Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಸಾಹಿತ್ಯಾರಾಧಕ, ಪತ್ರಕರ್ತ ನಾಗರಾಜಸ್ವಾಮಿಗೆ ಕಸಾಪ ನಂಟು

ಇವರು ರಚಿಸಿದ ಕೆಲ ಚುಟುಕುಗಳು ಚುಟುಕು ಸಾಹಿತ್ಯ ಪರಿಷತ್ತು ಹೊರತಂದಿರುವ ಚುಟುಕು ಸಂಗ್ರಹ ಕೃತಿಯಲ್ಲಿ, ಅಡ್ವೈಸರ್ ಪ್ರಕಾಶನ ಹೊರ ತಂದಿರುವ ಕವನ ಸಂಕಲನದಲ್ಲಿ ಪ್ರಕಟವಾಗಿದೆ. ರಾಮಮೂರ್ತಿ ಕನ್ನಡ ಸಂಘ ಹೊರ ತಂದಿರುವ ಕವನ ಸಂಕಲನದಲ್ಲಿ ಇವರ ಕವನವೊಂದು ಪ್ರಕಟವಾಗಿದೆ. ಸುಧಾ ವಾರ ಪತ್ರಿಕೆಯಲ್ಲಿಯೂ ಇವರ ಒಂದು ಚುಟುಕು ಪ್ರಕಟವಾಗಿದೆ.
ನಾಗರಾಜಸ್ವಾಮಿ ಹವ್ಯಾಸಿ ಪತ್ರಕರ್ತರಾಗಿರುವುದು ವಿಶೇಷ. ಇವರ ಅನೇಕ ಲೇಖನಗಳು ವಿಜಯ ಕರ್ನಾಟಕ, ಪ್ರಜಾವಾಣಿ, ಉದಯವಾಣಿ, ಸಂಜೆವಾಣಿ ಮತ್ತು ಸುಧಾ ವಾರ ಪತ್ರಿಕೆಯಲ್ಲಿ ಪ್ರಕಟವಾಗಿವೆ. ಬಹುಜನ ಕನ್ನಡಿಗರು ಪತ್ರಿಕೆಯಲ್ಲಿ ಇವರ ವರದಿಗಳು ಪ್ರಕಟಗೊಂಡಿವೆ.
ಜೊತೆಗೆ ಅಂಕಣಕಾರರಾಗಿಯೂ ಲೇಖನಗಳನ್ನು ಬರೆಯುತ್ತಿದ್ದು, ಅಡ್ವೈಸರ್ ಮಾಸ ಪತ್ರಿಕೆಯಲ್ಲಿ ರಾಜಕೀಯ ವಿಶ್ಲೇಷಣಾ ಲೇಖನಗಳನ್ನು ಬರೆಯುತ್ತಿದ್ದಾರೆ.
ಕನ್ನಡ ಪರ ಸಂಘಟನೆಯಾದ ಕನ್ನಡ ಸಂಘರ್ಷ ಸಮಿತಿಯ ಸಂಪರ್ಕ ಹೊಂದಿದ ನಾಗರಾಜಸ್ವಾಮಿ, ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ನಂತರ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಇವರು ಕಳೆದ 15 ವರ್ಷಕ್ಕೂ ಹೆಚ್ಚು ಕಾಲದಿಂದ ಸಮಿತಿಯ ಕೋಶಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ನಂಟು:
ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯಲ್ಲಿ ವಿಶೇಷ ಆಹ್ವಾನಿತ, ಸಂಘ ಸಂಸ್ಥೆ ಪ್ರತಿನಿಧಿ, ಗೌರವ ಸಂಚಾಲಕರಾಗಿ ಸೇವೆ ಸಲ್ಲಿಸಿರುವ ಇವರು ಕಳೆದ 3 ವರ್ಷಗಳಿಂದ ಗೌರವ ಕೋಶಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಬೆಂಗಳೂರು ವರದಿಗಾರರ ಕೂಟದ ಗೌರವ ಸಲಹೆಗಾರರಾಗಿಯೂ ಆಗಿದ್ದಾರೆ.
ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೆ ಒಪ್ಪಿಕೊಂಡ ಕೆಲಸವನ್ನು ಅಚ್ಚುಕಟ್ಟಾಗಿ ಸಕಾಲಕ್ಕೆ ಮಾಡಿಕೊಡುವ, ಎಲ್ಲರ ಜೊತೆ ಆತ್ಮೀಯವಾಗಿ ನಡೆದುಕೊಳ್ಳುವ, ವಿನಾಕಾರಣ ಯಾರ ಜೊತೆಯೂ ಸಂಘರ್ಷಕ್ಕೆ ಹೋಗದಂತಹ ವಿಶಿಷ್ಟ ವ್ಯಕ್ತಿತ್ವ ಹೊಂದಿರುವ ನಾಗರಾಜಸ್ವಾಮಿ 50 ಸಾರ್ಥಕ ವರ್ಷಗಳನ್ನು ಅರ್ಥಪೂರ್ಣವಾಗಿ ಪೂರೈಸಿರುವ ಈ ಸುಸಂದರ್ಭದಲ್ಲಿ ಅ.ನ.ಕೃ. ಕನ್ನಡ ಸಂಘ ಮತ್ತು ಸ್ನೇಹಿತರು ಇದೇ 29ರಂದು ಅಭಿನಂದಿಸುತ್ತಿದೆ.



Click it and Unblock the Notifications