Latest Updates
-
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ
ಪ್ರಥಮನ ಏಕಾದಶಿ: ಸೋಮವಾರ ಎಲ್ಲೆಡೆ ತಪ್ತ ಮುದ್ರಾಧಾರಣೆ

ಬೆಂಗಳೂರಿನಲ್ಲಿ ಶ್ರೀ ಪೇಜಾವರ ಹಿರಿಯ, ಶ್ರೀ ಕಾಣಿಯೂರು, ಶ್ರೀ ಉತ್ತರಾದಿ, ಶ್ರೀ ಪುತ್ತಿಗೆ, ಶ್ರೀ ಸೋದೆ ಮಠಾಧೀಶರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಶೀರೂರು ಮಠಾಧೀಶರು, ತುಮಕೂರಿನಲ್ಲಿ ಶ್ರೀ ಭೀಮನಕಟ್ಟೆ ಶ್ರೀಗಳು, ಬಳ್ಳಾರಿಯಲ್ಲಿ ಶ್ರೀ ಅದಮಾರು ಶ್ರೀಗಳು, ಮೈಸೂರಿನಲ್ಲಿ ಶ್ರೀ ಪಲಿಮಾರು ಮಠಾಧೀಶರು, ಹುಬ್ಬಳ್ಳಿಯಲ್ಲಿ ಶ್ರೀ ಭಂಡಾರಕೇರಿ ಮಠಾಧೀಶರು, ಶ್ರೀ ಪೇಜಾವರ ಕಿರಿಯ ಶ್ರೀಗಳು ಚೆನ್ನೈಯಲ್ಲಿ ಮುದ್ರಾಧಾರಣೆ ನಡೆಸಲಿದ್ದಾರೆ.
ಏನಿದು ಮುದ್ರಾಧಾರಣೆ ಸಂಭ್ರಮ ?: ಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ. ತಪ್ತ ಅಂದರೆ ಕಾಯಿಸಿದ ವಿವಿಧ ಚಿಹ್ನೆಗಳ ಮುದ್ರೆಗಳನ್ನು ಹಾಕುವುದು. ಈ ಚಿಹ್ನೆಗಳು ವಿಷ್ಣುವಿನ ಆಭರಣ ಸಾಧನಗಳು. ಇದು ವೈಷ್ಣವ ಲಾಂಛನವಾಗಿದ್ದು ಮಠಾಧೀಶರು ಮಾತ್ರ ಹಾಕುತ್ತಾರೆ.
ವಿವಿಧ ಸಂಸ್ಕಾರಗಳಲ್ಲಿ ಮುದ್ರಾಧಾರಣೆಯೂ ಒಂದಾಗಿದ್ದು ಇದನ್ನು ಮಹಿಳೆಯರು, ಪುರುಷರು, ಆಬಾಲವೃದ್ಧರು, ಯಾವುದೇ ಜಾತಿಮತದವರು ಹಾಕಿಕೊಳ್ಳಬಹುದಾಗಿದೆ. ಪ್ರಥಮನ ಏಕಾದಶಿ ಮಾತ್ರವಲ್ಲದೆ ಇತರ ದಿನಗಳಲ್ಲಿಯೂ ಮುದ್ರಾಧಾರಣೆ ನಡೆಯುತ್ತದೆ. ಆದರೆ ಇದಕ್ಕೆ ಅಪವಾದವೆಂಬಂತೆ ಉಪ್ಪಿನಂಗಡಿ ಸಮೀಪದ ಎರ್ಕಿಮಠದಲ್ಲಿ ಮಾತ್ರ ಗೃಹಸ್ಥಾಶ್ರಮಿಗಳು ಮುದ್ರಾಧಾರಣೆ ನಡೆಸಲು ಮಧ್ವಾಚಾರ್ಯರು ಅನುಮತಿ ಕೊಟ್ಟಿದ್ದರು. ಇದು ಇಂದಿಗೂ ನಡೆದು ಬರುತ್ತಿದೆ.



Click it and Unblock the Notifications











