Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಫೇಸ್ಬುಕ್ಕಲ್ಲಿ ಕಾವಿ ತೊಟ್ಟ ನೆಟ್-ಸ್ಯಾವಿ ಸ್ವಾಮೀಜಿಗಳು

ಮರೆತೇಹೋಗಿದ್ದ ಚಡ್ಡಿ ಗೆಳೆಯರು ಅಚಾನಕ್ಕಾಗಿ ಸಿಗುತ್ತಾರೆ. ಎಂದೂ ಭೇಟಿಯಾಗಿರದ ಎರಡು ಜೀವಗಳು ಫೇಸ್ಬುಕ್ ಮುಖಾಂತರ ಒಂದಾಗಿರುತ್ತವೆ. ಎರಡು ದೇಹ ಒಂದು ಜೀವ ಎಂಬಂತಿದ್ದ ಜೋಡಿಗಳ ರಹಸ್ಯಗಳೆಲ್ಲ ಇಲ್ಲಿ ಬಯಲಾಗಿವೆ, ವಿಚ್ಛೇದನಗಳಾಗಿವೆ.
ಒಟ್ಟಿನಲ್ಲಿ, ಒಂದು ಪುಟ್ಟ ಜಗತ್ತೇ ಇಲ್ಲಿ ಮನೆಮಾಡಿಕೊಂಡಿದೆ. ನೆಟ್ ಜೊತೆ ಕೊಂಡಿಹಾಕಿಕೊಂಡಿರುವ ಮನುಜರ ಅರ್ಧ ಜೀವನ ಇಲ್ಲೇ ಕಳೆದುಹೋಗಿರುತ್ತದೆ. ಇಲ್ಲಿ ಉಚ್ಚ ನೀಚ, ಮೇಲು ಕೀಳು, ಬಡವ ಬಲ್ಲಿದ, ಮಾನವ ದಾನವ, ಆ ಜಾತಿ ಈ ಜಾತಿ ಎಂಬ ತಾರತಮ್ಯವಿಲ್ಲ.
ಇಲ್ಲಿನ ಜನರದ್ದು ಒಂದು ಜಾತಿ, ಒಂದೇ ಕುಲ. ಅದು ಇಂಟರ್ನೆಟ್ಟಿಗರ ಕುಲ. ಕೀಬೋರ್ಡ್ ಕುಟ್ಟಲು ಕಲಿತ ಮಕ್ಕಳು ಸೇರಿಕೊಂಡಿದ್ದಾರೆ. ಕೊನೆಯ ಸಂದೇಶ ಟೈಪಿಸಿ ಪ್ರಾಣ ಬಿಟ್ಟವರಿದ್ದಾರೆ. ತೋಚಿದ್ದನ್ನು ಬರೆಯಲು ಮತ್ತು ಬರೆದಿದ್ದನ್ನು ಇತರರಿಗೆ ತಲುಪಿಸಲು ದಕ್ಕಿರುವ ಅದ್ಭುತವಾದ ವೇದಿಕೆ.
ಇದೇ ವೇದಿಕೆಗೆ ನಮ್ಮ ಕನ್ನಡ ನಾಡಿನ ಅನೇಕ ಮಠಗಳ ಸ್ವಾಮೀಜಿಗಳು ಬಂದು ಸೇರಿಕೊಂಡಿದ್ದಾರೆ. ಇಡೀ ಜಗತ್ತಿನ ಮಾನವ ಕುಲವನ್ನು ನೆಟ್ ಚಟುವಟಿಕೆಗಳು ಮುಖಾಂತರ ತಲುಪುತ್ತಿದ್ದಾರೆ. ಫೇಸ್ಬುಕ್ ಖಾತೆಯನ್ನು ಅವರೇ ಸೃಷ್ಟಿಸಿದ್ದಾರೋ, ಅವರ ಭಕ್ತಾದಿಗಳು ಸೃಷ್ಟಿಸಿದ್ದಾರೋ...
ಅಂತೂ ಫೇಸ್ಬುಕ್ನಲ್ಲಿ ಸ್ವಾಮೀಜಿಗಳೇನಕರು ಮಠ, ಅನುಭವ ಮಂಟಪವನ್ನು ಕಟ್ಟಿಕೊಂಡಿದ್ದಾರೆ. ಇಂತಿರುವ ಕಾವಿ ತೊಟ್ಟ ನೆಟ್-ಸ್ಯಾವಿ ಸ್ವಾಮೀಜಿಗಳ ಫೇಸ್ ಬುಕ್ ತಾಣವನ್ನು ಪರಿಚಯಿಸುವ ಸರಣಿ ಲೇಖನ ಆರಂಭವಾಗಲಿದೆ, ನಿರೀಕ್ಷಿಸಿ.



Click it and Unblock the Notifications