Latest Updates
-
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ! -
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ?
ಅಬ್ದುಲ್ ಕಲಾಂ ಮಣಿವಣ್ಣನ್ ಮತಾಂತರದ ಹಿಂದುಮುಂದು

ಪಿ. ಮಣಿವಣ್ಣನ್ ಎಂಬುದರ ಬದಲಿಗೆ ಅಬ್ದುಲ್ ಕಲಾಂ ಮಣಿ (ಎ.ಕೆ. ಮಣಿ) ಎಂದು ಇಸ್ಲಾಂ ಧರ್ಮಕ್ಕೆ ಅನುಗುಣವಾಗಿ ಮರು ನಾಮಕರಣ ಮಾಡಿಕೊಂಡಿದ್ದಾರೆ. ಜೊತೆಗೆ ಸಲ್ಮಾ ಅವರೊಂದಿಗಿನ ವಿವಾಹ ಇಸ್ಲಾಂ ಧರ್ಮದ ರೀತಿ-ರಿವಾಜುಗಳ ಪ್ರಕಾರವೇ ನೆರವೇರಿದೆ ಎಂಬ ದಟ್ಟ ವದಂತಿಗಳು ಸುಳಿದಾಡುತ್ತಿದೆ.
ಮಣಿವಣ್ಣನ್ ಅವರ ಎರಡನೇ ವಿವಾಹದ ಬಗ್ಗೆ ಯಾರದೂ ಆಕ್ಷೇಪವಿಲ್ಲ. ಆದರೆ ಈಗ ಈ ವಿಷಯ ಅಧಿಕಾರಿ ವಲಯ, ರಾಜಕಾರಣಿಗಳ ವಲಯದಲ್ಲಿ ತೀವ್ರ ಚರ್ಚೆಯಾಗಲು ಮುಖ್ಯ ಕಾರಣವಿದೆ. ಸಲ್ಮಾ ಅವರನ್ನು ವಿವಾಹವಾಗಲು ಐಎಎಸ್ ಅಧಿಕಾರಿಯಾದ ಮಣಿವಣ್ಣನ್ ಅವರು ಹಿಂದೂ ಧರ್ಮ ತೊರೆದು ಇಸ್ಲಾಂ ಧರ್ಮ ಸ್ವೀಕರಿಸಿದ್ದಾರೆ ಎಂಬ ವಿಷಯ ಚರ್ಚೆಯಾಗುತ್ತಿದೆ.
ಈ ಹಿಂದೆ ಮೈಸೂರು ಉಪಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನೀರಿಳಿಸಿದ್ದ ಮಣಿವಣ್ಣನ್ ಮೂಲತಃ ತಮಿಳುನಾಡಿನವರು. ಅವರ ತಂದೆ ಪೂಣಯ್ಯ ದಲಿತ ಕುಟುಂಬದಿಂದ ಬಂದವರು. ಮದುರೈನಲ್ಲಿ ಶ್ರೀರಂಗಂನಲ್ಲಿ ವಾಸವಾಗಿದ್ದ ಶಿಸ್ತಿನ ಸಿಪಾಯಿ ಪೂಣಯ್ಯ ರೈಲ್ವೆ ಇಲಾಖೆಯಲ್ಲಿದ್ದರು.
ಪೂಣಯ್ಯಗೆ ಐವರು ಪುತ್ರರು ಇದ್ದಾರೆ. ಮೂವರು ಇಂಜಿನಿಯರುಗಳು ಮತ್ತು ಇಬ್ಬರು ಡಾಕ್ಟರುಗಳು. ಕೆಮಿಕಲ್ ಇಂಜಿನಿಯರ್ ಮಣಿ, 1998ರ ಐಎಎಸ್ ಅಧಿಕಾರಿ. ಟಾಸ್ಕ್ ಮಾಸ್ಟರ್ ಮಣಿವಣ್ಣನ್ ಗೆ ಇನ್ನೂ ಮೂರು ದಶಕಗಳ ಐಎಎಸ್ ಸೇವೆ ಉಳಿದಿದೆ. ಪ್ರೀತಿಸಿದವರಿಗಾಗಿ ಐಎಎಸ್ ಅಧಿಕಾರಿಯೊಬ್ಬರು ಮತಾಂತರವಾದ ಉದಾಹರಣೆಗಳು ಕರ್ನಾಟಕದಲ್ಲಿಲ್ಲ. ಮಣಿ ಮರು ವಿವಾಹ ಜೀವನ ಸುಖಮಯವಾಗಿರಲಿ.



Click it and Unblock the Notifications