Latest Updates
-
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ?
ರೀ, ಎಲ್ಲಿ ಹೊಂಟಿರೆಂದು ಹೇಳಿ ಹೋಗಬಾರದಾ?

ಒಂದು ಪಕ್ಷ ಮಕ್ಕಳೇನಾದರೂ ಹಿರಿಯರನ್ನು ಎಲ್ಲಿಗೆ ಹೊಂಟಿರೆಂದು ಕೇಳಿದರೆ, 'ಕೇಳಬೇಡವೆಂದು ಹೇಳಿರಲಿಲ್ಲ, ಮತ್ಯಾಕೆ ಕೇಳಿದೆ?' ಎಂದು ಗದರಿಸಿ ಸುಮ್ಮನೆ ಕೂಡಿಸುತ್ತಾರೆ. ಅಪ್ಪ ಹಾಕಿದ ಆಲದಮರಕ್ಕೆ ಜೋತು ಬೀಳುವ ಇವರು ಯಾಕೆ ಕೇಳಬೇಕು, ಯಾಕೆ ಕೇಳಬಾರದು ಎಂಬ ಬಗ್ಗೆ ಚಿಂತನೆಯನ್ನೇ ಮಾಡಿರುವುದಿಲ್ಲ, ಪ್ರಾಕ್ಟಿಕಲ್ ಚಿಂತನೆ ಇರುವುದಿಲ್ಲ.
ನಮ್ಮ ನಾಡಿನಲ್ಲಿ ಮೂಢನಂಬಿಕೆಗಳಿಗೇನೂ ಕೊರತೆಯಿಲ್ಲ. ಮೂರು ಜನ ಮನೆಯಿಂದ ಹೊರ ಹೋಗಬಾರದು, ಅಂಗಿಗೆ ಎಡಗೈ ಮೊದಲು ಹಾಕಬಾರದು, ಬೆಕ್ಕು ಅಡ್ಡ ಬಂದರೆ ಮುಂದೆ ಹೋಗಬಾರದು, ಗಡಿಯಾರ ಕೆಟ್ಟರೆ ನಮ್ಮ ಟೈಮೂ ಕೆಟ್ಟುಹೋಗುತ್ತದೆ, ನಾಯಿ ಊಳಿಡುವ ಧ್ವನಿ ಕೇಳಿದರೆ ಏನೋ ಕೆಡುಕಾಗುತ್ತದೆ, ಕಪ್ಪೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ... ಇತ್ಯಾದಿ ಇತ್ಯಾದಿ.
ಈ ಮೂಢನಂಬಿಕೆಗಳನ್ನು ಆಚರಿಸಿದರೆ ಕೆಡುಕು ಆಗುವುದಿಲ್ಲವಾದರೂ, ಪ್ರಯೋಜನವಾದರೂ ಆಗುತ್ತದಾ? ಇಲ್ಲ. ಆದರೆ, ಹೋಗುವಾಗ ಹೇಳಿಹೋಗದಿದ್ದರೆ ಎಂತೆಂಥ ಅವಘಡಗಳು ಸಂಭವಿಸುತ್ತವೆ ಹುಬ್ಬಳ್ಳಿಯಲ್ಲಿ ನಡೆದಿರುವ ಒಂದು ಘಟನೆಯೇ ಸಾಕ್ಷಿ. ಮನೆಯಿಂದ ಹೇಳದೆ ಕೇಳದೆ ಹೊರಟ ಒಬ್ಬ ಮನೆಯವರನ್ನೆಲ್ಲ ಪೇಚಿಗೆ ಸಿಕ್ಕಿಸಿದ ವಿಚಿತ್ರ ಘಟನೆ ಸಂಭವಿಸಿದೆ.
ಹೇಳದೆ ಕೇಳದೆ ಬೆಂಗಳೂರಿಗೆ ಬಂದ ಆ ಹುಬ್ಬಳ್ಳಿ ಹೈದನ ಎಡಗಾಲಿಗೆ ಆರು ಬೆರಳು. ಅವನನ್ನು ಹುಡುಕುತ್ತಿರುವಾಗ ಎಡಗಾಲಿಗೆ ಆರು ಬೆರಳಿರುವ ವ್ಯಕ್ತಿಯೊಬ್ಬನ ಶವ ಉಣಕಲ್ ಕೆರೆಯಲ್ಲಿ ಪತ್ತೆಯಾಗುತ್ತದೆ. ಅವನು ಇವನೇ ಎಂದು ತಿಳಿದು ಹೂತುಬಿಡಲಾಗುತ್ತದೆ. ಆದರೆ, ಆಶ್ಚರ್ಯಕರವೆಂಬಂತೆ, 'ಸತ್ತ'ವನೆಂದು ತಿಳಿದವ ವಾಪಸ್ ಬಂದಿರುತ್ತಾನೆ. ಅವನನ್ನು ಜೀವಂತವಾಗಿ ಕಂಡವರಿಗೆ ಆಶ್ಚರ್ಯ, ದುಗುಡ, ಸಿಟ್ಟು, ಭಯ.
ಚಂದ್ರಕಾಂತ್ ಕುಸನೂರು ಅವರ 'ಆನಿ ಬಂತಾನಿ' ಅಸಂಗತ ನಾಟಕದಲ್ಲಿ ಇಂಥದೇ ಪ್ರಸಂಗ ಬರುತ್ತದೆ. ಅಪ್ಪ ಹೊರಗೆ ಹೊಂಟಾಗ ಮಗ ಎಲ್ಲಿ ಹೊಂಟಿ ಎಂದು ಕೇಳಿದಾಗ ಅಮ್ಮ ಗದರಿಸುತ್ತಾಳೆ. ಆಗ ಪೆದ್ದ ಮಗ ಬಸವ, "ಎಲ್ಲಿ ಹೊಂಟಿರೆಂದು ಯಾಕೆ ಕೇಳಬೇಕಂದರ, ಅವರು ಹೋಗುವ ಸ್ಥಳ ಗೊತ್ತಾಗತದ ಮತ್ತ ಅವರು ಬರಲಾರದಂಥ ಸ್ಥಿತಿಯಲ್ಲಿದ್ದರ ಕರೆತರಲು ಅನುವಾಗುತ್ತದ" ಎಂಬ ಉತ್ತರ ಕೊಡುತ್ತಾನೆ. ಈಗ ಹೇಳಿ, ಹೊರಗೆ ಹೊಂಟವರನ್ನು ಎಲ್ಲಿಗೆ ಹೊಂಟಿರೆಂದು ಕೇಳಿದರೆ ತಪ್ಪೆ?



Click it and Unblock the Notifications











