Just In
- 5 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 5 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 6 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 7 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟರು
ಅಂದಹಾಗೆ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರ ರಾವ್ ಅವರು ಬಳ್ಳಾರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಜಡ್ಜ್ ಆಗಿದ್ದರು. ಮೊನ್ನೆ ಏಪ್ರಿಲ್ ನಲ್ಲಿ ಲೋಕಾಯುಕ್ತ ವಿಶೇಷ ಕೋರ್ಟಿಗೆ ವರ್ಗವಾಗಿದ್ದರು. ಗಮನಾರ್ಹವೆಂದರೆ ಭ್ರಷ್ಟಾಚಾರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲೇ ಮಾಜಿ ಸಚಿವರೊಬ್ಬರು ಜೈಲು ಪಾಲಾದ ಅಪರೂಪದ ಪ್ರಕರಣಕ್ಕೆ ಸುಧೀಂದ್ರ ಕಾರಣಕರ್ತರಾಗಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟ ಅಧಿಕಾರಿಗಳು: ಇನ್ನು, ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರನ್ನೂ ಅಭಿನಂದಿಸಬೇಕು. ಸಹಜವಾಗಿಯೇ ಅವರೂ ಅತೀವ ಸಮಾಧಾನ ವ್ಯಕ್ತಪಡಿಸಿದ್ದಾರೆ: ತನಿಖಾ ಸಂಸ್ಥೆಗಳಿಗೆ ಇಂತಹ ತೀರ್ಪುಗಳು ಪ್ರೋತ್ಸಾಹ, ಉತ್ತೇಜನಕಾರಿಯಾಗಿವೆ. ಬಲಿಷ್ಠ ಕಾನೂನಿನಿಂದ ತಪ್ಪಿಸಿಕೊಳ್ಳುವುದಕ್ಕೆ ಯಾರಿಗೂ ಸಾಧ್ಯವಿಲ್ಲ ಎಂಬುದು ಸಾಬೀತಾಗಿದೆ ಎಂದು ಹೆಗ್ಡೆ ಹೇಳಿದ್ದಾರೆ. ಲೋಕಾಯುಕ್ತ ಪರ ಸಮರ್ಥವಾಗಿ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್. ಪ್ರಮೋದ್ಚಂದ್ರ ಸಹ ಅಭಿನಂದನೀಯರು.
ಈ ಸಂದರ್ಭದಲ್ಲಿ ಲೋಕಾಯುಕ್ತದಲ್ಲಿ ಅಧಿಕಾರಿಯಾಗಿದ್ದುಕೊಂಡು ಕಟ್ಟಾದ್ವಯರನ್ನು ಕಂಬಿ ಎಣಿಸುವಂತೆ ಮಾಡುವಲ್ಲಿ ಸಾಕಷ್ಟು ಶ್ರಮವಹಿಸಿರುವ ಎಸ್ಪಿ ಮಧುಕರ ಶೆಟ್ಟಿ ಅವರನ್ನು ಕೊಂಡಾಡಲೇಬೇಕು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳಿರುವ ಮಧುಕರ ಅವರನ್ನು ಇಡೀ ಕರ್ನಾಟಕದ ಜನತೆ ಇಲ್ಲಿಂದಲೇ ಅಭಿನಂದಿಸಿದ್ದಾರೆ.
ಹಾಗೆಯೇ, ಸಚಿವರ ವಿರುದ್ಧವೇ ದೂರು ದಾಖಲಿಸಿ ಇಡೀ ಕಟ್ಟೆ ಪುರಾಣಕ್ಕೆ ನಾಂದಿ ಹಾಡಿದ್ದ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಗೆ ಸಲಾಂ ಹಾಗೂ ಅವರ ಇಡೀ ಪಟಾಲಂಗೆ ನಮೋನಮಃ. ಕನ್ನಡದ ಇಂತಹ ಕಟ್ಟಾಳುಗಳ ಮಧ್ಯೆ ಕೆಟ್ಟಾ ಪ್ರಹಸನಕ್ಕೆ ಹೇತುವಾಗಿರುವ ಕೆಐಎಡಿಬಿ ಭ್ರಷ್ಟ ಅಧಿಕಾರಿಗಳನ್ನು ನೋಡಿ ನಗುವುದೋ, ಅಳುವುದೋ ತೋಚುತ್ತಿಲ್ಲ...