Latest Updates
-
ಕಜರಿ ತೀಜ್ 2026: ಉಪವಾಸದ ದಿನ ಆರೋಗ್ಯ ಮತ್ತು ಸಂಗಾತಿಯೊಂದಿಗೆ ಸುಗಮ ಸಂವಹನಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಇಂದೇ ಕೊನೆಯ ಅವಕಾಶ: ಎಲ್ಪಿಜಿ ಇ-ಕೆವೈಸಿ ಮಾಡದಿದ್ದರೆ ಸಿಲಿಂಡರ್ ದರ ಏರಿಕೆ ಖಚಿತ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆ ಬಜೆಟ್ ಉಳಿಸಿ, ಈರುಳ್ಳಿ ಇಲ್ಲದೆಯೂ ರುಚಿಕರ ಹೈ-ಪ್ರೋಟೀನ್ ಊಟ ಮಾಡಿ! -
#5DayWeekandFairPLI ಟ್ರೆಂಡ್: ಬ್ಯಾಂಕ್ ಮತ್ತು ಐಟಿ ಉದ್ಯೋಗಿಗಳ ಆಕ್ರೋಶ, 5 ದಿನದ ಕೆಲಸಕ್ಕೆ ಸಿಗುತ್ತಾ ಮನ್ನಣೆ? -
ಮಕ್ಕಳಿಗಾಗಿ ದಾಂಪತ್ಯ ಉಳಿಸಿಕೊಳ್ಳಬೇಕೇ? ಜೀನತ್ ಅಮಾನ್ ಅವರ ವೈರಲ್ ಸಲಹೆ ಮತ್ತು ಪೋಷಕರಿಗೆ ಮಹತ್ವದ ಪಾಠ -
ಇಂದು ಬೆಂಗಳೂರಿನಲ್ಲಿ ಪವರ್ ಕಟ್: ವೈಟ್ಫೀಲ್ಡ್, ಪೀಣ್ಯ, ಮಲ್ಲೇಶ್ವರಂ ಸೇರಿ ಪ್ರಮುಖ ಏರಿಯಾಗಳ ಪಟ್ಟಿ ಇಲ್ಲಿದೆ -
ಇನ್ಮುಂದೆ ಬಿಸ್ಕತ್ತು, ಕೂಲ್ ಡ್ರಿಂಕ್ಸ್ ಮೇಲೆ ಕೆಂಪು ಎಚ್ಚರಿಕೆ ಲೇಬಲ್: FSSAI ಹೊಸ ನಿಯಮವೇನು? -
ಮುಂಬೈ ಲೋಕಲ್ ರೈಲು ಪ್ರಯಾಣಿಕರೇ ಗಮನಿಸಿ: ಇಂದು ಮೆಗಾ ಬ್ಲಾಕ್, ಯಾವ ಮಾರ್ಗದಲ್ಲಿ ಸಂಚಾರ ಸ್ಥಗಿತ? -
ರಾಷ್ಟ್ರೀಯ ಪೋಷಕಾಂಶ ವಾರ: ಕನ್ನಡಿಗರ ಆರೋಗ್ಯಕ್ಕಾಗಿ 7 ದಿನಗಳ ಸಿಂಪಲ್ ಡಯಟ್ ಮತ್ತು ವ್ಯಾಯಾಮ ಪ್ಲಾನ್! -
ಕ್ರಿಕೆಟ್ ಮ್ಯಾಚ್ ನೋಡುವಾಗ ಮನೆಯಲ್ಲಿ ಜಗಳ ಬೇಡ: ದಂಪತಿಗಳು ಇಂದೇ ಮಾಡಿಕೊಳ್ಳಿ ಈ 'ಮ್ಯಾಚ್ ಡೇ ಒಪ್ಪಂದ'!
ಸಾಹಿತ್ಯಾರಾಧಕ, ಪತ್ರಕರ್ತ ನಾಗರಾಜಸ್ವಾಮಿಗೆ ಕಸಾಪ ನಂಟು

ಇವರು ರಚಿಸಿದ ಕೆಲ ಚುಟುಕುಗಳು ಚುಟುಕು ಸಾಹಿತ್ಯ ಪರಿಷತ್ತು ಹೊರತಂದಿರುವ ಚುಟುಕು ಸಂಗ್ರಹ ಕೃತಿಯಲ್ಲಿ, ಅಡ್ವೈಸರ್ ಪ್ರಕಾಶನ ಹೊರ ತಂದಿರುವ ಕವನ ಸಂಕಲನದಲ್ಲಿ ಪ್ರಕಟವಾಗಿದೆ. ರಾಮಮೂರ್ತಿ ಕನ್ನಡ ಸಂಘ ಹೊರ ತಂದಿರುವ ಕವನ ಸಂಕಲನದಲ್ಲಿ ಇವರ ಕವನವೊಂದು ಪ್ರಕಟವಾಗಿದೆ. ಸುಧಾ ವಾರ ಪತ್ರಿಕೆಯಲ್ಲಿಯೂ ಇವರ ಒಂದು ಚುಟುಕು ಪ್ರಕಟವಾಗಿದೆ.
