Latest Updates
-
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟರು

ಅಂದಹಾಗೆ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರ ರಾವ್ ಅವರು ಬಳ್ಳಾರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಜಡ್ಜ್ ಆಗಿದ್ದರು. ಮೊನ್ನೆ ಏಪ್ರಿಲ್ ನಲ್ಲಿ ಲೋಕಾಯುಕ್ತ ವಿಶೇಷ ಕೋರ್ಟಿಗೆ ವರ್ಗವಾಗಿದ್ದರು. ಗಮನಾರ್ಹವೆಂದರೆ ಭ್ರಷ್ಟಾಚಾರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲೇ ಮಾಜಿ ಸಚಿವರೊಬ್ಬರು ಜೈಲು ಪಾಲಾದ ಅಪರೂಪದ ಪ್ರಕರಣಕ್ಕೆ ಸುಧೀಂದ್ರ ಕಾರಣಕರ್ತರಾಗಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು v/s ಕೆಐಎಡಿಬಿ ಭ್ರಷ್ಟ ಅಧಿಕಾರಿಗಳು: ಇನ್ನು, ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರನ್ನೂ ಅಭಿನಂದಿಸಬೇಕು. ಸಹಜವಾಗಿಯೇ ಅವರೂ ಅತೀವ ಸಮಾಧಾನ ವ್ಯಕ್ತಪಡಿಸಿದ್ದಾರೆ: ತನಿಖಾ ಸಂಸ್ಥೆಗಳಿಗೆ ಇಂತಹ ತೀರ್ಪುಗಳು ಪ್ರೋತ್ಸಾಹ, ಉತ್ತೇಜನಕಾರಿಯಾಗಿವೆ. ಬಲಿಷ್ಠ ಕಾನೂನಿನಿಂದ ತಪ್ಪಿಸಿಕೊಳ್ಳುವುದಕ್ಕೆ ಯಾರಿಗೂ ಸಾಧ್ಯವಿಲ್ಲ ಎಂಬುದು ಸಾಬೀತಾಗಿದೆ ಎಂದು ಹೆಗ್ಡೆ ಹೇಳಿದ್ದಾರೆ. ಲೋಕಾಯುಕ್ತ ಪರ ಸಮರ್ಥವಾಗಿ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್. ಪ್ರಮೋದ್ಚಂದ್ರ ಸಹ ಅಭಿನಂದನೀಯರು.
ಈ ಸಂದರ್ಭದಲ್ಲಿ ಲೋಕಾಯುಕ್ತದಲ್ಲಿ ಅಧಿಕಾರಿಯಾಗಿದ್ದುಕೊಂಡು ಕಟ್ಟಾದ್ವಯರನ್ನು ಕಂಬಿ ಎಣಿಸುವಂತೆ ಮಾಡುವಲ್ಲಿ ಸಾಕಷ್ಟು ಶ್ರಮವಹಿಸಿರುವ ಎಸ್ಪಿ ಮಧುಕರ ಶೆಟ್ಟಿ ಅವರನ್ನು ಕೊಂಡಾಡಲೇಬೇಕು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳಿರುವ ಮಧುಕರ ಅವರನ್ನು ಇಡೀ ಕರ್ನಾಟಕದ ಜನತೆ ಇಲ್ಲಿಂದಲೇ ಅಭಿನಂದಿಸಿದ್ದಾರೆ.
ಹಾಗೆಯೇ, ಸಚಿವರ ವಿರುದ್ಧವೇ ದೂರು ದಾಖಲಿಸಿ ಇಡೀ ಕಟ್ಟೆ ಪುರಾಣಕ್ಕೆ ನಾಂದಿ ಹಾಡಿದ್ದ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಗೆ ಸಲಾಂ ಹಾಗೂ ಅವರ ಇಡೀ ಪಟಾಲಂಗೆ ನಮೋನಮಃ. ಕನ್ನಡದ ಇಂತಹ ಕಟ್ಟಾಳುಗಳ ಮಧ್ಯೆ ಕೆಟ್ಟಾ ಪ್ರಹಸನಕ್ಕೆ ಹೇತುವಾಗಿರುವ ಕೆಐಎಡಿಬಿ ಭ್ರಷ್ಟ ಅಧಿಕಾರಿಗಳನ್ನು ನೋಡಿ ನಗುವುದೋ, ಅಳುವುದೋ ತೋಚುತ್ತಿಲ್ಲ...



Click it and Unblock the Notifications