Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
ಶೀಗೆ ಹುಣ್ಣಿಮೆಯಂದು ನದಿ ಸ್ನಾನ ಮಾಡ್ದೆ ಹೋದ್ರೆ...

ಇಂಥವರು ಅ.11 ಮಂಗಳವಾರದಂದು ಸೂರ್ಯ ಬೆಳಗಾಗುವ ಮುಂಚೆಯೆ ಬಾವಿ, ನದಿ ಅಥವಾ ಸಮುದ್ರದಲ್ಲಿ ಮುಳುಗೇಳದಿದ್ದರೆ ಅವರಿಗೆ ಅಂಟಿಕೊಂಡಿರುವ ರಾಹು ಕಾಟ ಅವರ ಮಕ್ಕಳಿಗೂ ಅಂಟಿಕೊಳ್ಳುತ್ತದೆ. ಸರಿಯಾಗಿ ಕೇಳಿಸಿಕೊಳ್ಳಿ, ಮತ್ತೆ ಮತ್ತೆ ಹೇಳುತ್ತೇನೆ. ಅಂಥವರು, ಅಂದ್ರೆ ಗಂಡ ಹೆಂಡತಿಗೆ, ಹೆಂಡತಿ ಗಂಡನಿಗೆ ಕೈಕೊಟ್ಟು ಪಾಪು ಅಲ್ಲರೀ ಪಾಪ ಕಟ್ಟಿಕೊಂಡವರು ನಾಳೆ ಮಾತ್ರವಲ್ಲ, ವರ್ಷದಲ್ಲಿ ಸಮುದ್ರದಲ್ಲಿ ಮೂರು ಬಾರಿ ಅಥವಾ ನದಿಯಲ್ಲಿ ಐದು ಬಾರಿ ಅಥವಾ ಬಾವಿಯಲ್ಲಿ ಏಳು ಬಾರಿ ಸ್ನಾನ ಮಾಡಲೇಬೇಕು. ಕೇಳಿಸಿಕೊಳ್ತಾ ಇದ್ದೀರಿ ತಾನೆ?
ಇಲ್ಲದಿದ್ದರೆ, ಬಡ್ಡಿಮಕ್ಕಳಿಗೆ ಅಂಟಿಕೊಂಡಿರುವ ರಾಹು ಮತ್ತು ಶುಕ್ರ ಕಾಟ ಅವರ ಮಕ್ಕಳಿಗೆ ರೋಗವಾಗಿ ಕಾಣಿಸಿಕೊಳ್ಳುತ್ತದೆ. ಕಪ್ಪು ಕಟ್ಟಿಗೆಯ ಮೇಲೆ ಗೆದ್ದಲು ಹತ್ತಿಕೊಂಡು ಪುದುಪುದು ಪುಡಿ ಉದುರಿಸಿದ ಹಾಗೆ ಮಕ್ಕಳ ಮೈಮೈಲೆ ಕಲೆಗಳು ಕಾಣಿಸಿಕೊಳ್ಳುತ್ತವೆ. ಅಪ್ಪ ಅಮ್ಮಂದಿರು ಮಾಡಿರುವ ತಪ್ಪಿಗೆ ಮಕ್ಕಳು ಅನುಭವಿಸಬೇಕಾಗುತ್ತದೆ. ಇದಕ್ಕೆ ಪರಿಹಾರವೆಂದರೆ, ಶೀಗೆ ಹುಣ್ಣಿಮೆಯ ದಿನ ಮೇಲೆ ತಿಳಿಸಿದಂತೆ ಬಾವಿ, ನದಿ ಅಥವಾ ಸಮುದ್ರ ಸ್ನಾನ ಮಾಡಬೇಕು.
ಇನ್ನು ವಿದೇಶಕ್ಕೆ ಹೋದವರೇನು ಸಾಚಾಗಳಾ? ಅಲ್ಲೇ ಇದ್ದು ಯಾವಳೊಂದಿಗೋ ಮಸ್ತ್ ಮಜಾ ಮಾಡಿ ಸಖತ್ ಊಟ ಮಾಡಿದ್ದರೂ, ಇಲ್ಲಿ ಬಂದು ಅಮ್ಮಾ ಹೊಟ್ಟೆ ಹಸಿವಾಗಿದೆ ಊಟಕ್ಕೆ ಹಾಕು ಎಂದು ಹೇಳ್ತಾರೆ ಕಚಡಾ ನನ್ಮಕ್ಳು. ಇಂಥವರಿಗೂ ಕಾಟ ತಪ್ಪಿದ್ದಲ್ಲ. ಈ ಪಾಪ ಪರಿಹಾರಕ್ಕೆ ಏನು ಮಾಡಬೇಕು? ಮೇಲೆ ಹೇಳಿದ ಹಾಗೆ ಮಾಡಿ. ನಾಳೆ ಬರುವ ಶೀಗೆ ಹುಣ್ಣಿಮೆ ಅಂತಿಂಥ ಹುಣ್ಣಿಮೆಯಲ್ಲ. ಹುಣ್ಣಿಮೆಯ ಹುಣ್ಣಿಮೆಯದು.
ಹೀಗೆಂದು ಬ್ರಹ್ಮಾಂಡದಲ್ಲಿ ಪಸರಿಸಿರುವ ಎಲ್ಲ ವೀಕ್ಷಕರಿಗೆ ಅಪ್ಪಣೆ ಕೊಡಿಸಿದವರು ನಿರರ್ಗಳ ಮಾತುಗಾರಿಕೆಯಿಂದ ಖ್ಯಾತರಾಗಿರುವ, ಕೈಯಲ್ಲಿ ಷಣ್ಮುಖನ ದಂಡವನ್ನು ಹಿಡಿದೇ ಇರುವ ಬೃಹತ್ ಬ್ರಹ್ಮಾಂಡ ಖ್ಯಾತಿಯ 'ಪರಿಪೂರ್ಣ' ಜ್ಯೋತಿಷಿ ನರೇಂದ್ರ ಬಾಬು ಶರ್ಮಾ. ಬೆಂಗಳೂರಿನಂಥ ಸಿಟಿಯಲ್ಲಿರುವವರು ಬಾವಿ, ನದಿ, ಸಮುದ್ರವನ್ನು ಎಲ್ಲಿ ಹುಡುಕಿಕೊಂಡು ಹೋಗುವುದು? ಇದನ್ನು ಪಾಲಿಸುವುದು ಅಥವಾ ಮೂಢನಂಬಿಕೆಯೆಂದು ಒಂದು ಕಿವಿಯಿಂದ ಕೇಳಿ ಇನ್ನೊಂದು ಕಿವಿಯಿಂದ ಬಿಡುವುದು ಪ್ರಜ್ಞಾವಂತ ಓದುಗರಿಗೆ ಬಿಟ್ಟ ವಿಚಾರ.



Click it and Unblock the Notifications