Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪ್ರಥಮನ ಏಕಾದಶಿ: ಸೋಮವಾರ ಎಲ್ಲೆಡೆ ತಪ್ತ ಮುದ್ರಾಧಾರಣೆ

ಬೆಂಗಳೂರಿನಲ್ಲಿ ಶ್ರೀ ಪೇಜಾವರ ಹಿರಿಯ, ಶ್ರೀ ಕಾಣಿಯೂರು, ಶ್ರೀ ಉತ್ತರಾದಿ, ಶ್ರೀ ಪುತ್ತಿಗೆ, ಶ್ರೀ ಸೋದೆ ಮಠಾಧೀಶರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಶೀರೂರು ಮಠಾಧೀಶರು, ತುಮಕೂರಿನಲ್ಲಿ ಶ್ರೀ ಭೀಮನಕಟ್ಟೆ ಶ್ರೀಗಳು, ಬಳ್ಳಾರಿಯಲ್ಲಿ ಶ್ರೀ ಅದಮಾರು ಶ್ರೀಗಳು, ಮೈಸೂರಿನಲ್ಲಿ ಶ್ರೀ ಪಲಿಮಾರು ಮಠಾಧೀಶರು, ಹುಬ್ಬಳ್ಳಿಯಲ್ಲಿ ಶ್ರೀ ಭಂಡಾರಕೇರಿ ಮಠಾಧೀಶರು, ಶ್ರೀ ಪೇಜಾವರ ಕಿರಿಯ ಶ್ರೀಗಳು ಚೆನ್ನೈಯಲ್ಲಿ ಮುದ್ರಾಧಾರಣೆ ನಡೆಸಲಿದ್ದಾರೆ.
ಏನಿದು ಮುದ್ರಾಧಾರಣೆ ಸಂಭ್ರಮ ?: ಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ. ತಪ್ತ ಅಂದರೆ ಕಾಯಿಸಿದ ವಿವಿಧ ಚಿಹ್ನೆಗಳ ಮುದ್ರೆಗಳನ್ನು ಹಾಕುವುದು. ಈ ಚಿಹ್ನೆಗಳು ವಿಷ್ಣುವಿನ ಆಭರಣ ಸಾಧನಗಳು. ಇದು ವೈಷ್ಣವ ಲಾಂಛನವಾಗಿದ್ದು ಮಠಾಧೀಶರು ಮಾತ್ರ ಹಾಕುತ್ತಾರೆ.
ವಿವಿಧ ಸಂಸ್ಕಾರಗಳಲ್ಲಿ ಮುದ್ರಾಧಾರಣೆಯೂ ಒಂದಾಗಿದ್ದು ಇದನ್ನು ಮಹಿಳೆಯರು, ಪುರುಷರು, ಆಬಾಲವೃದ್ಧರು, ಯಾವುದೇ ಜಾತಿಮತದವರು ಹಾಕಿಕೊಳ್ಳಬಹುದಾಗಿದೆ. ಪ್ರಥಮನ ಏಕಾದಶಿ ಮಾತ್ರವಲ್ಲದೆ ಇತರ ದಿನಗಳಲ್ಲಿಯೂ ಮುದ್ರಾಧಾರಣೆ ನಡೆಯುತ್ತದೆ. ಆದರೆ ಇದಕ್ಕೆ ಅಪವಾದವೆಂಬಂತೆ ಉಪ್ಪಿನಂಗಡಿ ಸಮೀಪದ ಎರ್ಕಿಮಠದಲ್ಲಿ ಮಾತ್ರ ಗೃಹಸ್ಥಾಶ್ರಮಿಗಳು ಮುದ್ರಾಧಾರಣೆ ನಡೆಸಲು ಮಧ್ವಾಚಾರ್ಯರು ಅನುಮತಿ ಕೊಟ್ಟಿದ್ದರು. ಇದು ಇಂದಿಗೂ ನಡೆದು ಬರುತ್ತಿದೆ.



Click it and Unblock the Notifications