Latest Updates
-
ಕಾರ್ಗಿಲ್ ವಿಜಯ್ ದಿವಸ್: ದೇಶಭಕ್ತಿಯ ನಡಿಗೆಯಲ್ಲಿ ಪಾಲ್ಗೊಳ್ಳುವ ಮುನ್ನ ಈ ಆರೋಗ್ಯ ಟಿಪ್ಸ್ ಮರೆಯದಿರಿ -
ದೇವಶಯನಿ ಏಕಾದಶಿ: ದಂಪತಿಗಳ ಬಾಂಧವ್ಯ ಹೆಚ್ಚಿಸಲು ಈ ಉಪವಾಸದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ತೇವಾಂಶ: ನಿಮ್ಮ ದುಬಾರಿ ಸೀರೆ ಮತ್ತು ಶೂಗಳನ್ನು ಬೂಸ್ಟ್ನಿಂದ ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಸಾಕು! -
ಅಹಮದಾಬಾದ್ ಮಳೆ: ಪ್ರವಾಹದ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಮಾರ್ಗಸೂಚಿಗಳನ್ನು ಅನುಸರಿಸಿ -
ಕಾಮನ್ವೆಲ್ತ್ ಗೇಮ್ಸ್ 2026: 3ನೇ ದಿನ ಭಾರತದ ಆಟಗಾರರ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ! -
ಮಳೆಗಾಲದ ಜಾರುವ ರಸ್ತೆಗಳಲ್ಲಿ ನಡೆಯುವಾಗ ಎಚ್ಚರ: ಸುರಕ್ಷಿತವಾಗಿರಲು 8 ನಿಮಿಷಗಳ ಈ ವ್ಯಾಯಾಮ ಮಾಡಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು 45 ನಿಮಿಷದಲ್ಲಿ ಟ್ಯಾಕ್ಸ್ ಫೈಲ್ ಮಾಡುವುದು ಹೇಗೆ? -
ಪ್ರವಾಹದ ನೀರು ಮನೆಯೊಳಗೆ ನುಗ್ಗಿದೆಯೇ? ಆಸ್ತಿ ಮತ್ತು ಆರೋಗ್ಯ ರಕ್ಷಣೆಗೆ ತಕ್ಷಣ ಮಾಡಬೇಕಾದ ಕೆಲಸಗಳಿವು -
ಬೆಂಗಳೂರಿನಲ್ಲಿ ಮೊಟ್ಟೆ ಬೆಲೆ ಏರಿಕೆ: ಬಜೆಟ್ ಉಳಿಸಲು ಇಲ್ಲಿದೆ ಬೆಸ್ಟ್ ಪ್ರೋಟೀನ್ ಆಯ್ಕೆಗಳು! -
ಇನ್ಸ್ಟಾಗ್ರಾಮ್ ಡೌನ್: ಆತಂಕ ಬೇಡ, ನಿಮ್ಮ ಅಕೌಂಟ್ ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ
ಶೀಗೆ ಹುಣ್ಣಿಮೆಯಂದು ನದಿ ಸ್ನಾನ ಮಾಡ್ದೆ ಹೋದ್ರೆ...

ಇಂಥವರು ಅ.11 ಮಂಗಳವಾರದಂದು ಸೂರ್ಯ ಬೆಳಗಾಗುವ ಮುಂಚೆಯೆ ಬಾವಿ, ನದಿ ಅಥವಾ ಸಮುದ್ರದಲ್ಲಿ ಮುಳುಗೇಳದಿದ್ದರೆ ಅವರಿಗೆ ಅಂಟಿಕೊಂಡಿರುವ ರಾಹು ಕಾಟ ಅವರ ಮಕ್ಕಳಿಗೂ ಅಂಟಿಕೊಳ್ಳುತ್ತದೆ. ಸರಿಯಾಗಿ ಕೇಳಿಸಿಕೊಳ್ಳಿ, ಮತ್ತೆ ಮತ್ತೆ ಹೇಳುತ್ತೇನೆ. ಅಂಥವರು, ಅಂದ್ರೆ ಗಂಡ ಹೆಂಡತಿಗೆ, ಹೆಂಡತಿ ಗಂಡನಿಗೆ ಕೈಕೊಟ್ಟು ಪಾಪು ಅಲ್ಲರೀ ಪಾಪ ಕಟ್ಟಿಕೊಂಡವರು ನಾಳೆ ಮಾತ್ರವಲ್ಲ, ವರ್ಷದಲ್ಲಿ ಸಮುದ್ರದಲ್ಲಿ ಮೂರು ಬಾರಿ ಅಥವಾ ನದಿಯಲ್ಲಿ ಐದು ಬಾರಿ ಅಥವಾ ಬಾವಿಯಲ್ಲಿ ಏಳು ಬಾರಿ ಸ್ನಾನ ಮಾಡಲೇಬೇಕು. ಕೇಳಿಸಿಕೊಳ್ತಾ ಇದ್ದೀರಿ ತಾನೆ?
