Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಸ್ವಾತಂತ್ರ್ಯ ದಿನಾಚರಣೆ 2020: ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತ 13 ವರ್ಷದ ಹುಬ್ಬಳಿ ಧೀರ

ಅಕ್ಕ ಪಕ್ಕದ ಮನೆಯ ಮಕ್ಕಳೆಲ್ಲ ಆಟವಾಡುತಿದ್ದರೆ ಅವನು ಮಾತ್ರ ಬೆಳಿಗ್ಗೆ ಬೇಗ ಎದ್ದು, ಶ್ವೇತವರ್ಣದ ಜುಬ್ಬಾ-ಪೈಜಾಮ ಧರಿಸಿ, ತನಗಿಂತಲೂ ಎತ್ತರವಿದ್ದ ಒಂದು ಬೊಂಬಿಗೆ 'ತ್ರಿವರ್ಣ ಧ್ವಜ" ಕಟ್ಟಿಕೊಂಡವನೇ ಮಲಗಿದ್ದ ತಾಯಿಯ ಬಳಿ ಹೋಗಿ ಅವಳನ್ನು ಎಬ್ಬಿಸಿ ಆಶೀರ್ವದಿಸುವಂತೆ ಕೇಳಿದ.
ಶ್ವೇತ ವಸ್ತ್ರಧಾರಿಯಾಗಿ 'ತ್ರಿವರ್ಣ ಧ್ವಜ"ವನ್ನಿಡಿದ ಮಗನನ್ನು ನೋಡಿ, ಆ ತಾಯಿ ಕೇಳಿದಳು “ಎಲ್ಲಿ ಹೊರಟೆ ಮಗು?"
“ಅಮ್ಮ , ನಾನು ದುರ್ಗದ ಬಯಲಿನಲ್ಲಿ ನಡೆಯುತ್ತಿರುವ 'ಕ್ವಿಟ್ ಇಂಡಿಯಾ ಚಳುವಳಿ"ಯಲ್ಲಿ ಪಾಲ್ಗೊಳ್ಳಲು ಹೊರಟಿದ್ದೇನೆ"
“ಆದರೆ ಮಗು, ಅಲ್ಲಿ ಹಿರಿಯರೇ ಇರುತ್ತಾರೆ ಕಣೋ!"
“ಅಮ್ಮ , ತಾಯಿ ಭಾರತಿಯ ಸೇವೆ ಮಾಡಲು ಹಿರಿಯರು ,ಕಿರಿಯರು ಯಾರದರೆನಮ್ಮ?" ಎಂದವನ ಮುಖದಲ್ಲಿನ ತೇಜಸ್ಸನ್ನು ಕಂಡು ಆ ತಾಯಿ ಮಗನನ್ನು ಹರಸಿ ಬೀಳ್ಕೊಟ್ಟಳು.
ಹಾಗೆ ಹೊರಟು ನಿಂತವನ ವಯಸ್ಸು ೧೩, ಹೆಸರು “ನಾರಾಯಣ ಮಹಾದೇವ ಧೋನಿ".
ಗಂಡು ಮೆಟ್ಟಿದ ನಾಡು ಹುಬ್ಬಳಿಯ ಆ ಧೀರ ಬಾಲಕ ಓದುತಿದ್ದ ಶಾಲೆಯ ಹೆಸರು 'ಲಾಮಿಂಗ್ಟನ್ ಹೈಸ್ಕೂಲ್".
ದುರ್ಗದ ಬಯಲಿಗೆ ಬಂದು ನಾರಾಯಣ ಸ್ವಾತಂತ್ಯ್ರ ಹೋರಾಟಗಾರರ ಜೊತೆ ಸೇರಿಕೊಂಡ.ಅವನ ಉತ್ಸಾಹ, ತೇಜಸ್ಸು ಕಂಡ ಹಿರಿಯರೆಲ್ಲ ಅವನನ್ನು ಅಪಾರ ಜನಸ್ತೋಮದ ಮುಂಚೂಣಿಯಲ್ಲಿ ಬಿಟ್ಟರು. ಇಡಿ ಜನಸಾಗರಕ್ಕೆ ಪುಟ್ಟ ಬಾಲಕ 'ನಾರಾಯಣ" ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಭಾರತ ಮಾತೆಯನ್ನು ಬಿಡಿಸಬಂದ ನಾಯಕನಂತೆ ಕಂಗೊಳಿಸುತಿದ್ದ.
