Latest Updates
-
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು?
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟರು

ಅಂದಹಾಗೆ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರ ರಾವ್ ಅವರು ಬಳ್ಳಾರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಜಡ್ಜ್ ಆಗಿದ್ದರು. ಮೊನ್ನೆ ಏಪ್ರಿಲ್ ನಲ್ಲಿ ಲೋಕಾಯುಕ್ತ ವಿಶೇಷ ಕೋರ್ಟಿಗೆ ವರ್ಗವಾಗಿದ್ದರು. ಗಮನಾರ್ಹವೆಂದರೆ ಭ್ರಷ್ಟಾಚಾರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲೇ ಮಾಜಿ ಸಚಿವರೊಬ್ಬರು ಜೈಲು ಪಾಲಾದ ಅಪರೂಪದ ಪ್ರಕರಣಕ್ಕೆ ಸುಧೀಂದ್ರ ಕಾರಣಕರ್ತರಾಗಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟ ಅಧಿಕಾರಿಗಳು: ಇನ್ನು, ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರನ್ನೂ ಅಭಿನಂದಿಸಬೇಕು. ಸಹಜವಾಗಿಯೇ ಅವರೂ ಅತೀವ ಸಮಾಧಾನ ವ್ಯಕ್ತಪಡಿಸಿದ್ದಾರೆ: ತನಿಖಾ ಸಂಸ್ಥೆಗಳಿಗೆ ಇಂತಹ ತೀರ್ಪುಗಳು ಪ್ರೋತ್ಸಾಹ, ಉತ್ತೇಜನಕಾರಿಯಾಗಿವೆ. ಬಲಿಷ್ಠ ಕಾನೂನಿನಿಂದ ತಪ್ಪಿಸಿಕೊಳ್ಳುವುದಕ್ಕೆ ಯಾರಿಗೂ ಸಾಧ್ಯವಿಲ್ಲ ಎಂಬುದು ಸಾಬೀತಾಗಿದೆ ಎಂದು ಹೆಗ್ಡೆ ಹೇಳಿದ್ದಾರೆ. ಲೋಕಾಯುಕ್ತ ಪರ ಸಮರ್ಥವಾಗಿ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್. ಪ್ರಮೋದ್ಚಂದ್ರ ಸಹ ಅಭಿನಂದನೀಯರು.
ಈ ಸಂದರ್ಭದಲ್ಲಿ ಲೋಕಾಯುಕ್ತದಲ್ಲಿ ಅಧಿಕಾರಿಯಾಗಿದ್ದುಕೊಂಡು ಕಟ್ಟಾದ್ವಯರನ್ನು ಕಂಬಿ ಎಣಿಸುವಂತೆ ಮಾಡುವಲ್ಲಿ ಸಾಕಷ್ಟು ಶ್ರಮವಹಿಸಿರುವ ಎಸ್ಪಿ ಮಧುಕರ ಶೆಟ್ಟಿ ಅವರನ್ನು ಕೊಂಡಾಡಲೇಬೇಕು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳಿರುವ ಮಧುಕರ ಅವರನ್ನು ಇಡೀ ಕರ್ನಾಟಕದ ಜನತೆ ಇಲ್ಲಿಂದಲೇ ಅಭಿನಂದಿಸಿದ್ದಾರೆ.
ಹಾಗೆಯೇ, ಸಚಿವರ ವಿರುದ್ಧವೇ ದೂರು ದಾಖಲಿಸಿ ಇಡೀ ಕಟ್ಟೆ ಪುರಾಣಕ್ಕೆ ನಾಂದಿ ಹಾಡಿದ್ದ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಗೆ ಸಲಾಂ ಹಾಗೂ ಅವರ ಇಡೀ ಪಟಾಲಂಗೆ ನಮೋನಮಃ. ಕನ್ನಡದ ಇಂತಹ ಕಟ್ಟಾಳುಗಳ ಮಧ್ಯೆ ಕೆಟ್ಟಾ ಪ್ರಹಸನಕ್ಕೆ ಹೇತುವಾಗಿರುವ ಕೆಐಎಡಿಬಿ ಭ್ರಷ್ಟ ಅಧಿಕಾರಿಗಳನ್ನು ನೋಡಿ ನಗುವುದೋ, ಅಳುವುದೋ ತೋಚುತ್ತಿಲ್ಲ...



Click it and Unblock the Notifications