Latest Updates
-
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ!
ಸಾಹಿತ್ಯಾರಾಧಕ, ಪತ್ರಕರ್ತ ನಾಗರಾಜಸ್ವಾಮಿಗೆ ಕಸಾಪ ನಂಟು

ಇವರು ರಚಿಸಿದ ಕೆಲ ಚುಟುಕುಗಳು ಚುಟುಕು ಸಾಹಿತ್ಯ ಪರಿಷತ್ತು ಹೊರತಂದಿರುವ ಚುಟುಕು ಸಂಗ್ರಹ ಕೃತಿಯಲ್ಲಿ, ಅಡ್ವೈಸರ್ ಪ್ರಕಾಶನ ಹೊರ ತಂದಿರುವ ಕವನ ಸಂಕಲನದಲ್ಲಿ ಪ್ರಕಟವಾಗಿದೆ. ರಾಮಮೂರ್ತಿ ಕನ್ನಡ ಸಂಘ ಹೊರ ತಂದಿರುವ ಕವನ ಸಂಕಲನದಲ್ಲಿ ಇವರ ಕವನವೊಂದು ಪ್ರಕಟವಾಗಿದೆ. ಸುಧಾ ವಾರ ಪತ್ರಿಕೆಯಲ್ಲಿಯೂ ಇವರ ಒಂದು ಚುಟುಕು ಪ್ರಕಟವಾಗಿದೆ.
ನಾಗರಾಜಸ್ವಾಮಿ ಹವ್ಯಾಸಿ ಪತ್ರಕರ್ತರಾಗಿರುವುದು ವಿಶೇಷ. ಇವರ ಅನೇಕ ಲೇಖನಗಳು ವಿಜಯ ಕರ್ನಾಟಕ, ಪ್ರಜಾವಾಣಿ, ಉದಯವಾಣಿ, ಸಂಜೆವಾಣಿ ಮತ್ತು ಸುಧಾ ವಾರ ಪತ್ರಿಕೆಯಲ್ಲಿ ಪ್ರಕಟವಾಗಿವೆ. ಬಹುಜನ ಕನ್ನಡಿಗರು ಪತ್ರಿಕೆಯಲ್ಲಿ ಇವರ ವರದಿಗಳು ಪ್ರಕಟಗೊಂಡಿವೆ.
ಜೊತೆಗೆ ಅಂಕಣಕಾರರಾಗಿಯೂ ಲೇಖನಗಳನ್ನು ಬರೆಯುತ್ತಿದ್ದು, ಅಡ್ವೈಸರ್ ಮಾಸ ಪತ್ರಿಕೆಯಲ್ಲಿ ರಾಜಕೀಯ ವಿಶ್ಲೇಷಣಾ ಲೇಖನಗಳನ್ನು ಬರೆಯುತ್ತಿದ್ದಾರೆ.
ಕನ್ನಡ ಪರ ಸಂಘಟನೆಯಾದ ಕನ್ನಡ ಸಂಘರ್ಷ ಸಮಿತಿಯ ಸಂಪರ್ಕ ಹೊಂದಿದ ನಾಗರಾಜಸ್ವಾಮಿ, ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ನಂತರ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಇವರು ಕಳೆದ 15 ವರ್ಷಕ್ಕೂ ಹೆಚ್ಚು ಕಾಲದಿಂದ ಸಮಿತಿಯ ಕೋಶಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ನಂಟು:
ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯಲ್ಲಿ ವಿಶೇಷ ಆಹ್ವಾನಿತ, ಸಂಘ ಸಂಸ್ಥೆ ಪ್ರತಿನಿಧಿ, ಗೌರವ ಸಂಚಾಲಕರಾಗಿ ಸೇವೆ ಸಲ್ಲಿಸಿರುವ ಇವರು ಕಳೆದ 3 ವರ್ಷಗಳಿಂದ ಗೌರವ ಕೋಶಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಬೆಂಗಳೂರು ವರದಿಗಾರರ ಕೂಟದ ಗೌರವ ಸಲಹೆಗಾರರಾಗಿಯೂ ಆಗಿದ್ದಾರೆ.
ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೆ ಒಪ್ಪಿಕೊಂಡ ಕೆಲಸವನ್ನು ಅಚ್ಚುಕಟ್ಟಾಗಿ ಸಕಾಲಕ್ಕೆ ಮಾಡಿಕೊಡುವ, ಎಲ್ಲರ ಜೊತೆ ಆತ್ಮೀಯವಾಗಿ ನಡೆದುಕೊಳ್ಳುವ, ವಿನಾಕಾರಣ ಯಾರ ಜೊತೆಯೂ ಸಂಘರ್ಷಕ್ಕೆ ಹೋಗದಂತಹ ವಿಶಿಷ್ಟ ವ್ಯಕ್ತಿತ್ವ ಹೊಂದಿರುವ ನಾಗರಾಜಸ್ವಾಮಿ 50 ಸಾರ್ಥಕ ವರ್ಷಗಳನ್ನು ಅರ್ಥಪೂರ್ಣವಾಗಿ ಪೂರೈಸಿರುವ ಈ ಸುಸಂದರ್ಭದಲ್ಲಿ ಅ.ನ.ಕೃ. ಕನ್ನಡ ಸಂಘ ಮತ್ತು ಸ್ನೇಹಿತರು ಇದೇ 29ರಂದು ಅಭಿನಂದಿಸುತ್ತಿದೆ.



Click it and Unblock the Notifications