಉತ್ತೇಜನಕಾರಿಯಾಗಿವೆ. ಬಲಿಷ್ಠ ಕಾನೂನಿನಿಂದ ತಪ್ಪಿಸಿಕೊಳ್ಳುವುದಕ್ಕೆ ಯಾರಿಗೂ ಸಾಧ್ಯವಿಲ್ಲ ಎಂಬುದು ಸಾಬೀತಾಗಿದೆ ಎಂದು ಹೆಗ್ಡೆ ಹೇಳಿದ್ದಾರೆ. ಲೋಕಾಯುಕ್ತ ಪರ ಸಮರ್ಥವಾಗಿ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್. ಪ್ರಮೋದ್ಚಂದ್ರ ಸಹ ಅಭಿನಂದನೀಯರು.
ಈ ಸಂದರ್ಭದಲ್ಲಿ ಲೋಕಾಯುಕ್ತದಲ್ಲಿ ಅಧಿಕಾರಿಯಾಗಿದ್ದುಕೊಂಡು ಕಟ್ಟಾದ್ವಯರನ್ನು ಕಂಬಿ ಎಣಿಸುವಂತೆ ಮಾಡುವಲ್ಲಿ ಸಾಕಷ್ಟು ಶ್ರಮವಹಿಸಿರುವ ಎಸ್ಪಿ ಮಧುಕರ ಶೆಟ್ಟಿ ಅವರನ್ನು ಕೊಂಡಾಡಲೇಬೇಕು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳಿರುವ ಮಧುಕರ ಅವರನ್ನು ಇಡೀ ಕರ್ನಾಟಕದ ಜನತೆ ಇಲ್ಲಿಂದಲೇ ಅಭಿನಂದಿಸಿದ್ದಾರೆ.
ಹಾಗೆಯೇ, ಸಚಿವರ ವಿರುದ್ಧವೇ ದೂರು ದಾಖಲಿಸಿ ಇಡೀ ಕಟ್ಟೆ ಪುರಾಣಕ್ಕೆ ನಾಂದಿ ಹಾಡಿದ್ದ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಗೆ ಸಲಾಂ ಹಾಗೂ ಅವರ ಇಡೀ ಪಟಾಲಂಗೆ ನಮೋನಮಃ. ಕನ್ನಡದ ಇಂತಹ ಕಟ್ಟಾಳುಗಳ ಮಧ್ಯೆ ಕೆಟ್ಟಾ ಪ್ರಹಸನಕ್ಕೆ ಹೇತುವಾಗಿರುವ ಕೆಐಎಡಿಬಿ ಭ್ರಷ್ಟ ಅಧಿಕಾರಿಗಳನ್ನು ನೋಡಿ ನಗುವುದೋ, ಅಳುವುದೋ ತೋಚುತ್ತಿಲ್ಲ...



Click it and Unblock the Notifications