Latest Updates
-
ರೆಪೋ ದರ ಸ್ಥಿರ: ಸಾಲಗಾರರೇ ಎಚ್ಚರ, ನಿಮ್ಮ EMI ಹೊರೆಯನ್ನು ಕಡಿಮೆ ಮಾಡಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ಬೆಂಗಳೂರಿನಲ್ಲಿ 'ಫ್ರೀಡಂ ಫ್ರಮ್ ವೇಸ್ಟ್': ದಂಡದಿಂದ ಪಾರಾಗಲು ಆಗಸ್ಟ್ 15ರೊಳಗೆ ಈ ಕೆಲಸ ಮಾಡಿ! -
8,000mAh ಬ್ಯಾಟರಿಯ ರೆಡ್ಮಿ ನೋಟ್ 17 ಲಾಂಚ್: ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ಪ್ರಮುಖ ವಿಷಯಗಳಿವು! -
ಬಾಣಂತಿಯರಿಗೆ ಬೆಂಬಲ: ತಾಯಿಯ ಆರೋಗ್ಯಕ್ಕೆ ತಂದೆಯ ಸಣ್ಣ ಸಹಾಯ ಎಷ್ಟು ಮುಖ್ಯ? -
8,000mAh ಬ್ಯಾಟರಿಯ POCO M8 Power ಲಾಂಚ್: ಈ ಫೋನ್ ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ವಿಷಯಗಳಿವು! -
ರಾಷ್ಟ್ರೀಯ ಮೂಳೆ ಮತ್ತು ಕೀಲು ದಿನ: ಬೆನ್ನು ಮತ್ತು ಮೊಣಕಾಲು ನೋವಿಗೆ ಈ 10 ನಿಮಿಷದ ವ್ಯಾಯಾಮವೇ ಮದ್ದು! -
ಫ್ರೆಂಡ್ಶಿಪ್ ಡೇ ವಿಶ್ ಮಾಡೋಕೆ ಮರೆತಿದ್ದೀರಾ? ನಿಮ್ಮ ಸ್ನೇಹಿತರ ಮನ ಗೆಲ್ಲಲು ಇಲ್ಲಿದೆ ಸಿಂಪಲ್ ಟಿಪ್ಸ್! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: 999 ರೂ. ಒಳಗಿನ ಬೆಸ್ಟ್ ಡೀಲ್ಗಳು ಮತ್ತು ಶಾಪಿಂಗ್ ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು!
ಜೈಲಿನಲ್ಲೇ ಸ್ವಾತಂತ್ರ್ಯೋತ್ಸವ; ಕಟ್ಟಾಗೆ ಸದ್ಯಕ್ಕಿಲ್ಲ ಮುಕ್ತಿ!

ಎಲ್ಲ ರಾಜಕಾರಣಿಗಳಂತೆ ಎದುರಿಗೆ ಜೈಲುಗಂಬಿ ಕಾಣುತ್ತಿದ್ದಂತೆ ಎದೆಎದೆ ಬಡಿದುಕೊಂಡು ಕಟ್ಟಾ, ಮೈ ಲಾರ್ಡ್! ನನಗೆ ಆರೋಗ್ಯ ಸರಿಯಿಲ್ಲ ಎಂದು ನ್ಯಾಯಾಲಯಕ್ಕೆ ಅಲವತ್ತುಕೊಂಡರು. ಆರೋಗ್ಯ ಕಾರಣಗಳಿಗಾಗಿ ತನಗೆ ಜಾಮೀನು ನೀಡಬೇಕೆಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮಾಡಿಕೊಂಡ ಮನವಿಯನ್ನು ಸುಧೀಂದ್ರ ಸ್ಪಷ್ಟವಾಗಿ ತಳ್ಳಿಹಾಕಿದರು.
