Latest Updates
-
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ?
ಶೀಗೆ ಹುಣ್ಣಿಮೆಯಂದು ನದಿ ಸ್ನಾನ ಮಾಡ್ದೆ ಹೋದ್ರೆ...

ಇಂಥವರು ಅ.11 ಮಂಗಳವಾರದಂದು ಸೂರ್ಯ ಬೆಳಗಾಗುವ ಮುಂಚೆಯೆ ಬಾವಿ, ನದಿ ಅಥವಾ ಸಮುದ್ರದಲ್ಲಿ ಮುಳುಗೇಳದಿದ್ದರೆ ಅವರಿಗೆ ಅಂಟಿಕೊಂಡಿರುವ ರಾಹು ಕಾಟ ಅವರ ಮಕ್ಕಳಿಗೂ ಅಂಟಿಕೊಳ್ಳುತ್ತದೆ. ಸರಿಯಾಗಿ ಕೇಳಿಸಿಕೊಳ್ಳಿ, ಮತ್ತೆ ಮತ್ತೆ ಹೇಳುತ್ತೇನೆ. ಅಂಥವರು, ಅಂದ್ರೆ ಗಂಡ ಹೆಂಡತಿಗೆ, ಹೆಂಡತಿ ಗಂಡನಿಗೆ ಕೈಕೊಟ್ಟು ಪಾಪು ಅಲ್ಲರೀ ಪಾಪ ಕಟ್ಟಿಕೊಂಡವರು ನಾಳೆ ಮಾತ್ರವಲ್ಲ, ವರ್ಷದಲ್ಲಿ ಸಮುದ್ರದಲ್ಲಿ ಮೂರು ಬಾರಿ ಅಥವಾ ನದಿಯಲ್ಲಿ ಐದು ಬಾರಿ ಅಥವಾ ಬಾವಿಯಲ್ಲಿ ಏಳು ಬಾರಿ ಸ್ನಾನ ಮಾಡಲೇಬೇಕು. ಕೇಳಿಸಿಕೊಳ್ತಾ ಇದ್ದೀರಿ ತಾನೆ?
ಇಲ್ಲದಿದ್ದರೆ, ಬಡ್ಡಿಮಕ್ಕಳಿಗೆ ಅಂಟಿಕೊಂಡಿರುವ ರಾಹು ಮತ್ತು ಶುಕ್ರ ಕಾಟ ಅವರ ಮಕ್ಕಳಿಗೆ ರೋಗವಾಗಿ ಕಾಣಿಸಿಕೊಳ್ಳುತ್ತದೆ. ಕಪ್ಪು ಕಟ್ಟಿಗೆಯ ಮೇಲೆ ಗೆದ್ದಲು ಹತ್ತಿಕೊಂಡು ಪುದುಪುದು ಪುಡಿ ಉದುರಿಸಿದ ಹಾಗೆ ಮಕ್ಕಳ ಮೈಮೈಲೆ ಕಲೆಗಳು ಕಾಣಿಸಿಕೊಳ್ಳುತ್ತವೆ. ಅಪ್ಪ ಅಮ್ಮಂದಿರು ಮಾಡಿರುವ ತಪ್ಪಿಗೆ ಮಕ್ಕಳು ಅನುಭವಿಸಬೇಕಾಗುತ್ತದೆ. ಇದಕ್ಕೆ ಪರಿಹಾರವೆಂದರೆ, ಶೀಗೆ ಹುಣ್ಣಿಮೆಯ ದಿನ ಮೇಲೆ ತಿಳಿಸಿದಂತೆ ಬಾವಿ, ನದಿ ಅಥವಾ ಸಮುದ್ರ ಸ್ನಾನ ಮಾಡಬೇಕು.
ಇನ್ನು ವಿದೇಶಕ್ಕೆ ಹೋದವರೇನು ಸಾಚಾಗಳಾ? ಅಲ್ಲೇ ಇದ್ದು ಯಾವಳೊಂದಿಗೋ ಮಸ್ತ್ ಮಜಾ ಮಾಡಿ ಸಖತ್ ಊಟ ಮಾಡಿದ್ದರೂ, ಇಲ್ಲಿ ಬಂದು ಅಮ್ಮಾ ಹೊಟ್ಟೆ ಹಸಿವಾಗಿದೆ ಊಟಕ್ಕೆ ಹಾಕು ಎಂದು ಹೇಳ್ತಾರೆ ಕಚಡಾ ನನ್ಮಕ್ಳು. ಇಂಥವರಿಗೂ ಕಾಟ ತಪ್ಪಿದ್ದಲ್ಲ. ಈ ಪಾಪ ಪರಿಹಾರಕ್ಕೆ ಏನು ಮಾಡಬೇಕು? ಮೇಲೆ ಹೇಳಿದ ಹಾಗೆ ಮಾಡಿ. ನಾಳೆ ಬರುವ ಶೀಗೆ ಹುಣ್ಣಿಮೆ ಅಂತಿಂಥ ಹುಣ್ಣಿಮೆಯಲ್ಲ. ಹುಣ್ಣಿಮೆಯ ಹುಣ್ಣಿಮೆಯದು.
ಹೀಗೆಂದು ಬ್ರಹ್ಮಾಂಡದಲ್ಲಿ ಪಸರಿಸಿರುವ ಎಲ್ಲ ವೀಕ್ಷಕರಿಗೆ ಅಪ್ಪಣೆ ಕೊಡಿಸಿದವರು ನಿರರ್ಗಳ ಮಾತುಗಾರಿಕೆಯಿಂದ ಖ್ಯಾತರಾಗಿರುವ, ಕೈಯಲ್ಲಿ ಷಣ್ಮುಖನ ದಂಡವನ್ನು ಹಿಡಿದೇ ಇರುವ ಬೃಹತ್ ಬ್ರಹ್ಮಾಂಡ ಖ್ಯಾತಿಯ 'ಪರಿಪೂರ್ಣ' ಜ್ಯೋತಿಷಿ ನರೇಂದ್ರ ಬಾಬು ಶರ್ಮಾ. ಬೆಂಗಳೂರಿನಂಥ ಸಿಟಿಯಲ್ಲಿರುವವರು ಬಾವಿ, ನದಿ, ಸಮುದ್ರವನ್ನು ಎಲ್ಲಿ ಹುಡುಕಿಕೊಂಡು ಹೋಗುವುದು? ಇದನ್ನು ಪಾಲಿಸುವುದು ಅಥವಾ ಮೂಢನಂಬಿಕೆಯೆಂದು ಒಂದು ಕಿವಿಯಿಂದ ಕೇಳಿ ಇನ್ನೊಂದು ಕಿವಿಯಿಂದ ಬಿಡುವುದು ಪ್ರಜ್ಞಾವಂತ ಓದುಗರಿಗೆ ಬಿಟ್ಟ ವಿಚಾರ.



Click it and Unblock the Notifications











