Latest Updates
-
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ
26 ವರ್ಷಗಳ ದಕ್ಷ ಸೇವೆ: 'ಸೊಸೈಟಿ' ಸ್ವಾಮಿ ಹೆಗ್ಗಳಿಕೆ

ಪ್ರಾಥಮಿಕ ಶಾಲಾ ವಿದ್ಯಾಭ್ಯಾಸವನ್ನು ಅಗಸನಪುರದಲ್ಲಿ ಮುಗಿಸಿದ ನಾಗರಾಜಸ್ವಾಮಿ, ಪ್ರೌಢ ಶಾಲಾ ವಿದ್ಯಾಭ್ಯಾಸವನ್ನು ಕನಕಪುರ ತಾಲೂಕಿನ ಮರಳೇಗವಿ ಮಠದಲ್ಲಿ ಪೂರೈಸಿದರು. ಬಳಿಕ ಅವರು ಕಾಲೇಜು ವಿದ್ಯಾಭ್ಯಾಸವನ್ನು ಮದ್ದೂರು ತಾಲೂಕಿನ ಭಾರತೀನಗರದ ಭಾರತೀ ಕಾಲೇಜಿನಲ್ಲಿ ಮಾಡಿದರು.
ಇವರು ವಾಣಿಜ್ಯ ಪದವಿಯನ್ನು 1984ರಲ್ಲಿ ಮುಗಿಸಿ ಉದ್ಯೋಗಕ್ಕಾಗಿ ಬೆಂಗಳೂರಿಗೆ 1985ರಲ್ಲಿ ಬಂದು, ಹೈಗ್ರೌಂಡ್ಸ್ನಲ್ಲಿರುವ ಬಸವ ಸಮಿತಿಯಲ್ಲಿ ಬೆರಳಚ್ಚುಗಾರನಾಗಿ ಆರು ತಿಂಗಳು ಸೇವೆ ಸಲ್ಲಿಸಿದ್ದಾರೆ.
1985ರ ಜುಲೈ 29ರಂದು ಕರ್ನಾಟಕ ಪತ್ರಕರ್ತರ ಸಹಕಾರ ಸಂಘದಲ್ಲಿ ಎರಡನೇ ದರ್ಜೆ ಸಹಾಯಕ ಹುದ್ದೆಗೆ ಸೇರಿಕೊಂಡರು. 7 ವರ್ಷಗಳ ಸೇವೆಯಲ್ಲಿ ಇವರ ಕರ್ತವ್ಯನಿಷ್ಠೆ ಹಾಗೂ ಪ್ರಾಮಾಣಿಕತೆಯನ್ನು ಪರಿಗಣಿಸಿದ ಆಡಳಿತ ಮಂಡಳಿ, 1992ರಲ್ಲಿ ಸಹಾಯಕ ಹುದ್ದೆಗೆ ಬಡ್ತಿ ನೀಡಿತು.
ಉತ್ತಮ ಕಾರ್ಯನಿರ್ವಹಣಾಧಿಕಾರಿ:
ಆ ಹುದ್ದೆಯಲ್ಲಿ ಮೂರು ವರ್ಷ ಪೂರೈಸುವಷ್ಟರಲ್ಲಿ 1995ರ ಜುಲೈನಲ್ಲಿ ಇವರ ಕಾರ್ಯದಕ್ಷತೆ ಪರಿಗಣಿಸಿ ಆಡಳಿತ ಮಂಡಳಿ ಮತ್ತೊಂದು ಬಡ್ತಿ ನೀಡಿತು. ಅದು ಸಹಕಾರ ಸಂಘದ ಅತ್ಯುನ್ನತ ಹುದ್ದೆಯಾದ ಕಾರ್ಯದರ್ಶಿ. ಇದೀಗ ಅವರು ಪೂರೈಸಿರುವ ಸೇವಾವಧಿ 26 ವರ್ಷಗಳು. 2010ರ ಸೆಪ್ಟಂಬರ್ ತಿಂಗಳಲ್ಲಿ ಅವರ 25 ವರ್ಷಗಳ ಅನುಪಮ ಸೇವೆಯನ್ನು ಪರಿಗಣಿಸಿ ಅಡಳಿತ ಮಂಡಳಿ ಸಂಘದ ಸರ್ವಸದಸ್ಯರ ಸಭೆಯಲ್ಲಿ ಆತ್ಮೀಯವಾಗಿ ಅಭಿನಂದಿಸಿದೆ.
2006ರ ನವೆಂಬರ್ ತಿಂಗಳಲ್ಲಿ ಸರ್ಕಾರದ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ವಸತಿ ಮಹಾಮಂಡಲ ನಿಯಮಿತವು ಆಯೋಜಿಸಿದ್ದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ನಾಗರಾಜಸ್ವಾಮಿ ಅವರಿಗೆ ಉತ್ತಮ ಕಾರ್ಯನಿರ್ವಹಣಾಧಿಕಾರಿ ಎಂದು ಗೌರವಿಸಿದೆ.
ಕ.ಪ.ಸ.ಸಂಘ ಇಂದು ಸ್ವಂತ ಕಟ್ಟಡ ಹೊಂದಿದ್ದು, ಅಗಾಧವಾಗಿ ಬೆಳೆಯುತ್ತಿದೆ. ಈ ಬೆಳವಣಿಗೆಯಲ್ಲಿ ಆಡಳಿತ ಮಂಡಳಿ ಸದಸ್ಯರಿಂದ ಸಾಮಾನ್ಯ ಸದಸ್ಯರವರೆಗೆ ಆಡಳಿತ ಮಂಡಳಿ ಶ್ರಮದ ಜೊತೆ ಜೊತೆಗೆ ನಾಗರಾಜಸ್ವಾಮಿ ಅವರ ಪಾತ್ರವನ್ನು ಎಲ್ಲರೂ ಮುಕ್ತ ಕಂಠದಿಂದ ಹೊಗಳುತ್ತಾರೆ.
ಆಡಳಿತದಲ್ಲಿ ಕನ್ನಡ ಎಂಬ ಘೋಷವಾಕ್ಯವನ್ನು ಕನ್ನಡ ಪ್ರೇಮಿಯಾದ ನಾಗರಾಜಸ್ವಾಮಿ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದಲ್ಲಿ ಅಕ್ಷರಶಃ ಜಾರಿಗೆ ತಂದಿದ್ದಾರೆ.



Click it and Unblock the Notifications











