Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಪ್ರಥಮನ ಏಕಾದಶಿ: ಸೋಮವಾರ ಎಲ್ಲೆಡೆ ತಪ್ತ ಮುದ್ರಾಧಾರಣೆ

ಬೆಂಗಳೂರಿನಲ್ಲಿ ಶ್ರೀ ಪೇಜಾವರ ಹಿರಿಯ, ಶ್ರೀ ಕಾಣಿಯೂರು, ಶ್ರೀ ಉತ್ತರಾದಿ, ಶ್ರೀ ಪುತ್ತಿಗೆ, ಶ್ರೀ ಸೋದೆ ಮಠಾಧೀಶರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಶೀರೂರು ಮಠಾಧೀಶರು, ತುಮಕೂರಿನಲ್ಲಿ ಶ್ರೀ ಭೀಮನಕಟ್ಟೆ ಶ್ರೀಗಳು, ಬಳ್ಳಾರಿಯಲ್ಲಿ ಶ್ರೀ ಅದಮಾರು ಶ್ರೀಗಳು, ಮೈಸೂರಿನಲ್ಲಿ ಶ್ರೀ ಪಲಿಮಾರು ಮಠಾಧೀಶರು, ಹುಬ್ಬಳ್ಳಿಯಲ್ಲಿ ಶ್ರೀ ಭಂಡಾರಕೇರಿ ಮಠಾಧೀಶರು, ಶ್ರೀ ಪೇಜಾವರ ಕಿರಿಯ ಶ್ರೀಗಳು ಚೆನ್ನೈಯಲ್ಲಿ ಮುದ್ರಾಧಾರಣೆ ನಡೆಸಲಿದ್ದಾರೆ.
ಏನಿದು ಮುದ್ರಾಧಾರಣೆ ಸಂಭ್ರಮ ?: ಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ. ತಪ್ತ ಅಂದರೆ ಕಾಯಿಸಿದ ವಿವಿಧ ಚಿಹ್ನೆಗಳ ಮುದ್ರೆಗಳನ್ನು ಹಾಕುವುದು. ಈ ಚಿಹ್ನೆಗಳು ವಿಷ್ಣುವಿನ ಆಭರಣ ಸಾಧನಗಳು. ಇದು ವೈಷ್ಣವ ಲಾಂಛನವಾಗಿದ್ದು ಮಠಾಧೀಶರು ಮಾತ್ರ ಹಾಕುತ್ತಾರೆ.
ವಿವಿಧ ಸಂಸ್ಕಾರಗಳಲ್ಲಿ ಮುದ್ರಾಧಾರಣೆಯೂ ಒಂದಾಗಿದ್ದು ಇದನ್ನು ಮಹಿಳೆಯರು, ಪುರುಷರು, ಆಬಾಲವೃದ್ಧರು, ಯಾವುದೇ ಜಾತಿಮತದವರು ಹಾಕಿಕೊಳ್ಳಬಹುದಾಗಿದೆ. ಪ್ರಥಮನ ಏಕಾದಶಿ ಮಾತ್ರವಲ್ಲದೆ ಇತರ ದಿನಗಳಲ್ಲಿಯೂ ಮುದ್ರಾಧಾರಣೆ ನಡೆಯುತ್ತದೆ. ಆದರೆ ಇದಕ್ಕೆ ಅಪವಾದವೆಂಬಂತೆ ಉಪ್ಪಿನಂಗಡಿ ಸಮೀಪದ ಎರ್ಕಿಮಠದಲ್ಲಿ ಮಾತ್ರ ಗೃಹಸ್ಥಾಶ್ರಮಿಗಳು ಮುದ್ರಾಧಾರಣೆ ನಡೆಸಲು ಮಧ್ವಾಚಾರ್ಯರು ಅನುಮತಿ ಕೊಟ್ಟಿದ್ದರು. ಇದು ಇಂದಿಗೂ ನಡೆದು ಬರುತ್ತಿದೆ.



Click it and Unblock the Notifications