Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಶೀಗೆ ಹುಣ್ಣಿಮೆಯಂದು ನದಿ ಸ್ನಾನ ಮಾಡ್ದೆ ಹೋದ್ರೆ...

ಇಂಥವರು ಅ.11 ಮಂಗಳವಾರದಂದು ಸೂರ್ಯ ಬೆಳಗಾಗುವ ಮುಂಚೆಯೆ ಬಾವಿ, ನದಿ ಅಥವಾ ಸಮುದ್ರದಲ್ಲಿ ಮುಳುಗೇಳದಿದ್ದರೆ ಅವರಿಗೆ ಅಂಟಿಕೊಂಡಿರುವ ರಾಹು ಕಾಟ ಅವರ ಮಕ್ಕಳಿಗೂ ಅಂಟಿಕೊಳ್ಳುತ್ತದೆ. ಸರಿಯಾಗಿ ಕೇಳಿಸಿಕೊಳ್ಳಿ, ಮತ್ತೆ ಮತ್ತೆ ಹೇಳುತ್ತೇನೆ. ಅಂಥವರು, ಅಂದ್ರೆ ಗಂಡ ಹೆಂಡತಿಗೆ, ಹೆಂಡತಿ ಗಂಡನಿಗೆ ಕೈಕೊಟ್ಟು ಪಾಪು ಅಲ್ಲರೀ ಪಾಪ ಕಟ್ಟಿಕೊಂಡವರು ನಾಳೆ ಮಾತ್ರವಲ್ಲ, ವರ್ಷದಲ್ಲಿ ಸಮುದ್ರದಲ್ಲಿ ಮೂರು ಬಾರಿ ಅಥವಾ ನದಿಯಲ್ಲಿ ಐದು ಬಾರಿ ಅಥವಾ ಬಾವಿಯಲ್ಲಿ ಏಳು ಬಾರಿ ಸ್ನಾನ ಮಾಡಲೇಬೇಕು. ಕೇಳಿಸಿಕೊಳ್ತಾ ಇದ್ದೀರಿ ತಾನೆ?
ಇಲ್ಲದಿದ್ದರೆ, ಬಡ್ಡಿಮಕ್ಕಳಿಗೆ ಅಂಟಿಕೊಂಡಿರುವ ರಾಹು ಮತ್ತು ಶುಕ್ರ ಕಾಟ ಅವರ ಮಕ್ಕಳಿಗೆ ರೋಗವಾಗಿ ಕಾಣಿಸಿಕೊಳ್ಳುತ್ತದೆ. ಕಪ್ಪು ಕಟ್ಟಿಗೆಯ ಮೇಲೆ ಗೆದ್ದಲು ಹತ್ತಿಕೊಂಡು ಪುದುಪುದು ಪುಡಿ ಉದುರಿಸಿದ ಹಾಗೆ ಮಕ್ಕಳ ಮೈಮೈಲೆ ಕಲೆಗಳು ಕಾಣಿಸಿಕೊಳ್ಳುತ್ತವೆ. ಅಪ್ಪ ಅಮ್ಮಂದಿರು ಮಾಡಿರುವ ತಪ್ಪಿಗೆ ಮಕ್ಕಳು ಅನುಭವಿಸಬೇಕಾಗುತ್ತದೆ. ಇದಕ್ಕೆ ಪರಿಹಾರವೆಂದರೆ, ಶೀಗೆ ಹುಣ್ಣಿಮೆಯ ದಿನ ಮೇಲೆ ತಿಳಿಸಿದಂತೆ ಬಾವಿ, ನದಿ ಅಥವಾ ಸಮುದ್ರ ಸ್ನಾನ ಮಾಡಬೇಕು.
ಇನ್ನು ವಿದೇಶಕ್ಕೆ ಹೋದವರೇನು ಸಾಚಾಗಳಾ? ಅಲ್ಲೇ ಇದ್ದು ಯಾವಳೊಂದಿಗೋ ಮಸ್ತ್ ಮಜಾ ಮಾಡಿ ಸಖತ್ ಊಟ ಮಾಡಿದ್ದರೂ, ಇಲ್ಲಿ ಬಂದು ಅಮ್ಮಾ ಹೊಟ್ಟೆ ಹಸಿವಾಗಿದೆ ಊಟಕ್ಕೆ ಹಾಕು ಎಂದು ಹೇಳ್ತಾರೆ ಕಚಡಾ ನನ್ಮಕ್ಳು. ಇಂಥವರಿಗೂ ಕಾಟ ತಪ್ಪಿದ್ದಲ್ಲ. ಈ ಪಾಪ ಪರಿಹಾರಕ್ಕೆ ಏನು ಮಾಡಬೇಕು? ಮೇಲೆ ಹೇಳಿದ ಹಾಗೆ ಮಾಡಿ. ನಾಳೆ ಬರುವ ಶೀಗೆ ಹುಣ್ಣಿಮೆ ಅಂತಿಂಥ ಹುಣ್ಣಿಮೆಯಲ್ಲ. ಹುಣ್ಣಿಮೆಯ ಹುಣ್ಣಿಮೆಯದು.
ಹೀಗೆಂದು ಬ್ರಹ್ಮಾಂಡದಲ್ಲಿ ಪಸರಿಸಿರುವ ಎಲ್ಲ ವೀಕ್ಷಕರಿಗೆ ಅಪ್ಪಣೆ ಕೊಡಿಸಿದವರು ನಿರರ್ಗಳ ಮಾತುಗಾರಿಕೆಯಿಂದ ಖ್ಯಾತರಾಗಿರುವ, ಕೈಯಲ್ಲಿ ಷಣ್ಮುಖನ ದಂಡವನ್ನು ಹಿಡಿದೇ ಇರುವ ಬೃಹತ್ ಬ್ರಹ್ಮಾಂಡ ಖ್ಯಾತಿಯ 'ಪರಿಪೂರ್ಣ' ಜ್ಯೋತಿಷಿ ನರೇಂದ್ರ ಬಾಬು ಶರ್ಮಾ. ಬೆಂಗಳೂರಿನಂಥ ಸಿಟಿಯಲ್ಲಿರುವವರು ಬಾವಿ, ನದಿ, ಸಮುದ್ರವನ್ನು ಎಲ್ಲಿ ಹುಡುಕಿಕೊಂಡು ಹೋಗುವುದು? ಇದನ್ನು ಪಾಲಿಸುವುದು ಅಥವಾ ಮೂಢನಂಬಿಕೆಯೆಂದು ಒಂದು ಕಿವಿಯಿಂದ ಕೇಳಿ ಇನ್ನೊಂದು ಕಿವಿಯಿಂದ ಬಿಡುವುದು ಪ್ರಜ್ಞಾವಂತ ಓದುಗರಿಗೆ ಬಿಟ್ಟ ವಿಚಾರ.



Click it and Unblock the Notifications