ಇಲ್ಲದಿದ್ದರೆ, ಬಡ್ಡಿಮಕ್ಕಳಿಗೆ ಅಂಟಿಕೊಂಡಿರುವ ರಾಹು ಮತ್ತು ಶುಕ್ರ ಕಾಟ ಅವರ ಮಕ್ಕಳಿಗೆ ರೋಗವಾಗಿ ಕಾಣಿಸಿಕೊಳ್ಳುತ್ತದೆ. ಕಪ್ಪು ಕಟ್ಟಿಗೆಯ ಮೇಲೆ ಗೆದ್ದಲು ಹತ್ತಿಕೊಂಡು ಪುದುಪುದು ಪುಡಿ ಉದುರಿಸಿದ ಹಾಗೆ ಮಕ್ಕಳ ಮೈಮೈಲೆ ಕಲೆಗಳು ಕಾಣಿಸಿಕೊಳ್ಳುತ್ತವೆ. ಅಪ್ಪ ಅಮ್ಮಂದಿರು ಮಾಡಿರುವ ತಪ್ಪಿಗೆ ಮಕ್ಕಳು ಅನುಭವಿಸಬೇಕಾಗುತ್ತದೆ. ಇದಕ್ಕೆ ಪರಿಹಾರವೆಂದರೆ, ಶೀಗೆ ಹುಣ್ಣಿಮೆಯ ದಿನ ಮೇಲೆ ತಿಳಿಸಿದಂತೆ ಬಾವಿ, ನದಿ ಅಥವಾ ಸಮುದ್ರ ಸ್ನಾನ ಮಾಡಬೇಕು.
ಇನ್ನು ವಿದೇಶಕ್ಕೆ ಹೋದವರೇನು ಸಾಚಾಗಳಾ? ಅಲ್ಲೇ ಇದ್ದು ಯಾವಳೊಂದಿಗೋ ಮಸ್ತ್ ಮಜಾ ಮಾಡಿ ಸಖತ್ ಊಟ ಮಾಡಿದ್ದರೂ, ಇಲ್ಲಿ ಬಂದು ಅಮ್ಮಾ ಹೊಟ್ಟೆ ಹಸಿವಾಗಿದೆ ಊಟಕ್ಕೆ ಹಾಕು ಎಂದು ಹೇಳ್ತಾರೆ ಕಚಡಾ ನನ್ಮಕ್ಳು. ಇಂಥವರಿಗೂ ಕಾಟ ತಪ್ಪಿದ್ದಲ್ಲ. ಈ ಪಾಪ ಪರಿಹಾರಕ್ಕೆ ಏನು ಮಾಡಬೇಕು? ಮೇಲೆ ಹೇಳಿದ ಹಾಗೆ ಮಾಡಿ. ನಾಳೆ ಬರುವ ಶೀಗೆ ಹುಣ್ಣಿಮೆ ಅಂತಿಂಥ ಹುಣ್ಣಿಮೆಯಲ್ಲ. ಹುಣ್ಣಿಮೆಯ ಹುಣ್ಣಿಮೆಯದು.
ಹೀಗೆಂದು ಬ್ರಹ್ಮಾಂಡದಲ್ಲಿ ಪಸರಿಸಿರುವ ಎಲ್ಲ ವೀಕ್ಷಕರಿಗೆ ಅಪ್ಪಣೆ ಕೊಡಿಸಿದವರು ನಿರರ್ಗಳ ಮಾತುಗಾರಿಕೆಯಿಂದ ಖ್ಯಾತರಾಗಿರುವ, ಕೈಯಲ್ಲಿ ಷಣ್ಮುಖನ ದಂಡವನ್ನು ಹಿಡಿದೇ ಇರುವ ಬೃಹತ್ ಬ್ರಹ್ಮಾಂಡ ಖ್ಯಾತಿಯ 'ಪರಿಪೂರ್ಣ' ಜ್ಯೋತಿಷಿ ನರೇಂದ್ರ ಬಾಬು ಶರ್ಮಾ. ಬೆಂಗಳೂರಿನಂಥ ಸಿಟಿಯಲ್ಲಿರುವವರು ಬಾವಿ, ನದಿ, ಸಮುದ್ರವನ್ನು ಎಲ್ಲಿ ಹುಡುಕಿಕೊಂಡು ಹೋಗುವುದು? ಇದನ್ನು ಪಾಲಿಸುವುದು ಅಥವಾ ಮೂಢನಂಬಿಕೆಯೆಂದು ಒಂದು ಕಿವಿಯಿಂದ ಕೇಳಿ ಇನ್ನೊಂದು ಕಿವಿಯಿಂದ ಬಿಡುವುದು ಪ್ರಜ್ಞಾವಂತ ಓದುಗರಿಗೆ ಬಿಟ್ಟ ವಿಚಾರ.



Click it and Unblock the Notifications