Latest Updates
-
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು
ಸಾಹಿತ್ಯಾರಾಧಕ, ಪತ್ರಕರ್ತ ನಾಗರಾಜಸ್ವಾಮಿಗೆ ಕಸಾಪ ನಂಟು

ಇವರು ರಚಿಸಿದ ಕೆಲ ಚುಟುಕುಗಳು ಚುಟುಕು ಸಾಹಿತ್ಯ ಪರಿಷತ್ತು ಹೊರತಂದಿರುವ ಚುಟುಕು ಸಂಗ್ರಹ ಕೃತಿಯಲ್ಲಿ, ಅಡ್ವೈಸರ್ ಪ್ರಕಾಶನ ಹೊರ ತಂದಿರುವ ಕವನ ಸಂಕಲನದಲ್ಲಿ ಪ್ರಕಟವಾಗಿದೆ. ರಾಮಮೂರ್ತಿ ಕನ್ನಡ ಸಂಘ ಹೊರ ತಂದಿರುವ ಕವನ ಸಂಕಲನದಲ್ಲಿ ಇವರ ಕವನವೊಂದು ಪ್ರಕಟವಾಗಿದೆ. ಸುಧಾ ವಾರ ಪತ್ರಿಕೆಯಲ್ಲಿಯೂ ಇವರ ಒಂದು ಚುಟುಕು ಪ್ರಕಟವಾಗಿದೆ.
ನಾಗರಾಜಸ್ವಾಮಿ ಹವ್ಯಾಸಿ ಪತ್ರಕರ್ತರಾಗಿರುವುದು ವಿಶೇಷ. ಇವರ ಅನೇಕ ಲೇಖನಗಳು ವಿಜಯ ಕರ್ನಾಟಕ, ಪ್ರಜಾವಾಣಿ, ಉದಯವಾಣಿ, ಸಂಜೆವಾಣಿ ಮತ್ತು ಸುಧಾ ವಾರ ಪತ್ರಿಕೆಯಲ್ಲಿ ಪ್ರಕಟವಾಗಿವೆ. ಬಹುಜನ ಕನ್ನಡಿಗರು ಪತ್ರಿಕೆಯಲ್ಲಿ ಇವರ ವರದಿಗಳು ಪ್ರಕಟಗೊಂಡಿವೆ.
ಜೊತೆಗೆ ಅಂಕಣಕಾರರಾಗಿಯೂ ಲೇಖನಗಳನ್ನು ಬರೆಯುತ್ತಿದ್ದು, ಅಡ್ವೈಸರ್ ಮಾಸ ಪತ್ರಿಕೆಯಲ್ಲಿ ರಾಜಕೀಯ ವಿಶ್ಲೇಷಣಾ ಲೇಖನಗಳನ್ನು ಬರೆಯುತ್ತಿದ್ದಾರೆ.
ಕನ್ನಡ ಪರ ಸಂಘಟನೆಯಾದ ಕನ್ನಡ ಸಂಘರ್ಷ ಸಮಿತಿಯ ಸಂಪರ್ಕ ಹೊಂದಿದ ನಾಗರಾಜಸ್ವಾಮಿ, ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ನಂತರ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಇವರು ಕಳೆದ 15 ವರ್ಷಕ್ಕೂ ಹೆಚ್ಚು ಕಾಲದಿಂದ ಸಮಿತಿಯ ಕೋಶಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ನಂಟು:
ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯಲ್ಲಿ ವಿಶೇಷ ಆಹ್ವಾನಿತ, ಸಂಘ ಸಂಸ್ಥೆ ಪ್ರತಿನಿಧಿ, ಗೌರವ ಸಂಚಾಲಕರಾಗಿ ಸೇವೆ ಸಲ್ಲಿಸಿರುವ ಇವರು ಕಳೆದ 3 ವರ್ಷಗಳಿಂದ ಗೌರವ ಕೋಶಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಬೆಂಗಳೂರು ವರದಿಗಾರರ ಕೂಟದ ಗೌರವ ಸಲಹೆಗಾರರಾಗಿಯೂ ಆಗಿದ್ದಾರೆ.
ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೆ ಒಪ್ಪಿಕೊಂಡ ಕೆಲಸವನ್ನು ಅಚ್ಚುಕಟ್ಟಾಗಿ ಸಕಾಲಕ್ಕೆ ಮಾಡಿಕೊಡುವ, ಎಲ್ಲರ ಜೊತೆ ಆತ್ಮೀಯವಾಗಿ ನಡೆದುಕೊಳ್ಳುವ, ವಿನಾಕಾರಣ ಯಾರ ಜೊತೆಯೂ ಸಂಘರ್ಷಕ್ಕೆ ಹೋಗದಂತಹ ವಿಶಿಷ್ಟ ವ್ಯಕ್ತಿತ್ವ ಹೊಂದಿರುವ ನಾಗರಾಜಸ್ವಾಮಿ 50 ಸಾರ್ಥಕ ವರ್ಷಗಳನ್ನು ಅರ್ಥಪೂರ್ಣವಾಗಿ ಪೂರೈಸಿರುವ ಈ ಸುಸಂದರ್ಭದಲ್ಲಿ ಅ.ನ.ಕೃ. ಕನ್ನಡ ಸಂಘ ಮತ್ತು ಸ್ನೇಹಿತರು ಇದೇ 29ರಂದು ಅಭಿನಂದಿಸುತ್ತಿದೆ.



Click it and Unblock the Notifications











