Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಜೀ ಟಿವಿ ಮೇಲೆ ಸ್ವಾರ್ಥಿಗಳ 'ಗೂಂಡಾಗಿರಿ'

ಈ 'ದ್ರೋಹ'ವನ್ನು ಅದು ಪ್ರತಿಭಟಿಸಿದ್ದು ಜೀ ವಾಹಿನಿ ಕಚೇರಿಯ ಮೇಲೆ ದಾಳಿ ನಡೆಸಿ ಅಲ್ಲಿರುವ ವಸ್ತುಗಳನ್ನು ನಾಶ ಮಾಡುವ ಗೂಂಡಾಗಿರಿಯ ಮೂಲಕ! ಈ 'ಪ್ರತಿಭಟನೆ'ಯಿಂದ ಕನ್ನಡದ ಅಸ್ಮಿತೆಗೆ ಲಾಭವೇನೂ ಆಗದಿದ್ದರೂ ಕನ್ನಡಾಭಿಮಾನವೆಂದರೆ ಗೂಂಡಾಗಿರಿ ಎಂದು ಜನರು ಭಾವಿಸುವಂಥ ವಾತಾವರಣ ಸೃಷ್ಟಿಯಾಯಿತು.
ಇಷ್ಟಕ್ಕೂ 'ವೀರ ನಾರಿ...' ಡಬ್ ಮಾಡಲಾದ ಕಾರ್ಯಕ್ರಮವೂ ಅಲ್ಲ. ಇದು ಕಿರುತೆರೆಯ ಪ್ರಮುಖ ಕಲಾವಿದ ಸುಚೇಂದ್ರ ಪ್ರಸಾದ್ ನಿರೂಪಕನಾಗಿ ಝಾನ್ಸಿಯ ರಾಣಿ ಬಾಲ್ಯವನ್ನು ವಿವರಿಸುವ ಒಂದು ಕಾರ್ಯಕ್ರಮ. ಲಕ್ಷ್ಮೀಬಾಯಿ ಬದುಕನ್ನು ಇಲ್ಲಿ ಮರು ಸೃಷ್ಟಿಸಲಾಗಿತ್ತು. ಮರು ಸೃಷ್ಟಿಸಲಾಗಿದ್ದ ಪಾತ್ರಗಳು ಹಿಂದಿಯಲ್ಲಿ ಮಾತನಾಡುವುದನ್ನು ಕನ್ನಡ ಸಬ್ ಟೈಟಲ್ ಜೊತೆ ತೋರಿಸಲಾಗುತ್ತಿತ್ತು.
ಇದು ಹೇಗೆ ಡಬ್ಬಿಂಗ್ ಆಗಲು ಸಾಧ್ಯ?
ಒಂದು ವೇಳೆ ಡಬ್ ಮಾಡಿದ ಕಾರ್ಯಕ್ರಮವನ್ನೇ ಪ್ರಸಾರ ಮಾಡಿದ್ದರೂ ಗೂಂಡಾಗಿರಿಯ ಮೂಲಕ ಅದನ್ನು ತಡೆಯುವ ಅಧಿಕಾರವನ್ನು ಈ ಸಂಘನೆಯವರಿಗೆ ಯಾರು ಕೊಟ್ಟರು?
ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಹನೀಯರ ಹಿನ್ನೆಲೆಯನ್ನು ನೋಡಿದರೆ ಇವರೆಲ್ಲಾ ತಮ್ಮ ಲಾಭದ ಪ್ರಮಾಣ ಕುಸಿಯುತ್ತದೆ ಎಂದು ಗೂಂಡಾಗಿರಿಗಿಳಿದಿದ್ದರೇ ಹೊರತು ಕನ್ನಡ ಉಳಿಸುವ ಕಾಳಜಿಯಿಂದಲ್ಲ ಎಂಬುದು ಸ್ಪಷ್ಟ.
ಡಬ್ ಮಾಡಿದ ಧಾರಾವಾಹಿಗಳಿಂದ ಕನ್ನಡಕ್ಕೆ ತೊಂದರೆಯಾಗುತ್ತದೆ ಎನ್ನುವವರು ಕನ್ನಡದಲ್ಲೇ ಉತ್ತಮ ಧಾರಾವಾಹಿಗಳು ಸೃಷ್ಟಿಯಾದರೆ ಅದು ಇತರ ಭಾಷೆಗಳಿಗೆ ಡಬ್ ಆಗುತ್ತದೆಯಷ್ಟೇ ಅಲ್ಲದೆ ಡಬ್ಬಿಂಗ್ ಧಾರಾವಾಹಿಗಳ ಹಾವಳಿಯೂ ಇರುವುದಿಲ್ಲ ಎಂಬುದನ್ನು ಮರೆಯುವುದೇಕೆ? ಎಲ್ಲದಕ್ಕಿಂತ ಹೆಚ್ಚಾಗಿ ಡಬ್ಬಿಂಗ್ ಅನ್ನು ನಮ್ಮ ದೇಶದ ಯಾವ ಕಾನೂನೂ ನಿಷೇಧಿಸಿಲ್ಲ.
ಗುಣಮಟ್ಟದ ಧಾರಾವಾಹಿಗಳನ್ನು ನಿರ್ಮಿಸುವ ಮೂಲಕ ಸ್ಪರ್ಧೆಯನ್ನು ಎದುರಿಸುವ ಬದಲಿಗೆ ಗೂಂಡಾಗಿರಿಯ ಮೂಲಕ ಲಾಭ ಸಾಧಿಸಲು ಹೊರಟವರ ವಿರುದ್ಧ ಕಠಿಣ ಕಾನೂನು ಕ್ರಮದ ಅಗತ್ಯವಿದೆ. ಯಾವುದೇ ಉದ್ಯಮ ಲಾಭಕೋರ ಸ್ವಾರ್ಥಿ ಸಂಘಟನೆಗಳ ಅಡಿಯಾಳಾಗುವುದು ಬಹಳ ಕೆಟ್ಟದ್ದು. ಇದನ್ನು ಮೊಳಕೆಯಲ್ಲೇ ಚಿವುಟುವ ಅಗತ್ಯವಿದೆ.



Click it and Unblock the Notifications
