Latest Updates
-
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ
ಹೊಡೆಯೋ ಗಂಡ ಅಳೋ ಹೆಂಡತಿ ಎದ್ದು ಕುಣಿಯೋ ಸಮಾಜ

ಇತ್ತ, ಕೌಟುಂಬಿಕ ಹಿಂಸೆ, ದೌರ್ಜನ್ಯ, ಕಾನೂನನ್ನು ಕೈಗೆತ್ತಿಕೊಂಡ ಆರೋಪದ ಮೇಲೆ ನಟನನ್ನು ಪೊಲೀಸರು ಬಂಧಿಸುತ್ತಾರೆ. ವಿಚಾರಣೆ ವೇಳೆ ಆತ ತಾನು ಯಕ್ಕಾ ಮಕ್ಕಾ ಮದ್ಯಪಾನ ಮಾಡಿದುದಾಗಿಯೂ, ಕುಡಿದ ಅಮಲಿನಲ್ಲಿ ಚಪ್ಪಲಿಯಿಂದ ಹೆಂಡತಿಯನ್ನು ಹೊಡೆದುದಾಗಿಯೂ ತಪ್ಪೊಪ್ಪಿಕೊಳ್ಳುತ್ತಾನೆ.
ಈ ಗಂಡ ಹೆಂಡತಿಯ ನಡುವಿನ ಮನಸ್ತಾಪ ಏಕಾಏಕಿ ಉಂಟಾದುದಲ್ಲ. ಕಳೆದ ಒಂದು ವರ್ಷದಿಂದ ನಿತ್ಯ ಜಗಳ ಕದನ ಇತ್ತು, ಇಂದು ಅದು ಪ್ರಕೋಪಕ್ಕೆ ಹೋಯಿತು ಅಷ್ಟೇ ಎಂದು ನಟನ ಅತ್ತೆ ಪೊಲೀಸರಿಗೆ ಹೇಳಿಕೆ ಕೊಡುತ್ತಾರೆ. ಹೆಂಡತಿ ಬರೆದ ದೂರು ಐದು ಪುಟಗಳಷ್ಟಿರುತ್ತದೆ.
ಇಷ್ಟಕ್ಕೂ ಸಂಸಾರದಲ್ಲಿ ಮನಸ್ತಾಪ ಯಾಕೆ ಬಂತು, ಅದಕ್ಕೆ ಹಿನ್ನೆಲೆ ಏನು. ಮನಸ್ತಾಪ ಇದ್ದರೆ ಅದಕ್ಕೆ ಪರಿಹಾರ ಹಿಂಸೆನಾ. ಇದೊಂದೂ ಅರ್ಥವಾಗದ ಸ್ಥಿತಿಯಲ್ಲಿರುವಾಗ ನಟನ ಸಂಸಾರವನ್ನು ಮತ್ತೆ ಸರಿದಾರಿಗೆ ತರುವ ಜವಾಬ್ದಾರಿಯನ್ನು ಸಮಾಜ ತನ್ನ ಹೆಗಲ ಮೇಲೆ ಎಳೆದುಕೊಳ್ಳುತ್ತದೆ.
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಮನವೊಲಿಸಿ ಗಂಡನ ಮೇಲೆ ಕೊಟ್ಟ ದೂರನ್ನು ವಾಪಸ್ಸು ಪಡೆಯುವಂತೆ ಗಣ್ಯರು ಮನವೊಲಿಸುತ್ತಾರೆ. ಮತ್ತೆ ತಪ್ಪು ಮಾಡುವುದಿಲ್ಲ ಎಂದು ನಟರಾಜ ಬರವಣಿಗೆಯಲ್ಲಿ ಕೊಟ್ಟರೆ ಮಾತ್ರ ಕೇಸ್ ವಾಪಸ್ ಎಂದು ಹೆಂಡತಿ ಮತ್ತು ಅತ್ತೆ ಹಠ ಹಿಡಿಯುತ್ತಾರೆ.
