Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಜೀ ಟಿವಿ ಮೇಲೆ ಸ್ವಾರ್ಥಿಗಳ 'ಗೂಂಡಾಗಿರಿ'

ಈ 'ದ್ರೋಹ'ವನ್ನು ಅದು ಪ್ರತಿಭಟಿಸಿದ್ದು ಜೀ ವಾಹಿನಿ ಕಚೇರಿಯ ಮೇಲೆ ದಾಳಿ ನಡೆಸಿ ಅಲ್ಲಿರುವ ವಸ್ತುಗಳನ್ನು ನಾಶ ಮಾಡುವ ಗೂಂಡಾಗಿರಿಯ ಮೂಲಕ! ಈ 'ಪ್ರತಿಭಟನೆ'ಯಿಂದ ಕನ್ನಡದ ಅಸ್ಮಿತೆಗೆ ಲಾಭವೇನೂ ಆಗದಿದ್ದರೂ ಕನ್ನಡಾಭಿಮಾನವೆಂದರೆ ಗೂಂಡಾಗಿರಿ ಎಂದು ಜನರು ಭಾವಿಸುವಂಥ ವಾತಾವರಣ ಸೃಷ್ಟಿಯಾಯಿತು.
ಇಷ್ಟಕ್ಕೂ 'ವೀರ ನಾರಿ...' ಡಬ್ ಮಾಡಲಾದ ಕಾರ್ಯಕ್ರಮವೂ ಅಲ್ಲ. ಇದು ಕಿರುತೆರೆಯ ಪ್ರಮುಖ ಕಲಾವಿದ ಸುಚೇಂದ್ರ ಪ್ರಸಾದ್ ನಿರೂಪಕನಾಗಿ ಝಾನ್ಸಿಯ ರಾಣಿ ಬಾಲ್ಯವನ್ನು ವಿವರಿಸುವ ಒಂದು ಕಾರ್ಯಕ್ರಮ. ಲಕ್ಷ್ಮೀಬಾಯಿ ಬದುಕನ್ನು ಇಲ್ಲಿ ಮರು ಸೃಷ್ಟಿಸಲಾಗಿತ್ತು. ಮರು ಸೃಷ್ಟಿಸಲಾಗಿದ್ದ ಪಾತ್ರಗಳು ಹಿಂದಿಯಲ್ಲಿ ಮಾತನಾಡುವುದನ್ನು ಕನ್ನಡ ಸಬ್ ಟೈಟಲ್ ಜೊತೆ ತೋರಿಸಲಾಗುತ್ತಿತ್ತು.
ಇದು ಹೇಗೆ ಡಬ್ಬಿಂಗ್ ಆಗಲು ಸಾಧ್ಯ?
ಒಂದು ವೇಳೆ ಡಬ್ ಮಾಡಿದ ಕಾರ್ಯಕ್ರಮವನ್ನೇ ಪ್ರಸಾರ ಮಾಡಿದ್ದರೂ ಗೂಂಡಾಗಿರಿಯ ಮೂಲಕ ಅದನ್ನು ತಡೆಯುವ ಅಧಿಕಾರವನ್ನು ಈ ಸಂಘನೆಯವರಿಗೆ ಯಾರು ಕೊಟ್ಟರು?
ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಹನೀಯರ ಹಿನ್ನೆಲೆಯನ್ನು ನೋಡಿದರೆ ಇವರೆಲ್ಲಾ ತಮ್ಮ ಲಾಭದ ಪ್ರಮಾಣ ಕುಸಿಯುತ್ತದೆ ಎಂದು ಗೂಂಡಾಗಿರಿಗಿಳಿದಿದ್ದರೇ ಹೊರತು ಕನ್ನಡ ಉಳಿಸುವ ಕಾಳಜಿಯಿಂದಲ್ಲ ಎಂಬುದು ಸ್ಪಷ್ಟ.
ಡಬ್ ಮಾಡಿದ ಧಾರಾವಾಹಿಗಳಿಂದ ಕನ್ನಡಕ್ಕೆ ತೊಂದರೆಯಾಗುತ್ತದೆ ಎನ್ನುವವರು ಕನ್ನಡದಲ್ಲೇ ಉತ್ತಮ ಧಾರಾವಾಹಿಗಳು ಸೃಷ್ಟಿಯಾದರೆ ಅದು ಇತರ ಭಾಷೆಗಳಿಗೆ ಡಬ್ ಆಗುತ್ತದೆಯಷ್ಟೇ ಅಲ್ಲದೆ ಡಬ್ಬಿಂಗ್ ಧಾರಾವಾಹಿಗಳ ಹಾವಳಿಯೂ ಇರುವುದಿಲ್ಲ ಎಂಬುದನ್ನು ಮರೆಯುವುದೇಕೆ? ಎಲ್ಲದಕ್ಕಿಂತ ಹೆಚ್ಚಾಗಿ ಡಬ್ಬಿಂಗ್ ಅನ್ನು ನಮ್ಮ ದೇಶದ ಯಾವ ಕಾನೂನೂ ನಿಷೇಧಿಸಿಲ್ಲ.
ಗುಣಮಟ್ಟದ ಧಾರಾವಾಹಿಗಳನ್ನು ನಿರ್ಮಿಸುವ ಮೂಲಕ ಸ್ಪರ್ಧೆಯನ್ನು ಎದುರಿಸುವ ಬದಲಿಗೆ ಗೂಂಡಾಗಿರಿಯ ಮೂಲಕ ಲಾಭ ಸಾಧಿಸಲು ಹೊರಟವರ ವಿರುದ್ಧ ಕಠಿಣ ಕಾನೂನು ಕ್ರಮದ ಅಗತ್ಯವಿದೆ. ಯಾವುದೇ ಉದ್ಯಮ ಲಾಭಕೋರ ಸ್ವಾರ್ಥಿ ಸಂಘಟನೆಗಳ ಅಡಿಯಾಳಾಗುವುದು ಬಹಳ ಕೆಟ್ಟದ್ದು. ಇದನ್ನು ಮೊಳಕೆಯಲ್ಲೇ ಚಿವುಟುವ ಅಗತ್ಯವಿದೆ.



Click it and Unblock the Notifications