Latest Updates
-
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟರು

ಅಂದಹಾಗೆ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರ ರಾವ್ ಅವರು ಬಳ್ಳಾರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಜಡ್ಜ್ ಆಗಿದ್ದರು. ಮೊನ್ನೆ ಏಪ್ರಿಲ್ ನಲ್ಲಿ ಲೋಕಾಯುಕ್ತ ವಿಶೇಷ ಕೋರ್ಟಿಗೆ ವರ್ಗವಾಗಿದ್ದರು. ಗಮನಾರ್ಹವೆಂದರೆ ಭ್ರಷ್ಟಾಚಾರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲೇ ಮಾಜಿ ಸಚಿವರೊಬ್ಬರು ಜೈಲು ಪಾಲಾದ ಅಪರೂಪದ ಪ್ರಕರಣಕ್ಕೆ ಸುಧೀಂದ್ರ ಕಾರಣಕರ್ತರಾಗಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟ ಅಧಿಕಾರಿಗಳು: ಇನ್ನು, ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರನ್ನೂ ಅಭಿನಂದಿಸಬೇಕು. ಸಹಜವಾಗಿಯೇ ಅವರೂ ಅತೀವ ಸಮಾಧಾನ ವ್ಯಕ್ತಪಡಿಸಿದ್ದಾರೆ: ತನಿಖಾ ಸಂಸ್ಥೆಗಳಿಗೆ ಇಂತಹ ತೀರ್ಪುಗಳು ಪ್ರೋತ್ಸಾಹ, ಉತ್ತೇಜನಕಾರಿಯಾಗಿವೆ. ಬಲಿಷ್ಠ ಕಾನೂನಿನಿಂದ ತಪ್ಪಿಸಿಕೊಳ್ಳುವುದಕ್ಕೆ ಯಾರಿಗೂ ಸಾಧ್ಯವಿಲ್ಲ ಎಂಬುದು ಸಾಬೀತಾಗಿದೆ ಎಂದು ಹೆಗ್ಡೆ ಹೇಳಿದ್ದಾರೆ. ಲೋಕಾಯುಕ್ತ ಪರ ಸಮರ್ಥವಾಗಿ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್. ಪ್ರಮೋದ್ಚಂದ್ರ ಸಹ ಅಭಿನಂದನೀಯರು.
ಈ ಸಂದರ್ಭದಲ್ಲಿ ಲೋಕಾಯುಕ್ತದಲ್ಲಿ ಅಧಿಕಾರಿಯಾಗಿದ್ದುಕೊಂಡು ಕಟ್ಟಾದ್ವಯರನ್ನು ಕಂಬಿ ಎಣಿಸುವಂತೆ ಮಾಡುವಲ್ಲಿ ಸಾಕಷ್ಟು ಶ್ರಮವಹಿಸಿರುವ ಎಸ್ಪಿ ಮಧುಕರ ಶೆಟ್ಟಿ ಅವರನ್ನು ಕೊಂಡಾಡಲೇಬೇಕು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳಿರುವ ಮಧುಕರ ಅವರನ್ನು ಇಡೀ ಕರ್ನಾಟಕದ ಜನತೆ ಇಲ್ಲಿಂದಲೇ ಅಭಿನಂದಿಸಿದ್ದಾರೆ.
ಹಾಗೆಯೇ, ಸಚಿವರ ವಿರುದ್ಧವೇ ದೂರು ದಾಖಲಿಸಿ ಇಡೀ ಕಟ್ಟೆ ಪುರಾಣಕ್ಕೆ ನಾಂದಿ ಹಾಡಿದ್ದ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಗೆ ಸಲಾಂ ಹಾಗೂ ಅವರ ಇಡೀ ಪಟಾಲಂಗೆ ನಮೋನಮಃ. ಕನ್ನಡದ ಇಂತಹ ಕಟ್ಟಾಳುಗಳ ಮಧ್ಯೆ ಕೆಟ್ಟಾ ಪ್ರಹಸನಕ್ಕೆ ಹೇತುವಾಗಿರುವ ಕೆಐಎಡಿಬಿ ಭ್ರಷ್ಟ ಅಧಿಕಾರಿಗಳನ್ನು ನೋಡಿ ನಗುವುದೋ, ಅಳುವುದೋ ತೋಚುತ್ತಿಲ್ಲ...



Click it and Unblock the Notifications











