Latest Updates
-
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಶೀಗೆ ಹುಣ್ಣಿಮೆಯಂದು ನದಿ ಸ್ನಾನ ಮಾಡ್ದೆ ಹೋದ್ರೆ...

ಇಂಥವರು ಅ.11 ಮಂಗಳವಾರದಂದು ಸೂರ್ಯ ಬೆಳಗಾಗುವ ಮುಂಚೆಯೆ ಬಾವಿ, ನದಿ ಅಥವಾ ಸಮುದ್ರದಲ್ಲಿ ಮುಳುಗೇಳದಿದ್ದರೆ ಅವರಿಗೆ ಅಂಟಿಕೊಂಡಿರುವ ರಾಹು ಕಾಟ ಅವರ ಮಕ್ಕಳಿಗೂ ಅಂಟಿಕೊಳ್ಳುತ್ತದೆ. ಸರಿಯಾಗಿ ಕೇಳಿಸಿಕೊಳ್ಳಿ, ಮತ್ತೆ ಮತ್ತೆ ಹೇಳುತ್ತೇನೆ. ಅಂಥವರು, ಅಂದ್ರೆ ಗಂಡ ಹೆಂಡತಿಗೆ, ಹೆಂಡತಿ ಗಂಡನಿಗೆ ಕೈಕೊಟ್ಟು ಪಾಪು ಅಲ್ಲರೀ ಪಾಪ ಕಟ್ಟಿಕೊಂಡವರು ನಾಳೆ ಮಾತ್ರವಲ್ಲ, ವರ್ಷದಲ್ಲಿ ಸಮುದ್ರದಲ್ಲಿ ಮೂರು ಬಾರಿ ಅಥವಾ ನದಿಯಲ್ಲಿ ಐದು ಬಾರಿ ಅಥವಾ ಬಾವಿಯಲ್ಲಿ ಏಳು ಬಾರಿ ಸ್ನಾನ ಮಾಡಲೇಬೇಕು. ಕೇಳಿಸಿಕೊಳ್ತಾ ಇದ್ದೀರಿ ತಾನೆ?
ಇಲ್ಲದಿದ್ದರೆ, ಬಡ್ಡಿಮಕ್ಕಳಿಗೆ ಅಂಟಿಕೊಂಡಿರುವ ರಾಹು ಮತ್ತು ಶುಕ್ರ ಕಾಟ ಅವರ ಮಕ್ಕಳಿಗೆ ರೋಗವಾಗಿ ಕಾಣಿಸಿಕೊಳ್ಳುತ್ತದೆ. ಕಪ್ಪು ಕಟ್ಟಿಗೆಯ ಮೇಲೆ ಗೆದ್ದಲು ಹತ್ತಿಕೊಂಡು ಪುದುಪುದು ಪುಡಿ ಉದುರಿಸಿದ ಹಾಗೆ ಮಕ್ಕಳ ಮೈಮೈಲೆ ಕಲೆಗಳು ಕಾಣಿಸಿಕೊಳ್ಳುತ್ತವೆ. ಅಪ್ಪ ಅಮ್ಮಂದಿರು ಮಾಡಿರುವ ತಪ್ಪಿಗೆ ಮಕ್ಕಳು ಅನುಭವಿಸಬೇಕಾಗುತ್ತದೆ. ಇದಕ್ಕೆ ಪರಿಹಾರವೆಂದರೆ, ಶೀಗೆ ಹುಣ್ಣಿಮೆಯ ದಿನ ಮೇಲೆ ತಿಳಿಸಿದಂತೆ ಬಾವಿ, ನದಿ ಅಥವಾ ಸಮುದ್ರ ಸ್ನಾನ ಮಾಡಬೇಕು.
ಇನ್ನು ವಿದೇಶಕ್ಕೆ ಹೋದವರೇನು ಸಾಚಾಗಳಾ? ಅಲ್ಲೇ ಇದ್ದು ಯಾವಳೊಂದಿಗೋ ಮಸ್ತ್ ಮಜಾ ಮಾಡಿ ಸಖತ್ ಊಟ ಮಾಡಿದ್ದರೂ, ಇಲ್ಲಿ ಬಂದು ಅಮ್ಮಾ ಹೊಟ್ಟೆ ಹಸಿವಾಗಿದೆ ಊಟಕ್ಕೆ ಹಾಕು ಎಂದು ಹೇಳ್ತಾರೆ ಕಚಡಾ ನನ್ಮಕ್ಳು. ಇಂಥವರಿಗೂ ಕಾಟ ತಪ್ಪಿದ್ದಲ್ಲ. ಈ ಪಾಪ ಪರಿಹಾರಕ್ಕೆ ಏನು ಮಾಡಬೇಕು? ಮೇಲೆ ಹೇಳಿದ ಹಾಗೆ ಮಾಡಿ. ನಾಳೆ ಬರುವ ಶೀಗೆ ಹುಣ್ಣಿಮೆ ಅಂತಿಂಥ ಹುಣ್ಣಿಮೆಯಲ್ಲ. ಹುಣ್ಣಿಮೆಯ ಹುಣ್ಣಿಮೆಯದು.
ಹೀಗೆಂದು ಬ್ರಹ್ಮಾಂಡದಲ್ಲಿ ಪಸರಿಸಿರುವ ಎಲ್ಲ ವೀಕ್ಷಕರಿಗೆ ಅಪ್ಪಣೆ ಕೊಡಿಸಿದವರು ನಿರರ್ಗಳ ಮಾತುಗಾರಿಕೆಯಿಂದ ಖ್ಯಾತರಾಗಿರುವ, ಕೈಯಲ್ಲಿ ಷಣ್ಮುಖನ ದಂಡವನ್ನು ಹಿಡಿದೇ ಇರುವ ಬೃಹತ್ ಬ್ರಹ್ಮಾಂಡ ಖ್ಯಾತಿಯ 'ಪರಿಪೂರ್ಣ' ಜ್ಯೋತಿಷಿ ನರೇಂದ್ರ ಬಾಬು ಶರ್ಮಾ. ಬೆಂಗಳೂರಿನಂಥ ಸಿಟಿಯಲ್ಲಿರುವವರು ಬಾವಿ, ನದಿ, ಸಮುದ್ರವನ್ನು ಎಲ್ಲಿ ಹುಡುಕಿಕೊಂಡು ಹೋಗುವುದು? ಇದನ್ನು ಪಾಲಿಸುವುದು ಅಥವಾ ಮೂಢನಂಬಿಕೆಯೆಂದು ಒಂದು ಕಿವಿಯಿಂದ ಕೇಳಿ ಇನ್ನೊಂದು ಕಿವಿಯಿಂದ ಬಿಡುವುದು ಪ್ರಜ್ಞಾವಂತ ಓದುಗರಿಗೆ ಬಿಟ್ಟ ವಿಚಾರ.



Click it and Unblock the Notifications