Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಪ್ರಥಮನ ಏಕಾದಶಿ: ಸೋಮವಾರ ಎಲ್ಲೆಡೆ ತಪ್ತ ಮುದ್ರಾಧಾರಣೆ

ಬೆಂಗಳೂರಿನಲ್ಲಿ ಶ್ರೀ ಪೇಜಾವರ ಹಿರಿಯ, ಶ್ರೀ ಕಾಣಿಯೂರು, ಶ್ರೀ ಉತ್ತರಾದಿ, ಶ್ರೀ ಪುತ್ತಿಗೆ, ಶ್ರೀ ಸೋದೆ ಮಠಾಧೀಶರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಶೀರೂರು ಮಠಾಧೀಶರು, ತುಮಕೂರಿನಲ್ಲಿ ಶ್ರೀ ಭೀಮನಕಟ್ಟೆ ಶ್ರೀಗಳು, ಬಳ್ಳಾರಿಯಲ್ಲಿ ಶ್ರೀ ಅದಮಾರು ಶ್ರೀಗಳು, ಮೈಸೂರಿನಲ್ಲಿ ಶ್ರೀ ಪಲಿಮಾರು ಮಠಾಧೀಶರು, ಹುಬ್ಬಳ್ಳಿಯಲ್ಲಿ ಶ್ರೀ ಭಂಡಾರಕೇರಿ ಮಠಾಧೀಶರು, ಶ್ರೀ ಪೇಜಾವರ ಕಿರಿಯ ಶ್ರೀಗಳು ಚೆನ್ನೈಯಲ್ಲಿ ಮುದ್ರಾಧಾರಣೆ ನಡೆಸಲಿದ್ದಾರೆ.
ಏನಿದು ಮುದ್ರಾಧಾರಣೆ ಸಂಭ್ರಮ ?: ಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ. ತಪ್ತ ಅಂದರೆ ಕಾಯಿಸಿದ ವಿವಿಧ ಚಿಹ್ನೆಗಳ ಮುದ್ರೆಗಳನ್ನು ಹಾಕುವುದು. ಈ ಚಿಹ್ನೆಗಳು ವಿಷ್ಣುವಿನ ಆಭರಣ ಸಾಧನಗಳು. ಇದು ವೈಷ್ಣವ ಲಾಂಛನವಾಗಿದ್ದು ಮಠಾಧೀಶರು ಮಾತ್ರ ಹಾಕುತ್ತಾರೆ.
ವಿವಿಧ ಸಂಸ್ಕಾರಗಳಲ್ಲಿ ಮುದ್ರಾಧಾರಣೆಯೂ ಒಂದಾಗಿದ್ದು ಇದನ್ನು ಮಹಿಳೆಯರು, ಪುರುಷರು, ಆಬಾಲವೃದ್ಧರು, ಯಾವುದೇ ಜಾತಿಮತದವರು ಹಾಕಿಕೊಳ್ಳಬಹುದಾಗಿದೆ. ಪ್ರಥಮನ ಏಕಾದಶಿ ಮಾತ್ರವಲ್ಲದೆ ಇತರ ದಿನಗಳಲ್ಲಿಯೂ ಮುದ್ರಾಧಾರಣೆ ನಡೆಯುತ್ತದೆ. ಆದರೆ ಇದಕ್ಕೆ ಅಪವಾದವೆಂಬಂತೆ ಉಪ್ಪಿನಂಗಡಿ ಸಮೀಪದ ಎರ್ಕಿಮಠದಲ್ಲಿ ಮಾತ್ರ ಗೃಹಸ್ಥಾಶ್ರಮಿಗಳು ಮುದ್ರಾಧಾರಣೆ ನಡೆಸಲು ಮಧ್ವಾಚಾರ್ಯರು ಅನುಮತಿ ಕೊಟ್ಟಿದ್ದರು. ಇದು ಇಂದಿಗೂ ನಡೆದು ಬರುತ್ತಿದೆ.



Click it and Unblock the Notifications