Latest Updates
-
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ!
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟರು

ಅಂದಹಾಗೆ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರ ರಾವ್ ಅವರು ಬಳ್ಳಾರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಜಡ್ಜ್ ಆಗಿದ್ದರು. ಮೊನ್ನೆ ಏಪ್ರಿಲ್ ನಲ್ಲಿ ಲೋಕಾಯುಕ್ತ ವಿಶೇಷ ಕೋರ್ಟಿಗೆ ವರ್ಗವಾಗಿದ್ದರು. ಗಮನಾರ್ಹವೆಂದರೆ ಭ್ರಷ್ಟಾಚಾರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲೇ ಮಾಜಿ ಸಚಿವರೊಬ್ಬರು ಜೈಲು ಪಾಲಾದ ಅಪರೂಪದ ಪ್ರಕರಣಕ್ಕೆ ಸುಧೀಂದ್ರ ಕಾರಣಕರ್ತರಾಗಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟ ಅಧಿಕಾರಿಗಳು: ಇನ್ನು, ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರನ್ನೂ ಅಭಿನಂದಿಸಬೇಕು. ಸಹಜವಾಗಿಯೇ ಅವರೂ ಅತೀವ ಸಮಾಧಾನ ವ್ಯಕ್ತಪಡಿಸಿದ್ದಾರೆ: ತನಿಖಾ ಸಂಸ್ಥೆಗಳಿಗೆ ಇಂತಹ ತೀರ್ಪುಗಳು ಪ್ರೋತ್ಸಾಹ, ಉತ್ತೇಜನಕಾರಿಯಾಗಿವೆ. ಬಲಿಷ್ಠ ಕಾನೂನಿನಿಂದ ತಪ್ಪಿಸಿಕೊಳ್ಳುವುದಕ್ಕೆ ಯಾರಿಗೂ ಸಾಧ್ಯವಿಲ್ಲ ಎಂಬುದು ಸಾಬೀತಾಗಿದೆ ಎಂದು ಹೆಗ್ಡೆ ಹೇಳಿದ್ದಾರೆ. ಲೋಕಾಯುಕ್ತ ಪರ ಸಮರ್ಥವಾಗಿ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್. ಪ್ರಮೋದ್ಚಂದ್ರ ಸಹ ಅಭಿನಂದನೀಯರು.
ಈ ಸಂದರ್ಭದಲ್ಲಿ ಲೋಕಾಯುಕ್ತದಲ್ಲಿ ಅಧಿಕಾರಿಯಾಗಿದ್ದುಕೊಂಡು ಕಟ್ಟಾದ್ವಯರನ್ನು ಕಂಬಿ ಎಣಿಸುವಂತೆ ಮಾಡುವಲ್ಲಿ ಸಾಕಷ್ಟು ಶ್ರಮವಹಿಸಿರುವ ಎಸ್ಪಿ ಮಧುಕರ ಶೆಟ್ಟಿ ಅವರನ್ನು ಕೊಂಡಾಡಲೇಬೇಕು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳಿರುವ ಮಧುಕರ ಅವರನ್ನು ಇಡೀ ಕರ್ನಾಟಕದ ಜನತೆ ಇಲ್ಲಿಂದಲೇ ಅಭಿನಂದಿಸಿದ್ದಾರೆ.
ಹಾಗೆಯೇ, ಸಚಿವರ ವಿರುದ್ಧವೇ ದೂರು ದಾಖಲಿಸಿ ಇಡೀ ಕಟ್ಟೆ ಪುರಾಣಕ್ಕೆ ನಾಂದಿ ಹಾಡಿದ್ದ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಗೆ ಸಲಾಂ ಹಾಗೂ ಅವರ ಇಡೀ ಪಟಾಲಂಗೆ ನಮೋನಮಃ. ಕನ್ನಡದ ಇಂತಹ ಕಟ್ಟಾಳುಗಳ ಮಧ್ಯೆ ಕೆಟ್ಟಾ ಪ್ರಹಸನಕ್ಕೆ ಹೇತುವಾಗಿರುವ ಕೆಐಎಡಿಬಿ ಭ್ರಷ್ಟ ಅಧಿಕಾರಿಗಳನ್ನು ನೋಡಿ ನಗುವುದೋ, ಅಳುವುದೋ ತೋಚುತ್ತಿಲ್ಲ...



Click it and Unblock the Notifications