'ವಂದೇ ಮಾತರಂ" ,"ಬ್ರಿಟಿಷರೇ ಭಾರತ ಬಿಟ್ಟು ತೊಲಗಿ" ಘೋಷಣೆಗಳು ಪ್ರತಿಧ್ವನಿಸುತಿದ್ದವು.ಆ ಹರತಾಳವನ್ನು ನೋಡುತ್ತಾ ರಸ್ತೆಯ ಬದಿ ತಮ್ಮಷ್ಟಕ್ಕೆ ತಾವಿದ್ದ ಜನ,ಪುಟ್ಟ ವೀರನ ನೋಡಿ ತಮ್ಮ ಬಗ್ಗೆ ಅಸಹ್ಯ ಪಟ್ಟುಕೊಂಡು ಅವರು ಹೋರಾಟದಲ್ಲಿ ಪಾಲ್ಗೊಂಡರು.ನೋಡನೋಡುತಿದ್ದಂತೆ ಅಲ್ಲೊಂದು ಜನಪ್ರವಾಹವೇ ಸೃಷ್ಟಿಯಾಯಿತು.
ಹಾಗೆ ಸಾಗುತ್ತಿದ್ದ ಮೆರವಣಿಗೆಯ ಮೇಲೆ, ಆಂಗ್ಲ ಪೊಲೀಸರು ಏಕಾಏಕಿ ಗುಂಡಿನ ಮಳೆ ಸುರಿಸಲಾರಂಭಿಸಿದರು.ಜನ ದಿಕ್ಕಾಪಾಲಾಗಿ ಓಡಲಾರಂಭಿಸಿದರು, ಆದರೆ ಪುಟ್ಟ ಬಾಲಕ ನಾರಾಯಣ 'ಬ್ರಿಟಿಷರೇ ಭಾರತ ಬಿಟ್ಟು ತೊಲಗಿ" ಘೋಷಣೆ ಕೂಗುತ್ತಲೇ ಇದ್ದ.ಅಷ್ಟರಲ್ಲಿ ನುಗ್ಗಿ ಬಂದ ಗುಂಡಿಗೆ ಎದೆ ಕೊಟ್ಟವನೇ ರಕ್ತದ ಮಡುವಲ್ಲಿ ಕುಸಿದು ಬಿದ್ದ.
ಜೀವನ್ಮರಣ ಹೋರಾಟ ನಡೆಸುತಿದ್ದ ನಾರಾಯಣನನ್ನು ನೋಡಲು ಆಸ್ಪತ್ರೆಗೆ ತೆರಳಿದ ಕೆಲ ಹಿರಿಯ ಅಧಿಕಾರಿಗಳು ಅವನಿಗೆ ಕೇಳಿದರು 'ನಿನಗೇನು ಬೇಕು?" “ಸ್ವರಾಜ್ಯ" ಎನ್ನುತ್ತಲೇ ನಾರಾಯಣ ಎಂಬ ಧೀರ ಬಾಲಕನ ಪ್ರಾಣ ಪಕ್ಷಿ ಹಾರಿತ್ತು.
ಇತಿಹಾಸದ ಪುಟದಲ್ಲಿ ಮರೆತು ಮರೆಯಾದ ಇಂತ ಅದೆಷ್ಟೋ 'unsung hero" ಗಳಿದ್ದಾರೋ ಅವರಿಗೆಲ್ಲ ನನ್ನ ನುಡಿನಮನಗಳು.
(ಈ ವೀರನ ಚಿತ್ರವಿಲ್ಲವಾದ್ದರಿಂದ, ಸೂಕ್ತ ಅನ್ನಿಸುವಂತ ಫೋಟೊ ಸಿಕ್ಕಿದ್ದರಿಂದ ಅದನ್ನ ಬಳಸಿಕೊಂಡಿದ್ದೇನೆ)



Click it and Unblock the Notifications