Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಬೆಂಗಳೂರು ಐಟಿ ಬ್ರಹ್ಮಚಾರಿಗಳ ಹದಗೆಟ್ಟ ಬದುಕು

ಮದುವೆಯ ಹೊಸ್ತಿಲಲ್ಲಿರುವ ದುಡಿಮೆಯ ಕಾಯಕವನ್ನು ಮಾಡಿಕೊಂಡಿರುವ ಐದು ಯುವಕರಿರುವ ಮನೆಯಿಂದ ಮಂಗಳವಾರ ಬೆಳ್ಳಂಬೆಳಿಗ್ಗೆ ಒಂದು ಲ್ಯಾಪ್ಟಾಪ್ ಕಳ್ಳತನವಾಗಿದೆ. ಅಯ್ಯೋ ಅಷ್ಟೇನಾ ಅಂತ ನಿರ್ಲಕ್ಷ್ಯ ಮಾಡಬೇಡಿ. ಇಲ್ಲಿ ಲ್ಯಾಪ್ಟಾಪ್ ಕಳ್ಳತನವಾಗಿದೆ ಎನ್ನುವುದಕ್ಕಿಂತ ಈ ಯುವಕರ ಜೀವನಶೈಲಿ ಆ ಕಳ್ಳತನಕ್ಕೆ ಹೇಗೆ ಕಾರಣವಾಯಿತು ಎಂಬುದು ಇಲ್ಲಿ ಮುಖ್ಯ.
ಇರುವ ಐದು ಜನರಲ್ಲಿ ಒಬ್ಬೊಬ್ಬರು ಒಂದೊಂದು ಕಂಪನಿಯಲ್ಲಿ ಕೆಲಸಕ್ಕಿದ್ದಾರೆ, ಹೆಚ್ಚಾಗಿ ಸಾಫ್ಟ್ ವೇರ್ ಕಂಪನಿಗಳಲ್ಲಿ. ಒಬ್ಬ ಹಿರಿಯ ತಾಯಿಯನ್ನು ಅಡುಗೆ ಮಾಡಿಕೊಡಲು ನೇಮಿಸಿಕೊಂಡಿದ್ದಾರೆ. ಜೀವನ ಆರಾಮವಾಗಿದೆ. ಕಂಪನಿಯಲ್ಲಿ ಕೈತುಂಬ ಸಂಬಳ, ಮನೆಯಲ್ಲಿ ಊಟ, ತಿಂಡಿ, ನಿದ್ದೆ, ಮಸ್ತಿ ಮಜಾಕ್ಕೇನೂ ಕೊರತೆಯಿಲ್ಲ.
ಒಬ್ಬೊಬ್ಬರದೂ ಒಂದೊಂದು ಟೈಮಿಂಗ್. ಒಬ್ಬ ಇನ್ನೂ ನಕ್ಷತ್ರಗಳು ಮಿಣುಕುತ್ತಿರುವ ಹೊತ್ತಿನಲ್ಲಿ ಬೆಳಿಗ್ಗೆ 4.30ಕ್ಕೆ ಮನೆಯಿಂದ ಅಡಿಯಿಟ್ಟರೆ, ಇನ್ನೊಬ್ಬ ಸುತ್ತಮುತ್ತಲಿನವರು ಜಾಗಿಂಗ್ ಶುರು ಮಾಡುವ ಹೊತ್ತಿನಲ್ಲಿ. ಮಗದೊಬ್ಬ ಪೇಪರಿನವ ಪೇಪರ್ ಬಿಸಾಕಿ ಹೋಗುವ ಹೊತ್ತು. ಉಳಿದಿಬ್ಬರು ಚಳಿಗೆ ರಗ್ಗುಹೊದ್ದು ಮಲಗಿರುತ್ತಾರೆ.
ಪ್ರತಿಯೊಬ್ಬರ ಕೈಯಲ್ಲೂ ಬೀಗವಿಲ್ಲದ ಕಾರಣ ಕೆಲಸಕ್ಕೆ ಹೋಗುವಾಗ, ಯಾರನ್ನೂ ಎಬ್ಬಿಸದೆ ಸುಮ್ಮನೆ ಬಾಗಿಲೆಳೆದುಕೊಂಡು ಕಚೇರಿಯ ಹಾದಿ ಹಿಡಿಯುತ್ತಾರೆ. ಇದು ದಿನಂಪ್ರತಿ ನಡೆದುಕೊಂಡು ಬಂದಿರುವ ರೀತಿರಿವಾಜು. ಇಲ್ಲಿಯವರೆಗೆ ಎಲ್ಲವೂ ಸುಸೂತ್ರವಾಗಿ ನಡೆದುಕೊಂಡು ಬಂದಿತ್ತು. ತೆರೆದಿದೆ ಮನೆ ಓ ಬಾ ಅತಿಥಿ ಎಂದರೂ ಯಾರೂ ಬಂದಿರಲಿಲ್ಲ.
ಆದರೆ, ಪ್ರತಿದಿನ ಸೂರ್ಯ ಪೂರ್ವ ದಿಕ್ಕಿನಲ್ಲೇ ಹುಟ್ಟುತ್ತಾನಾದರೂ, ಎಲ್ಲ ದಿನವೂ ಒಂದೇ ರೀತಿಯಿರುವುದಿಲ್ಲವಲ್ಲ? ಇಂದಿನ ಬೆಳಗಿನ ಮುಹೂರ್ತವನ್ನು ಆಯ್ದುಕೊಂಡ ಕಿಲಾಡಿ ಕಳ್ಳನೊಬ್ಬ, ಉಳಿದಿಬ್ಬರು ಮಲಗಿದ ಕೋಣೆಗೇ ನುಗ್ಗಿ ಸದ್ದಿಲ್ಲದಂತೆ ಲ್ಯಾಪ್ ಟಾಪ್ ಎಗರಿಸಿಕೊಂಡು ಹೋಗಿದ್ದಾನೆ. ಬೆಳಕು ಹರಿದು ಕಣ್ಣು ಉಜ್ಜುವಾಗ ಇವರಿಗೆ ಜ್ಞಾನೋದಯವಾಗಿದೆ.
ಹೀಗಿದೆ ನೋಡಿ ನಮ್ಮ ಬೆಂಗಳೂರಿನ ಬ್ರಹ್ಮಚಾರಿಗಳ ಜೀವನ. ಇದು ಇವರ ಕಥೆ ಮಾತ್ರವಲ್ಲ. ಕೆಲಸಕ್ಕೆಂದು ರಾಜ್ಯದ ಅನೇಕ ಕಡೆಗಳಿಂದ ಗುಳೆಯೆದ್ದು ಬಂದಿರುವ ಅನೇಕರ ಕಥೆಯೂ ಇದೇ ರೀತಿಯಾಗಿರಬಹುದು. ಈಗ ಎಚ್ಚೆತ್ತುಕೊಳ್ಳುವ ಸರದಿ ಯುವ ಬ್ಯಾಚುಲರ್ ಗಳದ್ದು.



Click it and Unblock the Notifications