Latest Updates
-
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ
ಬೆಂಗಳೂರು ಐಟಿ ಬ್ರಹ್ಮಚಾರಿಗಳ ಹದಗೆಟ್ಟ ಬದುಕು

ಮದುವೆಯ ಹೊಸ್ತಿಲಲ್ಲಿರುವ ದುಡಿಮೆಯ ಕಾಯಕವನ್ನು ಮಾಡಿಕೊಂಡಿರುವ ಐದು ಯುವಕರಿರುವ ಮನೆಯಿಂದ ಮಂಗಳವಾರ ಬೆಳ್ಳಂಬೆಳಿಗ್ಗೆ ಒಂದು ಲ್ಯಾಪ್ಟಾಪ್ ಕಳ್ಳತನವಾಗಿದೆ. ಅಯ್ಯೋ ಅಷ್ಟೇನಾ ಅಂತ ನಿರ್ಲಕ್ಷ್ಯ ಮಾಡಬೇಡಿ. ಇಲ್ಲಿ ಲ್ಯಾಪ್ಟಾಪ್ ಕಳ್ಳತನವಾಗಿದೆ ಎನ್ನುವುದಕ್ಕಿಂತ ಈ ಯುವಕರ ಜೀವನಶೈಲಿ ಆ ಕಳ್ಳತನಕ್ಕೆ ಹೇಗೆ ಕಾರಣವಾಯಿತು ಎಂಬುದು ಇಲ್ಲಿ ಮುಖ್ಯ.
ಇರುವ ಐದು ಜನರಲ್ಲಿ ಒಬ್ಬೊಬ್ಬರು ಒಂದೊಂದು ಕಂಪನಿಯಲ್ಲಿ ಕೆಲಸಕ್ಕಿದ್ದಾರೆ, ಹೆಚ್ಚಾಗಿ ಸಾಫ್ಟ್ ವೇರ್ ಕಂಪನಿಗಳಲ್ಲಿ. ಒಬ್ಬ ಹಿರಿಯ ತಾಯಿಯನ್ನು ಅಡುಗೆ ಮಾಡಿಕೊಡಲು ನೇಮಿಸಿಕೊಂಡಿದ್ದಾರೆ. ಜೀವನ ಆರಾಮವಾಗಿದೆ. ಕಂಪನಿಯಲ್ಲಿ ಕೈತುಂಬ ಸಂಬಳ, ಮನೆಯಲ್ಲಿ ಊಟ, ತಿಂಡಿ, ನಿದ್ದೆ, ಮಸ್ತಿ ಮಜಾಕ್ಕೇನೂ ಕೊರತೆಯಿಲ್ಲ.
ಒಬ್ಬೊಬ್ಬರದೂ ಒಂದೊಂದು ಟೈಮಿಂಗ್. ಒಬ್ಬ ಇನ್ನೂ ನಕ್ಷತ್ರಗಳು ಮಿಣುಕುತ್ತಿರುವ ಹೊತ್ತಿನಲ್ಲಿ ಬೆಳಿಗ್ಗೆ 4.30ಕ್ಕೆ ಮನೆಯಿಂದ ಅಡಿಯಿಟ್ಟರೆ, ಇನ್ನೊಬ್ಬ ಸುತ್ತಮುತ್ತಲಿನವರು ಜಾಗಿಂಗ್ ಶುರು ಮಾಡುವ ಹೊತ್ತಿನಲ್ಲಿ. ಮಗದೊಬ್ಬ ಪೇಪರಿನವ ಪೇಪರ್ ಬಿಸಾಕಿ ಹೋಗುವ ಹೊತ್ತು. ಉಳಿದಿಬ್ಬರು ಚಳಿಗೆ ರಗ್ಗುಹೊದ್ದು ಮಲಗಿರುತ್ತಾರೆ.
ಪ್ರತಿಯೊಬ್ಬರ ಕೈಯಲ್ಲೂ ಬೀಗವಿಲ್ಲದ ಕಾರಣ ಕೆಲಸಕ್ಕೆ ಹೋಗುವಾಗ, ಯಾರನ್ನೂ ಎಬ್ಬಿಸದೆ ಸುಮ್ಮನೆ ಬಾಗಿಲೆಳೆದುಕೊಂಡು ಕಚೇರಿಯ ಹಾದಿ ಹಿಡಿಯುತ್ತಾರೆ. ಇದು ದಿನಂಪ್ರತಿ ನಡೆದುಕೊಂಡು ಬಂದಿರುವ ರೀತಿರಿವಾಜು. ಇಲ್ಲಿಯವರೆಗೆ ಎಲ್ಲವೂ ಸುಸೂತ್ರವಾಗಿ ನಡೆದುಕೊಂಡು ಬಂದಿತ್ತು. ತೆರೆದಿದೆ ಮನೆ ಓ ಬಾ ಅತಿಥಿ ಎಂದರೂ ಯಾರೂ ಬಂದಿರಲಿಲ್ಲ.
ಆದರೆ, ಪ್ರತಿದಿನ ಸೂರ್ಯ ಪೂರ್ವ ದಿಕ್ಕಿನಲ್ಲೇ ಹುಟ್ಟುತ್ತಾನಾದರೂ, ಎಲ್ಲ ದಿನವೂ ಒಂದೇ ರೀತಿಯಿರುವುದಿಲ್ಲವಲ್ಲ? ಇಂದಿನ ಬೆಳಗಿನ ಮುಹೂರ್ತವನ್ನು ಆಯ್ದುಕೊಂಡ ಕಿಲಾಡಿ ಕಳ್ಳನೊಬ್ಬ, ಉಳಿದಿಬ್ಬರು ಮಲಗಿದ ಕೋಣೆಗೇ ನುಗ್ಗಿ ಸದ್ದಿಲ್ಲದಂತೆ ಲ್ಯಾಪ್ ಟಾಪ್ ಎಗರಿಸಿಕೊಂಡು ಹೋಗಿದ್ದಾನೆ. ಬೆಳಕು ಹರಿದು ಕಣ್ಣು ಉಜ್ಜುವಾಗ ಇವರಿಗೆ ಜ್ಞಾನೋದಯವಾಗಿದೆ.
ಹೀಗಿದೆ ನೋಡಿ ನಮ್ಮ ಬೆಂಗಳೂರಿನ ಬ್ರಹ್ಮಚಾರಿಗಳ ಜೀವನ. ಇದು ಇವರ ಕಥೆ ಮಾತ್ರವಲ್ಲ. ಕೆಲಸಕ್ಕೆಂದು ರಾಜ್ಯದ ಅನೇಕ ಕಡೆಗಳಿಂದ ಗುಳೆಯೆದ್ದು ಬಂದಿರುವ ಅನೇಕರ ಕಥೆಯೂ ಇದೇ ರೀತಿಯಾಗಿರಬಹುದು. ಈಗ ಎಚ್ಚೆತ್ತುಕೊಳ್ಳುವ ಸರದಿ ಯುವ ಬ್ಯಾಚುಲರ್ ಗಳದ್ದು.



Click it and Unblock the Notifications











