Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ರೀ, ಎಲ್ಲಿ ಹೊಂಟಿರೆಂದು ಹೇಳಿ ಹೋಗಬಾರದಾ?

ಒಂದು ಪಕ್ಷ ಮಕ್ಕಳೇನಾದರೂ ಹಿರಿಯರನ್ನು ಎಲ್ಲಿಗೆ ಹೊಂಟಿರೆಂದು ಕೇಳಿದರೆ, 'ಕೇಳಬೇಡವೆಂದು ಹೇಳಿರಲಿಲ್ಲ, ಮತ್ಯಾಕೆ ಕೇಳಿದೆ?' ಎಂದು ಗದರಿಸಿ ಸುಮ್ಮನೆ ಕೂಡಿಸುತ್ತಾರೆ. ಅಪ್ಪ ಹಾಕಿದ ಆಲದಮರಕ್ಕೆ ಜೋತು ಬೀಳುವ ಇವರು ಯಾಕೆ ಕೇಳಬೇಕು, ಯಾಕೆ ಕೇಳಬಾರದು ಎಂಬ ಬಗ್ಗೆ ಚಿಂತನೆಯನ್ನೇ ಮಾಡಿರುವುದಿಲ್ಲ, ಪ್ರಾಕ್ಟಿಕಲ್ ಚಿಂತನೆ ಇರುವುದಿಲ್ಲ.
ನಮ್ಮ ನಾಡಿನಲ್ಲಿ ಮೂಢನಂಬಿಕೆಗಳಿಗೇನೂ ಕೊರತೆಯಿಲ್ಲ. ಮೂರು ಜನ ಮನೆಯಿಂದ ಹೊರ ಹೋಗಬಾರದು, ಅಂಗಿಗೆ ಎಡಗೈ ಮೊದಲು ಹಾಕಬಾರದು, ಬೆಕ್ಕು ಅಡ್ಡ ಬಂದರೆ ಮುಂದೆ ಹೋಗಬಾರದು, ಗಡಿಯಾರ ಕೆಟ್ಟರೆ ನಮ್ಮ ಟೈಮೂ ಕೆಟ್ಟುಹೋಗುತ್ತದೆ, ನಾಯಿ ಊಳಿಡುವ ಧ್ವನಿ ಕೇಳಿದರೆ ಏನೋ ಕೆಡುಕಾಗುತ್ತದೆ, ಕಪ್ಪೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ... ಇತ್ಯಾದಿ ಇತ್ಯಾದಿ.
ಈ ಮೂಢನಂಬಿಕೆಗಳನ್ನು ಆಚರಿಸಿದರೆ ಕೆಡುಕು ಆಗುವುದಿಲ್ಲವಾದರೂ, ಪ್ರಯೋಜನವಾದರೂ ಆಗುತ್ತದಾ? ಇಲ್ಲ. ಆದರೆ, ಹೋಗುವಾಗ ಹೇಳಿಹೋಗದಿದ್ದರೆ ಎಂತೆಂಥ ಅವಘಡಗಳು ಸಂಭವಿಸುತ್ತವೆ ಹುಬ್ಬಳ್ಳಿಯಲ್ಲಿ ನಡೆದಿರುವ ಒಂದು ಘಟನೆಯೇ ಸಾಕ್ಷಿ. ಮನೆಯಿಂದ ಹೇಳದೆ ಕೇಳದೆ ಹೊರಟ ಒಬ್ಬ ಮನೆಯವರನ್ನೆಲ್ಲ ಪೇಚಿಗೆ ಸಿಕ್ಕಿಸಿದ ವಿಚಿತ್ರ ಘಟನೆ ಸಂಭವಿಸಿದೆ.
ಹೇಳದೆ ಕೇಳದೆ ಬೆಂಗಳೂರಿಗೆ ಬಂದ ಆ ಹುಬ್ಬಳ್ಳಿ ಹೈದನ ಎಡಗಾಲಿಗೆ ಆರು ಬೆರಳು. ಅವನನ್ನು ಹುಡುಕುತ್ತಿರುವಾಗ ಎಡಗಾಲಿಗೆ ಆರು ಬೆರಳಿರುವ ವ್ಯಕ್ತಿಯೊಬ್ಬನ ಶವ ಉಣಕಲ್ ಕೆರೆಯಲ್ಲಿ ಪತ್ತೆಯಾಗುತ್ತದೆ. ಅವನು ಇವನೇ ಎಂದು ತಿಳಿದು ಹೂತುಬಿಡಲಾಗುತ್ತದೆ. ಆದರೆ, ಆಶ್ಚರ್ಯಕರವೆಂಬಂತೆ, 'ಸತ್ತ'ವನೆಂದು ತಿಳಿದವ ವಾಪಸ್ ಬಂದಿರುತ್ತಾನೆ. ಅವನನ್ನು ಜೀವಂತವಾಗಿ ಕಂಡವರಿಗೆ ಆಶ್ಚರ್ಯ, ದುಗುಡ, ಸಿಟ್ಟು, ಭಯ.
ಚಂದ್ರಕಾಂತ್ ಕುಸನೂರು ಅವರ 'ಆನಿ ಬಂತಾನಿ' ಅಸಂಗತ ನಾಟಕದಲ್ಲಿ ಇಂಥದೇ ಪ್ರಸಂಗ ಬರುತ್ತದೆ. ಅಪ್ಪ ಹೊರಗೆ ಹೊಂಟಾಗ ಮಗ ಎಲ್ಲಿ ಹೊಂಟಿ ಎಂದು ಕೇಳಿದಾಗ ಅಮ್ಮ ಗದರಿಸುತ್ತಾಳೆ. ಆಗ ಪೆದ್ದ ಮಗ ಬಸವ, "ಎಲ್ಲಿ ಹೊಂಟಿರೆಂದು ಯಾಕೆ ಕೇಳಬೇಕಂದರ, ಅವರು ಹೋಗುವ ಸ್ಥಳ ಗೊತ್ತಾಗತದ ಮತ್ತ ಅವರು ಬರಲಾರದಂಥ ಸ್ಥಿತಿಯಲ್ಲಿದ್ದರ ಕರೆತರಲು ಅನುವಾಗುತ್ತದ" ಎಂಬ ಉತ್ತರ ಕೊಡುತ್ತಾನೆ. ಈಗ ಹೇಳಿ, ಹೊರಗೆ ಹೊಂಟವರನ್ನು ಎಲ್ಲಿಗೆ ಹೊಂಟಿರೆಂದು ಕೇಳಿದರೆ ತಪ್ಪೆ?



Click it and Unblock the Notifications