Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಬೆಂಗಳೂರು ಐಟಿ ಬ್ರಹ್ಮಚಾರಿಗಳ ಹದಗೆಟ್ಟ ಬದುಕು

ಮದುವೆಯ ಹೊಸ್ತಿಲಲ್ಲಿರುವ ದುಡಿಮೆಯ ಕಾಯಕವನ್ನು ಮಾಡಿಕೊಂಡಿರುವ ಐದು ಯುವಕರಿರುವ ಮನೆಯಿಂದ ಮಂಗಳವಾರ ಬೆಳ್ಳಂಬೆಳಿಗ್ಗೆ ಒಂದು ಲ್ಯಾಪ್ಟಾಪ್ ಕಳ್ಳತನವಾಗಿದೆ. ಅಯ್ಯೋ ಅಷ್ಟೇನಾ ಅಂತ ನಿರ್ಲಕ್ಷ್ಯ ಮಾಡಬೇಡಿ. ಇಲ್ಲಿ ಲ್ಯಾಪ್ಟಾಪ್ ಕಳ್ಳತನವಾಗಿದೆ ಎನ್ನುವುದಕ್ಕಿಂತ ಈ ಯುವಕರ ಜೀವನಶೈಲಿ ಆ ಕಳ್ಳತನಕ್ಕೆ ಹೇಗೆ ಕಾರಣವಾಯಿತು ಎಂಬುದು ಇಲ್ಲಿ ಮುಖ್ಯ.
ಇರುವ ಐದು ಜನರಲ್ಲಿ ಒಬ್ಬೊಬ್ಬರು ಒಂದೊಂದು ಕಂಪನಿಯಲ್ಲಿ ಕೆಲಸಕ್ಕಿದ್ದಾರೆ, ಹೆಚ್ಚಾಗಿ ಸಾಫ್ಟ್ ವೇರ್ ಕಂಪನಿಗಳಲ್ಲಿ. ಒಬ್ಬ ಹಿರಿಯ ತಾಯಿಯನ್ನು ಅಡುಗೆ ಮಾಡಿಕೊಡಲು ನೇಮಿಸಿಕೊಂಡಿದ್ದಾರೆ. ಜೀವನ ಆರಾಮವಾಗಿದೆ. ಕಂಪನಿಯಲ್ಲಿ ಕೈತುಂಬ ಸಂಬಳ, ಮನೆಯಲ್ಲಿ ಊಟ, ತಿಂಡಿ, ನಿದ್ದೆ, ಮಸ್ತಿ ಮಜಾಕ್ಕೇನೂ ಕೊರತೆಯಿಲ್ಲ.
ಒಬ್ಬೊಬ್ಬರದೂ ಒಂದೊಂದು ಟೈಮಿಂಗ್. ಒಬ್ಬ ಇನ್ನೂ ನಕ್ಷತ್ರಗಳು ಮಿಣುಕುತ್ತಿರುವ ಹೊತ್ತಿನಲ್ಲಿ ಬೆಳಿಗ್ಗೆ 4.30ಕ್ಕೆ ಮನೆಯಿಂದ ಅಡಿಯಿಟ್ಟರೆ, ಇನ್ನೊಬ್ಬ ಸುತ್ತಮುತ್ತಲಿನವರು ಜಾಗಿಂಗ್ ಶುರು ಮಾಡುವ ಹೊತ್ತಿನಲ್ಲಿ. ಮಗದೊಬ್ಬ ಪೇಪರಿನವ ಪೇಪರ್ ಬಿಸಾಕಿ ಹೋಗುವ ಹೊತ್ತು. ಉಳಿದಿಬ್ಬರು ಚಳಿಗೆ ರಗ್ಗುಹೊದ್ದು ಮಲಗಿರುತ್ತಾರೆ.
ಪ್ರತಿಯೊಬ್ಬರ ಕೈಯಲ್ಲೂ ಬೀಗವಿಲ್ಲದ ಕಾರಣ ಕೆಲಸಕ್ಕೆ ಹೋಗುವಾಗ, ಯಾರನ್ನೂ ಎಬ್ಬಿಸದೆ ಸುಮ್ಮನೆ ಬಾಗಿಲೆಳೆದುಕೊಂಡು ಕಚೇರಿಯ ಹಾದಿ ಹಿಡಿಯುತ್ತಾರೆ. ಇದು ದಿನಂಪ್ರತಿ ನಡೆದುಕೊಂಡು ಬಂದಿರುವ ರೀತಿರಿವಾಜು. ಇಲ್ಲಿಯವರೆಗೆ ಎಲ್ಲವೂ ಸುಸೂತ್ರವಾಗಿ ನಡೆದುಕೊಂಡು ಬಂದಿತ್ತು. ತೆರೆದಿದೆ ಮನೆ ಓ ಬಾ ಅತಿಥಿ ಎಂದರೂ ಯಾರೂ ಬಂದಿರಲಿಲ್ಲ.
ಆದರೆ, ಪ್ರತಿದಿನ ಸೂರ್ಯ ಪೂರ್ವ ದಿಕ್ಕಿನಲ್ಲೇ ಹುಟ್ಟುತ್ತಾನಾದರೂ, ಎಲ್ಲ ದಿನವೂ ಒಂದೇ ರೀತಿಯಿರುವುದಿಲ್ಲವಲ್ಲ? ಇಂದಿನ ಬೆಳಗಿನ ಮುಹೂರ್ತವನ್ನು ಆಯ್ದುಕೊಂಡ ಕಿಲಾಡಿ ಕಳ್ಳನೊಬ್ಬ, ಉಳಿದಿಬ್ಬರು ಮಲಗಿದ ಕೋಣೆಗೇ ನುಗ್ಗಿ ಸದ್ದಿಲ್ಲದಂತೆ ಲ್ಯಾಪ್ ಟಾಪ್ ಎಗರಿಸಿಕೊಂಡು ಹೋಗಿದ್ದಾನೆ. ಬೆಳಕು ಹರಿದು ಕಣ್ಣು ಉಜ್ಜುವಾಗ ಇವರಿಗೆ ಜ್ಞಾನೋದಯವಾಗಿದೆ.
ಹೀಗಿದೆ ನೋಡಿ ನಮ್ಮ ಬೆಂಗಳೂರಿನ ಬ್ರಹ್ಮಚಾರಿಗಳ ಜೀವನ. ಇದು ಇವರ ಕಥೆ ಮಾತ್ರವಲ್ಲ. ಕೆಲಸಕ್ಕೆಂದು ರಾಜ್ಯದ ಅನೇಕ ಕಡೆಗಳಿಂದ ಗುಳೆಯೆದ್ದು ಬಂದಿರುವ ಅನೇಕರ ಕಥೆಯೂ ಇದೇ ರೀತಿಯಾಗಿರಬಹುದು. ಈಗ ಎಚ್ಚೆತ್ತುಕೊಳ್ಳುವ ಸರದಿ ಯುವ ಬ್ಯಾಚುಲರ್ ಗಳದ್ದು.



Click it and Unblock the Notifications