Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಜೀ ಟಿವಿ ಮೇಲೆ ಸ್ವಾರ್ಥಿಗಳ 'ಗೂಂಡಾಗಿರಿ'

ಈ 'ದ್ರೋಹ'ವನ್ನು ಅದು ಪ್ರತಿಭಟಿಸಿದ್ದು ಜೀ ವಾಹಿನಿ ಕಚೇರಿಯ ಮೇಲೆ ದಾಳಿ ನಡೆಸಿ ಅಲ್ಲಿರುವ ವಸ್ತುಗಳನ್ನು ನಾಶ ಮಾಡುವ ಗೂಂಡಾಗಿರಿಯ ಮೂಲಕ! ಈ 'ಪ್ರತಿಭಟನೆ'ಯಿಂದ ಕನ್ನಡದ ಅಸ್ಮಿತೆಗೆ ಲಾಭವೇನೂ ಆಗದಿದ್ದರೂ ಕನ್ನಡಾಭಿಮಾನವೆಂದರೆ ಗೂಂಡಾಗಿರಿ ಎಂದು ಜನರು ಭಾವಿಸುವಂಥ ವಾತಾವರಣ ಸೃಷ್ಟಿಯಾಯಿತು.
ಇಷ್ಟಕ್ಕೂ 'ವೀರ ನಾರಿ...' ಡಬ್ ಮಾಡಲಾದ ಕಾರ್ಯಕ್ರಮವೂ ಅಲ್ಲ. ಇದು ಕಿರುತೆರೆಯ ಪ್ರಮುಖ ಕಲಾವಿದ ಸುಚೇಂದ್ರ ಪ್ರಸಾದ್ ನಿರೂಪಕನಾಗಿ ಝಾನ್ಸಿಯ ರಾಣಿ ಬಾಲ್ಯವನ್ನು ವಿವರಿಸುವ ಒಂದು ಕಾರ್ಯಕ್ರಮ. ಲಕ್ಷ್ಮೀಬಾಯಿ ಬದುಕನ್ನು ಇಲ್ಲಿ ಮರು ಸೃಷ್ಟಿಸಲಾಗಿತ್ತು. ಮರು ಸೃಷ್ಟಿಸಲಾಗಿದ್ದ ಪಾತ್ರಗಳು ಹಿಂದಿಯಲ್ಲಿ ಮಾತನಾಡುವುದನ್ನು ಕನ್ನಡ ಸಬ್ ಟೈಟಲ್ ಜೊತೆ ತೋರಿಸಲಾಗುತ್ತಿತ್ತು.
ಇದು ಹೇಗೆ ಡಬ್ಬಿಂಗ್ ಆಗಲು ಸಾಧ್ಯ?
ಒಂದು ವೇಳೆ ಡಬ್ ಮಾಡಿದ ಕಾರ್ಯಕ್ರಮವನ್ನೇ ಪ್ರಸಾರ ಮಾಡಿದ್ದರೂ ಗೂಂಡಾಗಿರಿಯ ಮೂಲಕ ಅದನ್ನು ತಡೆಯುವ ಅಧಿಕಾರವನ್ನು ಈ ಸಂಘನೆಯವರಿಗೆ ಯಾರು ಕೊಟ್ಟರು?
ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಹನೀಯರ ಹಿನ್ನೆಲೆಯನ್ನು ನೋಡಿದರೆ ಇವರೆಲ್ಲಾ ತಮ್ಮ ಲಾಭದ ಪ್ರಮಾಣ ಕುಸಿಯುತ್ತದೆ ಎಂದು ಗೂಂಡಾಗಿರಿಗಿಳಿದಿದ್ದರೇ ಹೊರತು ಕನ್ನಡ ಉಳಿಸುವ ಕಾಳಜಿಯಿಂದಲ್ಲ ಎಂಬುದು ಸ್ಪಷ್ಟ.
ಡಬ್ ಮಾಡಿದ ಧಾರಾವಾಹಿಗಳಿಂದ ಕನ್ನಡಕ್ಕೆ ತೊಂದರೆಯಾಗುತ್ತದೆ ಎನ್ನುವವರು ಕನ್ನಡದಲ್ಲೇ ಉತ್ತಮ ಧಾರಾವಾಹಿಗಳು ಸೃಷ್ಟಿಯಾದರೆ ಅದು ಇತರ ಭಾಷೆಗಳಿಗೆ ಡಬ್ ಆಗುತ್ತದೆಯಷ್ಟೇ ಅಲ್ಲದೆ ಡಬ್ಬಿಂಗ್ ಧಾರಾವಾಹಿಗಳ ಹಾವಳಿಯೂ ಇರುವುದಿಲ್ಲ ಎಂಬುದನ್ನು ಮರೆಯುವುದೇಕೆ? ಎಲ್ಲದಕ್ಕಿಂತ ಹೆಚ್ಚಾಗಿ ಡಬ್ಬಿಂಗ್ ಅನ್ನು ನಮ್ಮ ದೇಶದ ಯಾವ ಕಾನೂನೂ ನಿಷೇಧಿಸಿಲ್ಲ.
ಗುಣಮಟ್ಟದ ಧಾರಾವಾಹಿಗಳನ್ನು ನಿರ್ಮಿಸುವ ಮೂಲಕ ಸ್ಪರ್ಧೆಯನ್ನು ಎದುರಿಸುವ ಬದಲಿಗೆ ಗೂಂಡಾಗಿರಿಯ ಮೂಲಕ ಲಾಭ ಸಾಧಿಸಲು ಹೊರಟವರ ವಿರುದ್ಧ ಕಠಿಣ ಕಾನೂನು ಕ್ರಮದ ಅಗತ್ಯವಿದೆ. ಯಾವುದೇ ಉದ್ಯಮ ಲಾಭಕೋರ ಸ್ವಾರ್ಥಿ ಸಂಘಟನೆಗಳ ಅಡಿಯಾಳಾಗುವುದು ಬಹಳ ಕೆಟ್ಟದ್ದು. ಇದನ್ನು ಮೊಳಕೆಯಲ್ಲೇ ಚಿವುಟುವ ಅಗತ್ಯವಿದೆ.



Click it and Unblock the Notifications