ನಾಗರಾಜಸ್ವಾಮಿ ಹವ್ಯಾಸಿ ಪತ್ರಕರ್ತರಾಗಿರುವುದು ವಿಶೇಷ. ಇವರ ಅನೇಕ ಲೇಖನಗಳು ವಿಜಯ ಕರ್ನಾಟಕ, ಪ್ರಜಾವಾಣಿ, ಉದಯವಾಣಿ, ಸಂಜೆವಾಣಿ ಮತ್ತು ಸುಧಾ ವಾರ ಪತ್ರಿಕೆಯಲ್ಲಿ ಪ್ರಕಟವಾಗಿವೆ. ಬಹುಜನ ಕನ್ನಡಿಗರು ಪತ್ರಿಕೆಯಲ್ಲಿ ಇವರ ವರದಿಗಳು ಪ್ರಕಟಗೊಂಡಿವೆ.
ಜೊತೆಗೆ ಅಂಕಣಕಾರರಾಗಿಯೂ ಲೇಖನಗಳನ್ನು ಬರೆಯುತ್ತಿದ್ದು, ಅಡ್ವೈಸರ್ ಮಾಸ ಪತ್ರಿಕೆಯಲ್ಲಿ ರಾಜಕೀಯ ವಿಶ್ಲೇಷಣಾ ಲೇಖನಗಳನ್ನು ಬರೆಯುತ್ತಿದ್ದಾರೆ.
ಕನ್ನಡ ಪರ ಸಂಘಟನೆಯಾದ ಕನ್ನಡ ಸಂಘರ್ಷ ಸಮಿತಿಯ ಸಂಪರ್ಕ ಹೊಂದಿದ ನಾಗರಾಜಸ್ವಾಮಿ, ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ನಂತರ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಇವರು ಕಳೆದ 15 ವರ್ಷಕ್ಕೂ ಹೆಚ್ಚು ಕಾಲದಿಂದ ಸಮಿತಿಯ ಕೋಶಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ನಂಟು:
ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯಲ್ಲಿ ವಿಶೇಷ ಆಹ್ವಾನಿತ, ಸಂಘ ಸಂಸ್ಥೆ ಪ್ರತಿನಿಧಿ, ಗೌರವ ಸಂಚಾಲಕರಾಗಿ ಸೇವೆ ಸಲ್ಲಿಸಿರುವ ಇವರು ಕಳೆದ 3 ವರ್ಷಗಳಿಂದ ಗೌರವ ಕೋಶಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಬೆಂಗಳೂರು ವರದಿಗಾರರ ಕೂಟದ ಗೌರವ ಸಲಹೆಗಾರರಾಗಿಯೂ ಆಗಿದ್ದಾರೆ.
ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೆ ಒಪ್ಪಿಕೊಂಡ ಕೆಲಸವನ್ನು ಅಚ್ಚುಕಟ್ಟಾಗಿ ಸಕಾಲಕ್ಕೆ ಮಾಡಿಕೊಡುವ, ಎಲ್ಲರ ಜೊತೆ ಆತ್ಮೀಯವಾಗಿ ನಡೆದುಕೊಳ್ಳುವ, ವಿನಾಕಾರಣ ಯಾರ ಜೊತೆಯೂ ಸಂಘರ್ಷಕ್ಕೆ ಹೋಗದಂತಹ ವಿಶಿಷ್ಟ ವ್ಯಕ್ತಿತ್ವ ಹೊಂದಿರುವ ನಾಗರಾಜಸ್ವಾಮಿ 50 ಸಾರ್ಥಕ ವರ್ಷಗಳನ್ನು ಅರ್ಥಪೂರ್ಣವಾಗಿ ಪೂರೈಸಿರುವ ಈ ಸುಸಂದರ್ಭದಲ್ಲಿ ಅ.ನ.ಕೃ. ಕನ್ನಡ ಸಂಘ ಮತ್ತು ಸ್ನೇಹಿತರು ಇದೇ 29ರಂದು ಅಭಿನಂದಿಸುತ್ತಿದೆ.



Click it and Unblock the Notifications