Latest Updates
-
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ? -
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ!
ಪತ್ರಕರ್ತರ ಸಂಘದ ನಾಗರಾಜಸ್ವಾಮಿಗೆ ಆತ್ಮೀಯ ಸನ್ಮಾನ

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ. ಚಂದ್ರಶೇಖರ ಪಾಟೀಲರು ಈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಎಸ್.ವಿ. ಜಯಶೀಲರಾವ್ ಅವರು ನಾಗರಾಜಸ್ವಾಮಿ ಅವರನ್ನು ಅಭಿನಂದಿಸಲಿದ್ದಾರೆ.
ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷರಾದ ರಾಮಣ್ಣ ಎಚ್. ಕೋಡಿಹೊಸಹಳ್ಳಿ ಮತ್ತು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಕೆ. ರಾಮೇಗೌಡ ಸಮಾರಂಭದ ಮುಖ್ಯ ಅತಿಥಿಗಳು. ಅ.ನ.ಕೃ. ಕನ್ನಡ ಸಂಘದ ಅಧ್ಯಕ್ಷ ರು.ಬಸಪ್ಪ ಅವರಿಂದ ಪ್ರಾಸ್ತಾವಿಕ ನುಡಿ.
ಸ್ಥಳ: ಶ್ರೀಕೃಷ್ಣರಾಜ ಪರಿಷನ್ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18
ದಿನಾಂಕ: 29.1.2011 ಶನಿವಾರ ಸಂಜೆ 5.30ಕ್ಕೆ
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದಲ್ಲಿ ಅರ್ಪಣಾ ಭಾವದಿಂದ ಸೇವೆ ಸಲ್ಲಿಸುತ್ತಿರುವ ನಾಗರಾಜಸ್ವಾಮಿ, ಕೆಲಸದ ಒತ್ತಡ ಎಷ್ಟೇ ಇರಲಿ ಬಂದ ಸದಸ್ಯರ ಬೇಕು ಬೇಡಗಳನ್ನು ಆತ್ಮೀಯವಾಗಿ ವಿಚಾರಿಸಿ, ನಗುನಗುತ್ತಲೇ ಸ್ಪಂದಿಸುವ ಇವರ ಸ್ವಭಾವದಿಂದಾಗಿ ಪತ್ರಿಕಾ ರಂಗದಲ್ಲಿ ಅಪಾರವಾದ ಗೌರವ ಹಾಗೂ ಪ್ರೀತಿಗೆ ಪಾತ್ರರಾಗಿದ್ದಾರೆ.



Click it and Unblock the Notifications