Latest Updates
-
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ!
ಜೈಲಿನಲ್ಲೇ ಸ್ವಾತಂತ್ರ್ಯೋತ್ಸವ; ಕಟ್ಟಾಗೆ ಸದ್ಯಕ್ಕಿಲ್ಲ ಮುಕ್ತಿ!

ಎಲ್ಲ ರಾಜಕಾರಣಿಗಳಂತೆ ಎದುರಿಗೆ ಜೈಲುಗಂಬಿ ಕಾಣುತ್ತಿದ್ದಂತೆ ಎದೆಎದೆ ಬಡಿದುಕೊಂಡು ಕಟ್ಟಾ, ಮೈ ಲಾರ್ಡ್! ನನಗೆ ಆರೋಗ್ಯ ಸರಿಯಿಲ್ಲ ಎಂದು ನ್ಯಾಯಾಲಯಕ್ಕೆ ಅಲವತ್ತುಕೊಂಡರು. ಆರೋಗ್ಯ ಕಾರಣಗಳಿಗಾಗಿ ತನಗೆ ಜಾಮೀನು ನೀಡಬೇಕೆಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮಾಡಿಕೊಂಡ ಮನವಿಯನ್ನು ಸುಧೀಂದ್ರ ಸ್ಪಷ್ಟವಾಗಿ ತಳ್ಳಿಹಾಕಿದರು.
'ನಿಮಗೆ ಅಗತ್ಯವಿರುವ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಜೈಲು ಪ್ರಾಧಿಕಾರಕ್ಕೆ ಸೂಚನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ತೊಂದರೆ ಯಾಗದಂತೆ ನೋಡಿಕೊಳ್ಳುವಂತೆ ಸೂಚಿಸುತ್ತೇನೆ" ಎಂದು ಹೇಳಿ ಜಾಮೀನು ಅರ್ಜಿಯನ್ನು ನಯವಾಗಿಯೇ ತಳ್ಳಿಹಾಕಿದ್ದಾರೆ. ಅಲ್ಲಿಗೆ ಕಟ್ಟಾದ್ವಯರಿಗೆ ಆ. 22ರವರೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವುದ ಅನಿವಾರ್ಯವಾಗಿದೆ.
ಕಟ್ಟಾ ಪ್ರಭೃತಿಗಳು ಇನ್ನೂ ಒಂದು ನಾಟಕ ಹೂಡಲು ಯತ್ನಿಸಿದ್ದಾರೆ. ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸುವವರೆಗೂ ನ್ಯಾಯಾಂಗ ಬಂಧನದಿಂದ ವಿನಾಯ್ತಿ ನೀಡುವಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದರಿಂದ ಒಳಗೊಳಗೇ ಕೆಂಡವಾದ ಜಡ್ಜ್ ಸುಧೀಂದ್ರ ಅವೆಲ್ಲ ನಡೆಯಾಕಿಲ್ಲ, ನಡೀತಿರು ಜೈಲಿಗೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಎದುರಿಗೇ ಇದೆ!: 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದಲ್ಲಿ ಮಾಜಿ ಸಚಿವ ಎ.ರಾಜಾ ಮತ್ತು ಕನ್ನಿಮೋಳಿಯ ಜಾಮೀನು ಅರ್ಜಿ ತಿರಸ್ಕರಿಸಿ ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ಉಲ್ಲೇಖಿಸಿದ ಜಡ್ಜ್ ಸಾಹೇಬರು, ಕಟ್ಟಾ ವಕೀಲರ ಮನವಿಯನ್ನು ತಿರಸ್ಕರಿಸಿದರು. ಅಲ್ಲಿಗೆ ಕಟ್ಟಾ ಅಂಡ್ ಗ್ಯಾಂಗ್ ಗೆ ಸದ್ಯಕ್ಕೆ ಮುಕ್ತಿಯಿಲ್ಲ. ಜತೆಗೆ ಪ್ರಕರಣದ ಆರೋಪಿಗಳಾದ ಬಿ.ಕೆ.ಮಂಜು, ಬಸವ ಪೂರ್ಣಯ್ಯ, ಪಾಲಿಕೆ ಸದಸ್ಯ ಗೋಪಿಗೆ 5ಲಕ್ಷ ಭದ್ರತಾ ಠೇವಣಿ ಮತ್ತು ಇಬ್ಬರ ಖಾತ್ರಿ ಒದಗಿಸುವಂತೆ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು.
ವಿಧಿ ವಿಪರೀತ ಎನ್ನುವುದು ಇದಕ್ಕೇನಾ!?: ಒಂದು ಕಡೆ ರಾಜಭವನದಲ್ಲಿ ಡಿವಿ ಸದಾನಂದ ಗೌಡರ ಸಂಪುಟ ಸದಸ್ಯರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದರೆ, ಅದೇ ಶುಭಮಹೂರ್ತದಲ್ಲಿ, ಬಿಜೆಪಿಯ ಪ್ರಭಾವಿ ಮುಖಂಡ ಮತ್ತು ಶಾಸಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪರಪ್ಪನ ಅಗ್ರಹಾರ ಕಾರಾಗೃಹ ಪ್ರವೇಶಕ್ಕೆ ಪ್ರಯಾಣ ಬೆಳೆಸಿದುದು ವಿಪರ್ಯಾಸ.



Click it and Unblock the Notifications
