Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ರೀ, ಎಲ್ಲಿ ಹೊಂಟಿರೆಂದು ಹೇಳಿ ಹೋಗಬಾರದಾ?

ಒಂದು ಪಕ್ಷ ಮಕ್ಕಳೇನಾದರೂ ಹಿರಿಯರನ್ನು ಎಲ್ಲಿಗೆ ಹೊಂಟಿರೆಂದು ಕೇಳಿದರೆ, 'ಕೇಳಬೇಡವೆಂದು ಹೇಳಿರಲಿಲ್ಲ, ಮತ್ಯಾಕೆ ಕೇಳಿದೆ?' ಎಂದು ಗದರಿಸಿ ಸುಮ್ಮನೆ ಕೂಡಿಸುತ್ತಾರೆ. ಅಪ್ಪ ಹಾಕಿದ ಆಲದಮರಕ್ಕೆ ಜೋತು ಬೀಳುವ ಇವರು ಯಾಕೆ ಕೇಳಬೇಕು, ಯಾಕೆ ಕೇಳಬಾರದು ಎಂಬ ಬಗ್ಗೆ ಚಿಂತನೆಯನ್ನೇ ಮಾಡಿರುವುದಿಲ್ಲ, ಪ್ರಾಕ್ಟಿಕಲ್ ಚಿಂತನೆ ಇರುವುದಿಲ್ಲ.
ನಮ್ಮ ನಾಡಿನಲ್ಲಿ ಮೂಢನಂಬಿಕೆಗಳಿಗೇನೂ ಕೊರತೆಯಿಲ್ಲ. ಮೂರು ಜನ ಮನೆಯಿಂದ ಹೊರ ಹೋಗಬಾರದು, ಅಂಗಿಗೆ ಎಡಗೈ ಮೊದಲು ಹಾಕಬಾರದು, ಬೆಕ್ಕು ಅಡ್ಡ ಬಂದರೆ ಮುಂದೆ ಹೋಗಬಾರದು, ಗಡಿಯಾರ ಕೆಟ್ಟರೆ ನಮ್ಮ ಟೈಮೂ ಕೆಟ್ಟುಹೋಗುತ್ತದೆ, ನಾಯಿ ಊಳಿಡುವ ಧ್ವನಿ ಕೇಳಿದರೆ ಏನೋ ಕೆಡುಕಾಗುತ್ತದೆ, ಕಪ್ಪೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ... ಇತ್ಯಾದಿ ಇತ್ಯಾದಿ.
ಈ ಮೂಢನಂಬಿಕೆಗಳನ್ನು ಆಚರಿಸಿದರೆ ಕೆಡುಕು ಆಗುವುದಿಲ್ಲವಾದರೂ, ಪ್ರಯೋಜನವಾದರೂ ಆಗುತ್ತದಾ? ಇಲ್ಲ. ಆದರೆ, ಹೋಗುವಾಗ ಹೇಳಿಹೋಗದಿದ್ದರೆ ಎಂತೆಂಥ ಅವಘಡಗಳು ಸಂಭವಿಸುತ್ತವೆ ಹುಬ್ಬಳ್ಳಿಯಲ್ಲಿ ನಡೆದಿರುವ ಒಂದು ಘಟನೆಯೇ ಸಾಕ್ಷಿ. ಮನೆಯಿಂದ ಹೇಳದೆ ಕೇಳದೆ ಹೊರಟ ಒಬ್ಬ ಮನೆಯವರನ್ನೆಲ್ಲ ಪೇಚಿಗೆ ಸಿಕ್ಕಿಸಿದ ವಿಚಿತ್ರ ಘಟನೆ ಸಂಭವಿಸಿದೆ.
ಹೇಳದೆ ಕೇಳದೆ ಬೆಂಗಳೂರಿಗೆ ಬಂದ ಆ ಹುಬ್ಬಳ್ಳಿ ಹೈದನ ಎಡಗಾಲಿಗೆ ಆರು ಬೆರಳು. ಅವನನ್ನು ಹುಡುಕುತ್ತಿರುವಾಗ ಎಡಗಾಲಿಗೆ ಆರು ಬೆರಳಿರುವ ವ್ಯಕ್ತಿಯೊಬ್ಬನ ಶವ ಉಣಕಲ್ ಕೆರೆಯಲ್ಲಿ ಪತ್ತೆಯಾಗುತ್ತದೆ. ಅವನು ಇವನೇ ಎಂದು ತಿಳಿದು ಹೂತುಬಿಡಲಾಗುತ್ತದೆ. ಆದರೆ, ಆಶ್ಚರ್ಯಕರವೆಂಬಂತೆ, 'ಸತ್ತ'ವನೆಂದು ತಿಳಿದವ ವಾಪಸ್ ಬಂದಿರುತ್ತಾನೆ. ಅವನನ್ನು ಜೀವಂತವಾಗಿ ಕಂಡವರಿಗೆ ಆಶ್ಚರ್ಯ, ದುಗುಡ, ಸಿಟ್ಟು, ಭಯ.
ಚಂದ್ರಕಾಂತ್ ಕುಸನೂರು ಅವರ 'ಆನಿ ಬಂತಾನಿ' ಅಸಂಗತ ನಾಟಕದಲ್ಲಿ ಇಂಥದೇ ಪ್ರಸಂಗ ಬರುತ್ತದೆ. ಅಪ್ಪ ಹೊರಗೆ ಹೊಂಟಾಗ ಮಗ ಎಲ್ಲಿ ಹೊಂಟಿ ಎಂದು ಕೇಳಿದಾಗ ಅಮ್ಮ ಗದರಿಸುತ್ತಾಳೆ. ಆಗ ಪೆದ್ದ ಮಗ ಬಸವ, "ಎಲ್ಲಿ ಹೊಂಟಿರೆಂದು ಯಾಕೆ ಕೇಳಬೇಕಂದರ, ಅವರು ಹೋಗುವ ಸ್ಥಳ ಗೊತ್ತಾಗತದ ಮತ್ತ ಅವರು ಬರಲಾರದಂಥ ಸ್ಥಿತಿಯಲ್ಲಿದ್ದರ ಕರೆತರಲು ಅನುವಾಗುತ್ತದ" ಎಂಬ ಉತ್ತರ ಕೊಡುತ್ತಾನೆ. ಈಗ ಹೇಳಿ, ಹೊರಗೆ ಹೊಂಟವರನ್ನು ಎಲ್ಲಿಗೆ ಹೊಂಟಿರೆಂದು ಕೇಳಿದರೆ ತಪ್ಪೆ?



Click it and Unblock the Notifications
