Latest Updates
-
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ!
ಪ್ರಥಮನ ಏಕಾದಶಿ: ಸೋಮವಾರ ಎಲ್ಲೆಡೆ ತಪ್ತ ಮುದ್ರಾಧಾರಣೆ

ಬೆಂಗಳೂರಿನಲ್ಲಿ ಶ್ರೀ ಪೇಜಾವರ ಹಿರಿಯ, ಶ್ರೀ ಕಾಣಿಯೂರು, ಶ್ರೀ ಉತ್ತರಾದಿ, ಶ್ರೀ ಪುತ್ತಿಗೆ, ಶ್ರೀ ಸೋದೆ ಮಠಾಧೀಶರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಶೀರೂರು ಮಠಾಧೀಶರು, ತುಮಕೂರಿನಲ್ಲಿ ಶ್ರೀ ಭೀಮನಕಟ್ಟೆ ಶ್ರೀಗಳು, ಬಳ್ಳಾರಿಯಲ್ಲಿ ಶ್ರೀ ಅದಮಾರು ಶ್ರೀಗಳು, ಮೈಸೂರಿನಲ್ಲಿ ಶ್ರೀ ಪಲಿಮಾರು ಮಠಾಧೀಶರು, ಹುಬ್ಬಳ್ಳಿಯಲ್ಲಿ ಶ್ರೀ ಭಂಡಾರಕೇರಿ ಮಠಾಧೀಶರು, ಶ್ರೀ ಪೇಜಾವರ ಕಿರಿಯ ಶ್ರೀಗಳು ಚೆನ್ನೈಯಲ್ಲಿ ಮುದ್ರಾಧಾರಣೆ ನಡೆಸಲಿದ್ದಾರೆ.
ಏನಿದು ಮುದ್ರಾಧಾರಣೆ ಸಂಭ್ರಮ ?: ಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ. ತಪ್ತ ಅಂದರೆ ಕಾಯಿಸಿದ ವಿವಿಧ ಚಿಹ್ನೆಗಳ ಮುದ್ರೆಗಳನ್ನು ಹಾಕುವುದು. ಈ ಚಿಹ್ನೆಗಳು ವಿಷ್ಣುವಿನ ಆಭರಣ ಸಾಧನಗಳು. ಇದು ವೈಷ್ಣವ ಲಾಂಛನವಾಗಿದ್ದು ಮಠಾಧೀಶರು ಮಾತ್ರ ಹಾಕುತ್ತಾರೆ.
ವಿವಿಧ ಸಂಸ್ಕಾರಗಳಲ್ಲಿ ಮುದ್ರಾಧಾರಣೆಯೂ ಒಂದಾಗಿದ್ದು ಇದನ್ನು ಮಹಿಳೆಯರು, ಪುರುಷರು, ಆಬಾಲವೃದ್ಧರು, ಯಾವುದೇ ಜಾತಿಮತದವರು ಹಾಕಿಕೊಳ್ಳಬಹುದಾಗಿದೆ. ಪ್ರಥಮನ ಏಕಾದಶಿ ಮಾತ್ರವಲ್ಲದೆ ಇತರ ದಿನಗಳಲ್ಲಿಯೂ ಮುದ್ರಾಧಾರಣೆ ನಡೆಯುತ್ತದೆ. ಆದರೆ ಇದಕ್ಕೆ ಅಪವಾದವೆಂಬಂತೆ ಉಪ್ಪಿನಂಗಡಿ ಸಮೀಪದ ಎರ್ಕಿಮಠದಲ್ಲಿ ಮಾತ್ರ ಗೃಹಸ್ಥಾಶ್ರಮಿಗಳು ಮುದ್ರಾಧಾರಣೆ ನಡೆಸಲು ಮಧ್ವಾಚಾರ್ಯರು ಅನುಮತಿ ಕೊಟ್ಟಿದ್ದರು. ಇದು ಇಂದಿಗೂ ನಡೆದು ಬರುತ್ತಿದೆ.



Click it and Unblock the Notifications