Latest Updates
-
UGC NET ಪರೀಕ್ಷೆ: ಪರೀಕ್ಷೆಯ ಒತ್ತಡದ ನಡುವೆ ಮನೆಯಲ್ಲಿ ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈಗಲೇ ಈ ಕೆಲಸ ಮಾಡಿ! -
ಭಾರಿ ಮಳೆ, ವಿದ್ಯುತ್ ಕಡಿತ: ಸಂಕಷ್ಟದ ಸಮಯದಲ್ಲಿ ನಿಮ್ಮ ಆರೋಗ್ಯ ಮತ್ತು ಆಹಾರ ಸುರಕ್ಷತೆ ಕಾಪಾಡಿಕೊಳ್ಳುವುದು ಹೇಗೆ? -
ಮುಂಬೈನಲ್ಲಿ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ, ಪ್ರಯಾಣಿಕರೇ ಎಚ್ಚರ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಆರ್ಭಟ: ಹೊರಗೆ ಹೋಗುವ ಮುನ್ನ ಎಚ್ಚರ, ಮನೆಯಲ್ಲೇ ಫಿಟ್ ಆಗಿರಲು ಈ 8 ನಿಮಿಷದ ಟಿಪ್ಸ್! -
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ!
ಸಾಹಿತ್ಯಾರಾಧಕ, ಪತ್ರಕರ್ತ ನಾಗರಾಜಸ್ವಾಮಿಗೆ ಕಸಾಪ ನಂಟು

ಇವರು ರಚಿಸಿದ ಕೆಲ ಚುಟುಕುಗಳು ಚುಟುಕು ಸಾಹಿತ್ಯ ಪರಿಷತ್ತು ಹೊರತಂದಿರುವ ಚುಟುಕು ಸಂಗ್ರಹ ಕೃತಿಯಲ್ಲಿ, ಅಡ್ವೈಸರ್ ಪ್ರಕಾಶನ ಹೊರ ತಂದಿರುವ ಕವನ ಸಂಕಲನದಲ್ಲಿ ಪ್ರಕಟವಾಗಿದೆ. ರಾಮಮೂರ್ತಿ ಕನ್ನಡ ಸಂಘ ಹೊರ ತಂದಿರುವ ಕವನ ಸಂಕಲನದಲ್ಲಿ ಇವರ ಕವನವೊಂದು ಪ್ರಕಟವಾಗಿದೆ. ಸುಧಾ ವಾರ ಪತ್ರಿಕೆಯಲ್ಲಿಯೂ ಇವರ ಒಂದು ಚುಟುಕು ಪ್ರಕಟವಾಗಿದೆ.
ನಾಗರಾಜಸ್ವಾಮಿ ಹವ್ಯಾಸಿ ಪತ್ರಕರ್ತರಾಗಿರುವುದು ವಿಶೇಷ. ಇವರ ಅನೇಕ ಲೇಖನಗಳು ವಿಜಯ ಕರ್ನಾಟಕ, ಪ್ರಜಾವಾಣಿ, ಉದಯವಾಣಿ, ಸಂಜೆವಾಣಿ ಮತ್ತು ಸುಧಾ ವಾರ ಪತ್ರಿಕೆಯಲ್ಲಿ ಪ್ರಕಟವಾಗಿವೆ. ಬಹುಜನ ಕನ್ನಡಿಗರು ಪತ್ರಿಕೆಯಲ್ಲಿ ಇವರ ವರದಿಗಳು ಪ್ರಕಟಗೊಂಡಿವೆ.
ಜೊತೆಗೆ ಅಂಕಣಕಾರರಾಗಿಯೂ ಲೇಖನಗಳನ್ನು ಬರೆಯುತ್ತಿದ್ದು, ಅಡ್ವೈಸರ್ ಮಾಸ ಪತ್ರಿಕೆಯಲ್ಲಿ ರಾಜಕೀಯ ವಿಶ್ಲೇಷಣಾ ಲೇಖನಗಳನ್ನು ಬರೆಯುತ್ತಿದ್ದಾರೆ.
ಕನ್ನಡ ಪರ ಸಂಘಟನೆಯಾದ ಕನ್ನಡ ಸಂಘರ್ಷ ಸಮಿತಿಯ ಸಂಪರ್ಕ ಹೊಂದಿದ ನಾಗರಾಜಸ್ವಾಮಿ, ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ನಂತರ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಇವರು ಕಳೆದ 15 ವರ್ಷಕ್ಕೂ ಹೆಚ್ಚು ಕಾಲದಿಂದ ಸಮಿತಿಯ ಕೋಶಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ನಂಟು:
ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯಲ್ಲಿ ವಿಶೇಷ ಆಹ್ವಾನಿತ, ಸಂಘ ಸಂಸ್ಥೆ ಪ್ರತಿನಿಧಿ, ಗೌರವ ಸಂಚಾಲಕರಾಗಿ ಸೇವೆ ಸಲ್ಲಿಸಿರುವ ಇವರು ಕಳೆದ 3 ವರ್ಷಗಳಿಂದ ಗೌರವ ಕೋಶಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಬೆಂಗಳೂರು ವರದಿಗಾರರ ಕೂಟದ ಗೌರವ ಸಲಹೆಗಾರರಾಗಿಯೂ ಆಗಿದ್ದಾರೆ.
ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೆ ಒಪ್ಪಿಕೊಂಡ ಕೆಲಸವನ್ನು ಅಚ್ಚುಕಟ್ಟಾಗಿ ಸಕಾಲಕ್ಕೆ ಮಾಡಿಕೊಡುವ, ಎಲ್ಲರ ಜೊತೆ ಆತ್ಮೀಯವಾಗಿ ನಡೆದುಕೊಳ್ಳುವ, ವಿನಾಕಾರಣ ಯಾರ ಜೊತೆಯೂ ಸಂಘರ್ಷಕ್ಕೆ ಹೋಗದಂತಹ ವಿಶಿಷ್ಟ ವ್ಯಕ್ತಿತ್ವ ಹೊಂದಿರುವ ನಾಗರಾಜಸ್ವಾಮಿ 50 ಸಾರ್ಥಕ ವರ್ಷಗಳನ್ನು ಅರ್ಥಪೂರ್ಣವಾಗಿ ಪೂರೈಸಿರುವ ಈ ಸುಸಂದರ್ಭದಲ್ಲಿ ಅ.ನ.ಕೃ. ಕನ್ನಡ ಸಂಘ ಮತ್ತು ಸ್ನೇಹಿತರು ಇದೇ 29ರಂದು ಅಭಿನಂದಿಸುತ್ತಿದೆ.



Click it and Unblock the Notifications