ಗಂಡ ಹೆಂಡತಿ ನಡುವೆ ಪ್ಯಾಚ್ ಅಪ್ ಮಾಡುವ ಕೆಲಸದಲ್ಲಿ ಉದ್ಯಮದ ಗಣ್ಯರು ನಿರತರಾಗುತ್ತಾರೆ. ತಮ್ಮ ಆರಾಧ್ಯ ದೇವನನ್ನು ಬಂಧಿಸಿರುವುದರ ವಿರುದ್ಧ ಅವನ ಅಭಿಮಾನಿ ಸಮೂಹ ಸಿಟ್ಟಾಗುತ್ತದೆ. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತದೆ. ಬಸ್ಸಿಗೆ ಕಲ್ಲು ತೂರುತ್ತದೆ. ಟಿವಿ ಚಾನಲ್ಲಿನವರ ಕ್ಯಾಮರಾಗಳು ಪುಡಿಪುಡಿ ಮಾಡುತ್ತಾರೆ.
ಈ ಮಧ್ಯೆ ಮಹಿಳಾ ಆಯೋಗವೂ ತನ್ನ ಮೂಗು ತೂರಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತದೆ. ಅದೆಲ್ಲ ನಿಮಗೆ ಟಿವಿಗಳಲ್ಲಿ ಕಾಣಸಿಗುತ್ತದೆ. ಮುಂದೇನು ಮುಂದೇನು ಎಂದು ಜನ ಕಾತರದಿಂದ ಕಾಯುತ್ತಿರುತ್ತಾರೆ.
ಇವಿಷ್ಟೂ ಒಂದು ಶುಕ್ರವಾರ ಬೆಳಗ್ಗೆ ನಡೆಯುವ ಕರ್ನಾಟಕದ ಬ್ರೇಕಿಂಗ್ ಸುದ್ದಿಗಳೆಂದು ಮಾಧ್ಯಮಗಳು ಓತಪ್ರೋತವಾಗಿ ವರದಿ, ಸುದ್ದಿಬಿಂಬ, ಸಂದರ್ಶನ, ಚಕ್ರಗೋಷ್ಠಿಗಳನ್ನು ನಡೆಸುತ್ತವೆ. ಬರೆದದ್ದನ್ನೇ ಬರೆಯುತ್ತಾರೆ, ಓದಿದ್ದನ್ನೇ ಓದುತ್ತಾರೆ.
ನಟ ಮತ್ತು ಆತನ ಹೆಂಡತಿಯ ನಡುವಿನ ಮನಸ್ತಾಪಕ್ಕೆ ನಿಜವಾದ ಕಾರಣಗಳೇನು ಎನ್ನುವುದು ಕಡೆಗೂ ಬಹಿರಂಗವಾಗುವುದಿಲ್ಲ. ಸೆಲೆಬ್ರಿಟಿ ನಟನ ನೆರವಿಗೆ ಸಮಾಜ ಧಾವಿಸುತ್ತದೆ. ಹೆಣ್ಣು ಕರಳು ಮತ್ತೆ ಹೇಗೋ ಹೊಂದಿಕೊಂಡು ಬಾಳುವ ಹಾದಿ ಹಿಡಿಯಲು ಹವಣಿಸುತ್ತದೆ.
ಇದೇ ಟೈಪ್ ಪ್ರಕರಣಗಳು ನಾಗರಿಕತೆಯ ಉದ್ದಕ್ಕೂ ನಡೆಯುತ್ತಾ ಬರುತ್ತವೆ. ಓಪಿಎಚ್ ರಸ್ತೆಯ ಓರ್ವ ಕುಡುಕ ಬಡಗಿ ಆತನ ಹೆಂಡತಿಗೆ ಹೊಡೆದುದು ಕಂಪ್ಲೇಟ್ ಆದರೆ ಆತ ಅಂದರ್ ಆಗುತ್ತಾನೆ. ಗಂಡನ ಕಣ್ತಪ್ಪಸಿ ಕಳ್ಳಾಟ ಆಡುವ ಮಾವಳ್ಳಿಯ ಮಳ್ಳಿ ಎದೆ ಎತ್ತಿಕೊಂಡು ತಿರುಗುತ್ತಾಳೆ. ಅವಳ ವಿರುದ್ಧ ಕೇಸು ಹಾಕಲೊಲ್ಲದ ಗಂಡ ಜೀವನದಲ್ಲಿ ಮೊದಲ ಬಾರಿಗೆ ಬಾರಿನ ಕಡೆ ನಡೆದು ಹೋಗುತ್ತಾನೆ.



Click it and Unblock the Notifications
