Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ!
ಜೈಲಿನಲ್ಲೇ ಸ್ವಾತಂತ್ರ್ಯೋತ್ಸವ; ಕಟ್ಟಾಗೆ ಸದ್ಯಕ್ಕಿಲ್ಲ ಮುಕ್ತಿ!

ಎಲ್ಲ ರಾಜಕಾರಣಿಗಳಂತೆ ಎದುರಿಗೆ ಜೈಲುಗಂಬಿ ಕಾಣುತ್ತಿದ್ದಂತೆ ಎದೆಎದೆ ಬಡಿದುಕೊಂಡು ಕಟ್ಟಾ, ಮೈ ಲಾರ್ಡ್! ನನಗೆ ಆರೋಗ್ಯ ಸರಿಯಿಲ್ಲ ಎಂದು ನ್ಯಾಯಾಲಯಕ್ಕೆ ಅಲವತ್ತುಕೊಂಡರು. ಆರೋಗ್ಯ ಕಾರಣಗಳಿಗಾಗಿ ತನಗೆ ಜಾಮೀನು ನೀಡಬೇಕೆಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮಾಡಿಕೊಂಡ ಮನವಿಯನ್ನು ಸುಧೀಂದ್ರ ಸ್ಪಷ್ಟವಾಗಿ ತಳ್ಳಿಹಾಕಿದರು.
'ನಿಮಗೆ ಅಗತ್ಯವಿರುವ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಜೈಲು ಪ್ರಾಧಿಕಾರಕ್ಕೆ ಸೂಚನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ತೊಂದರೆ ಯಾಗದಂತೆ ನೋಡಿಕೊಳ್ಳುವಂತೆ ಸೂಚಿಸುತ್ತೇನೆ" ಎಂದು ಹೇಳಿ ಜಾಮೀನು ಅರ್ಜಿಯನ್ನು ನಯವಾಗಿಯೇ ತಳ್ಳಿಹಾಕಿದ್ದಾರೆ. ಅಲ್ಲಿಗೆ ಕಟ್ಟಾದ್ವಯರಿಗೆ ಆ. 22ರವರೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವುದ ಅನಿವಾರ್ಯವಾಗಿದೆ.
ಕಟ್ಟಾ ಪ್ರಭೃತಿಗಳು ಇನ್ನೂ ಒಂದು ನಾಟಕ ಹೂಡಲು ಯತ್ನಿಸಿದ್ದಾರೆ. ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸುವವರೆಗೂ ನ್ಯಾಯಾಂಗ ಬಂಧನದಿಂದ ವಿನಾಯ್ತಿ ನೀಡುವಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದರಿಂದ ಒಳಗೊಳಗೇ ಕೆಂಡವಾದ ಜಡ್ಜ್ ಸುಧೀಂದ್ರ ಅವೆಲ್ಲ ನಡೆಯಾಕಿಲ್ಲ, ನಡೀತಿರು ಜೈಲಿಗೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಎದುರಿಗೇ ಇದೆ!: 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದಲ್ಲಿ ಮಾಜಿ ಸಚಿವ ಎ.ರಾಜಾ ಮತ್ತು ಕನ್ನಿಮೋಳಿಯ ಜಾಮೀನು ಅರ್ಜಿ ತಿರಸ್ಕರಿಸಿ ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ಉಲ್ಲೇಖಿಸಿದ ಜಡ್ಜ್ ಸಾಹೇಬರು, ಕಟ್ಟಾ ವಕೀಲರ ಮನವಿಯನ್ನು ತಿರಸ್ಕರಿಸಿದರು. ಅಲ್ಲಿಗೆ ಕಟ್ಟಾ ಅಂಡ್ ಗ್ಯಾಂಗ್ ಗೆ ಸದ್ಯಕ್ಕೆ ಮುಕ್ತಿಯಿಲ್ಲ. ಜತೆಗೆ ಪ್ರಕರಣದ ಆರೋಪಿಗಳಾದ ಬಿ.ಕೆ.ಮಂಜು, ಬಸವ ಪೂರ್ಣಯ್ಯ, ಪಾಲಿಕೆ ಸದಸ್ಯ ಗೋಪಿಗೆ 5ಲಕ್ಷ ಭದ್ರತಾ ಠೇವಣಿ ಮತ್ತು ಇಬ್ಬರ ಖಾತ್ರಿ ಒದಗಿಸುವಂತೆ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು.
ವಿಧಿ ವಿಪರೀತ ಎನ್ನುವುದು ಇದಕ್ಕೇನಾ!?: ಒಂದು ಕಡೆ ರಾಜಭವನದಲ್ಲಿ ಡಿವಿ ಸದಾನಂದ ಗೌಡರ ಸಂಪುಟ ಸದಸ್ಯರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದರೆ, ಅದೇ ಶುಭಮಹೂರ್ತದಲ್ಲಿ, ಬಿಜೆಪಿಯ ಪ್ರಭಾವಿ ಮುಖಂಡ ಮತ್ತು ಶಾಸಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪರಪ್ಪನ ಅಗ್ರಹಾರ ಕಾರಾಗೃಹ ಪ್ರವೇಶಕ್ಕೆ ಪ್ರಯಾಣ ಬೆಳೆಸಿದುದು ವಿಪರ್ಯಾಸ.



Click it and Unblock the Notifications