'ನಿಮಗೆ ಅಗತ್ಯವಿರುವ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಜೈಲು ಪ್ರಾಧಿಕಾರಕ್ಕೆ ಸೂಚನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ತೊಂದರೆ ಯಾಗದಂತೆ ನೋಡಿಕೊಳ್ಳುವಂತೆ ಸೂಚಿಸುತ್ತೇನೆ" ಎಂದು ಹೇಳಿ ಜಾಮೀನು ಅರ್ಜಿಯನ್ನು ನಯವಾಗಿಯೇ ತಳ್ಳಿಹಾಕಿದ್ದಾರೆ. ಅಲ್ಲಿಗೆ ಕಟ್ಟಾದ್ವಯರಿಗೆ ಆ. 22ರವರೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವುದ ಅನಿವಾರ್ಯವಾಗಿದೆ.
ಕಟ್ಟಾ ಪ್ರಭೃತಿಗಳು ಇನ್ನೂ ಒಂದು ನಾಟಕ ಹೂಡಲು ಯತ್ನಿಸಿದ್ದಾರೆ. ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸುವವರೆಗೂ ನ್ಯಾಯಾಂಗ ಬಂಧನದಿಂದ ವಿನಾಯ್ತಿ ನೀಡುವಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದರಿಂದ ಒಳಗೊಳಗೇ ಕೆಂಡವಾದ ಜಡ್ಜ್ ಸುಧೀಂದ್ರ ಅವೆಲ್ಲ ನಡೆಯಾಕಿಲ್ಲ, ನಡೀತಿರು ಜೈಲಿಗೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಎದುರಿಗೇ ಇದೆ!: 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದಲ್ಲಿ ಮಾಜಿ ಸಚಿವ ಎ.ರಾಜಾ ಮತ್ತು ಕನ್ನಿಮೋಳಿಯ ಜಾಮೀನು ಅರ್ಜಿ ತಿರಸ್ಕರಿಸಿ ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ಉಲ್ಲೇಖಿಸಿದ ಜಡ್ಜ್ ಸಾಹೇಬರು, ಕಟ್ಟಾ ವಕೀಲರ ಮನವಿಯನ್ನು ತಿರಸ್ಕರಿಸಿದರು. ಅಲ್ಲಿಗೆ ಕಟ್ಟಾ ಅಂಡ್ ಗ್ಯಾಂಗ್ ಗೆ ಸದ್ಯಕ್ಕೆ ಮುಕ್ತಿಯಿಲ್ಲ. ಜತೆಗೆ ಪ್ರಕರಣದ ಆರೋಪಿಗಳಾದ ಬಿ.ಕೆ.ಮಂಜು, ಬಸವ ಪೂರ್ಣಯ್ಯ, ಪಾಲಿಕೆ ಸದಸ್ಯ ಗೋಪಿಗೆ 5ಲಕ್ಷ ಭದ್ರತಾ ಠೇವಣಿ ಮತ್ತು ಇಬ್ಬರ ಖಾತ್ರಿ ಒದಗಿಸುವಂತೆ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು.
ವಿಧಿ ವಿಪರೀತ ಎನ್ನುವುದು ಇದಕ್ಕೇನಾ!?: ಒಂದು ಕಡೆ ರಾಜಭವನದಲ್ಲಿ ಡಿವಿ ಸದಾನಂದ ಗೌಡರ ಸಂಪುಟ ಸದಸ್ಯರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದರೆ, ಅದೇ ಶುಭಮಹೂರ್ತದಲ್ಲಿ, ಬಿಜೆಪಿಯ ಪ್ರಭಾವಿ ಮುಖಂಡ ಮತ್ತು ಶಾಸಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪರಪ್ಪನ ಅಗ್ರಹಾರ ಕಾರಾಗೃಹ ಪ್ರವೇಶಕ್ಕೆ ಪ್ರಯಾಣ ಬೆಳೆಸಿದುದು ವಿಪರ್ಯಾಸ.



Click it and Unblock the Notifications