Latest Updates
-
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ
ಬೆಂಗಳೂರು ಐಟಿ ಬ್ರಹ್ಮಚಾರಿಗಳ ಹದಗೆಟ್ಟ ಬದುಕು

ಮದುವೆಯ ಹೊಸ್ತಿಲಲ್ಲಿರುವ ದುಡಿಮೆಯ ಕಾಯಕವನ್ನು ಮಾಡಿಕೊಂಡಿರುವ ಐದು ಯುವಕರಿರುವ ಮನೆಯಿಂದ ಮಂಗಳವಾರ ಬೆಳ್ಳಂಬೆಳಿಗ್ಗೆ ಒಂದು ಲ್ಯಾಪ್ಟಾಪ್ ಕಳ್ಳತನವಾಗಿದೆ. ಅಯ್ಯೋ ಅಷ್ಟೇನಾ ಅಂತ ನಿರ್ಲಕ್ಷ್ಯ ಮಾಡಬೇಡಿ. ಇಲ್ಲಿ ಲ್ಯಾಪ್ಟಾಪ್ ಕಳ್ಳತನವಾಗಿದೆ ಎನ್ನುವುದಕ್ಕಿಂತ ಈ ಯುವಕರ ಜೀವನಶೈಲಿ ಆ ಕಳ್ಳತನಕ್ಕೆ ಹೇಗೆ ಕಾರಣವಾಯಿತು ಎಂಬುದು ಇಲ್ಲಿ ಮುಖ್ಯ.
ಇರುವ ಐದು ಜನರಲ್ಲಿ ಒಬ್ಬೊಬ್ಬರು ಒಂದೊಂದು ಕಂಪನಿಯಲ್ಲಿ ಕೆಲಸಕ್ಕಿದ್ದಾರೆ, ಹೆಚ್ಚಾಗಿ ಸಾಫ್ಟ್ ವೇರ್ ಕಂಪನಿಗಳಲ್ಲಿ. ಒಬ್ಬ ಹಿರಿಯ ತಾಯಿಯನ್ನು ಅಡುಗೆ ಮಾಡಿಕೊಡಲು ನೇಮಿಸಿಕೊಂಡಿದ್ದಾರೆ. ಜೀವನ ಆರಾಮವಾಗಿದೆ. ಕಂಪನಿಯಲ್ಲಿ ಕೈತುಂಬ ಸಂಬಳ, ಮನೆಯಲ್ಲಿ ಊಟ, ತಿಂಡಿ, ನಿದ್ದೆ, ಮಸ್ತಿ ಮಜಾಕ್ಕೇನೂ ಕೊರತೆಯಿಲ್ಲ.
ಒಬ್ಬೊಬ್ಬರದೂ ಒಂದೊಂದು ಟೈಮಿಂಗ್. ಒಬ್ಬ ಇನ್ನೂ ನಕ್ಷತ್ರಗಳು ಮಿಣುಕುತ್ತಿರುವ ಹೊತ್ತಿನಲ್ಲಿ ಬೆಳಿಗ್ಗೆ 4.30ಕ್ಕೆ ಮನೆಯಿಂದ ಅಡಿಯಿಟ್ಟರೆ, ಇನ್ನೊಬ್ಬ ಸುತ್ತಮುತ್ತಲಿನವರು ಜಾಗಿಂಗ್ ಶುರು ಮಾಡುವ ಹೊತ್ತಿನಲ್ಲಿ. ಮಗದೊಬ್ಬ ಪೇಪರಿನವ ಪೇಪರ್ ಬಿಸಾಕಿ ಹೋಗುವ ಹೊತ್ತು. ಉಳಿದಿಬ್ಬರು ಚಳಿಗೆ ರಗ್ಗುಹೊದ್ದು ಮಲಗಿರುತ್ತಾರೆ.
ಪ್ರತಿಯೊಬ್ಬರ ಕೈಯಲ್ಲೂ ಬೀಗವಿಲ್ಲದ ಕಾರಣ ಕೆಲಸಕ್ಕೆ ಹೋಗುವಾಗ, ಯಾರನ್ನೂ ಎಬ್ಬಿಸದೆ ಸುಮ್ಮನೆ ಬಾಗಿಲೆಳೆದುಕೊಂಡು ಕಚೇರಿಯ ಹಾದಿ ಹಿಡಿಯುತ್ತಾರೆ. ಇದು ದಿನಂಪ್ರತಿ ನಡೆದುಕೊಂಡು ಬಂದಿರುವ ರೀತಿರಿವಾಜು. ಇಲ್ಲಿಯವರೆಗೆ ಎಲ್ಲವೂ ಸುಸೂತ್ರವಾಗಿ ನಡೆದುಕೊಂಡು ಬಂದಿತ್ತು. ತೆರೆದಿದೆ ಮನೆ ಓ ಬಾ ಅತಿಥಿ ಎಂದರೂ ಯಾರೂ ಬಂದಿರಲಿಲ್ಲ.
ಆದರೆ, ಪ್ರತಿದಿನ ಸೂರ್ಯ ಪೂರ್ವ ದಿಕ್ಕಿನಲ್ಲೇ ಹುಟ್ಟುತ್ತಾನಾದರೂ, ಎಲ್ಲ ದಿನವೂ ಒಂದೇ ರೀತಿಯಿರುವುದಿಲ್ಲವಲ್ಲ? ಇಂದಿನ ಬೆಳಗಿನ ಮುಹೂರ್ತವನ್ನು ಆಯ್ದುಕೊಂಡ ಕಿಲಾಡಿ ಕಳ್ಳನೊಬ್ಬ, ಉಳಿದಿಬ್ಬರು ಮಲಗಿದ ಕೋಣೆಗೇ ನುಗ್ಗಿ ಸದ್ದಿಲ್ಲದಂತೆ ಲ್ಯಾಪ್ ಟಾಪ್ ಎಗರಿಸಿಕೊಂಡು ಹೋಗಿದ್ದಾನೆ. ಬೆಳಕು ಹರಿದು ಕಣ್ಣು ಉಜ್ಜುವಾಗ ಇವರಿಗೆ ಜ್ಞಾನೋದಯವಾಗಿದೆ.
ಹೀಗಿದೆ ನೋಡಿ ನಮ್ಮ ಬೆಂಗಳೂರಿನ ಬ್ರಹ್ಮಚಾರಿಗಳ ಜೀವನ. ಇದು ಇವರ ಕಥೆ ಮಾತ್ರವಲ್ಲ. ಕೆಲಸಕ್ಕೆಂದು ರಾಜ್ಯದ ಅನೇಕ ಕಡೆಗಳಿಂದ ಗುಳೆಯೆದ್ದು ಬಂದಿರುವ ಅನೇಕರ ಕಥೆಯೂ ಇದೇ ರೀತಿಯಾಗಿರಬಹುದು. ಈಗ ಎಚ್ಚೆತ್ತುಕೊಳ್ಳುವ ಸರದಿ ಯುವ ಬ್ಯಾಚುಲರ್ ಗಳದ್ದು.



Click it and Unblock the Notifications